Get Updates
Get notified of breaking news, exclusive insights, and must-see stories!
Live

Economic Survey 2022 Live Updates: ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆ ಮಂಡಿಸಿದ ಹಣಕಾಸು ಸಚಿವೆ

ನವದೆಹಲಿ, ಜನವರಿ 31: ಕೇಂದ್ರ ಸರ್ಕಾರದ 2022ನೇ ವರ್ಷದ ಬಜೆಟ್‌ನ ಅಧಿವೇಶನವು ಜನವರಿ 31ರಿಂದ ಆರಂಭವಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರವು ಈ ಬಜೆಟ್‌ ಬಹಳ ದೊಡ್ಡ ಸವಾಲು ಕೂಡಾ ಹೌದು. ಮೋದಿ ಸರ್ಕಾರಕ್ಕೆ, ಉದ್ಯೋಗಗಳನ್ನು ಸೃಷ್ಟಿಸುವುದು ಈ ಸಮಯದ ದೊಡ್ಡ ಸವಾಲಾಗಿದೆ. ಈ ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿ ಪ್ರಮುಖ ಆದ್ಯತೆ ಆಗಿರುವ ಸಾಧ್ಯತೆ ಇದೆ. ಕೊರೊನಾ ಸೋಂಕು ಹೆಚ್ಚಳ ಆಗುತ್ತಿರುವುದು ಆರ್ಥಿಕತೆಗೆ ಮತ್ತೆ ಹೊಡೆತ ನೀಡಿದೆ.

ಈಗ, ಭಾರತದ ಮಧ್ಯಮ ವರ್ಗವು ಸೀತಾರಾಮನ್‌ರ ನಾಲ್ಕನೇ ಬಜೆಟ್‌ನಲ್ಲಿ ಉದ್ಯೋಗಗಳು, ಆರೋಗ್ಯ ರಕ್ಷಣೆ ಮತ್ತು ಶಿಕ್ಷಣದ ಮೇಲಿನ ರಿಯಾಯಿತಿಗಳು, ತೆರಿಗೆ ವಿನಾಯಿತಿಗಳು ಮತ್ತು ಗಗನಕ್ಕೇರುತ್ತಿರುವ ಹಣದುಬ್ಬರವನ್ನು ನಿಭಾಯಿಸುವ ಕ್ರಮಗಳ ಭರವಸೆಯನ್ನು ಹೊಂದಿದ್ದಾರೆ. ಇನ್ನು ಜನವರಿ 31 ಮತ್ತು ಫೆಬ್ರವರಿ 1 ರಂದು 'ಶೂನ್ಯ ವೇಳೆ' ಇರುವುದಿಲ್ಲ. ಓಮಿಕ್ರಾನ್ ಆತಂಕದ ಹಿನ್ನೆಲೆ ಈ ಬಾರಿ ಹಲ್ವಾ ಸಮಾರಂಭವನ್ನು ಕೂಡಾ ನಡೆಸಿಲ್ಲ.

ಅಧಿವೇಶನವು ಎರಡು ಭಾಗಗಳಲ್ಲಿ ನಡೆಯಲಿದೆ ಅಧಿವೇಶನದ ಮೊದಲ ಭಾಗವು ಫೆಬ್ರವರಿ 11, 2022 ರಂದು ಮುಕ್ತಾಯಗೊಳ್ಳುತ್ತದೆ. ಒಂದು ತಿಂಗಳ ಅವಧಿಯ ವಿರಾಮದ ನಂತರ, ಅಧಿವೇಶನದ ಭಾಗ ಎರಡು ಮಾರ್ಚ್ 14, 2022 ರಂದು ಪ್ರಾರಂಭವಾಗುತ್ತದೆ ಮತ್ತು ಏಪ್ರಿಲ್ 8, 2022 ರಂದು ಮುಕ್ತಾಯಗೊಳ್ಳುತ್ತದೆ.

ಸೋಮವಾರ ರಾಷ್ಟ್ರಪತಿ ಕೋವಿಂದ್ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿದ ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಆರ್ಥಿಕ ಸಮೀಕ್ಷೆಯನ್ನು ಪ್ರತಿ ಬಾರಿಯು ಕೇಂದ್ರ ಬಜೆಟ್‌ ಮಂಡನೆಯ ಒಂದು ದಿನಕ್ಕೂ ಮುನ್ನ ಮಂಡನೆ ಮಾಡಲಾಗುತ್ತದೆ. ಇದು ಕಳೆದ ಒಂದು ವರ್ಷದಲ್ಲಿ ಆರ್ಥಿಕತೆಯ ಸ್ಥಿತಿ, ಆರ್ಥಿಕತೆಗೆ ಇರುವ ಪ್ರಮುಖ ಸವಾಲುಗಳು ಮತ್ತು ಅವುಗಳ ಪರಿಹಾರದ ಬಗ್ಗೆ ವಿವರಣೆಯನ್ನು ಹೊಂದಿರುತ್ತದೆ.

Budget 2022: FM Nirmala Sitharaman tabled Economic Survey 2021-22 Live Updates and Highlights in Kannada

Jan 31, 2022, 5:11 pm IST

2022-23ರಲ್ಲಿ ವ್ಯಾಕ್ಸಿನೇಷನ್‌ಗಳು, ಪೂರೈಕೆ-ಬದಿಯ ಸುಧಾರಣೆಗಳಿಂದ ಲಾಭ, ನಿಯಂತ್ರಣ ಸರಾಗಗೊಳಿಸುವಿಕೆ, ದೃಢವಾದ ರಫ್ತು ಬೆಳವಣಿಗೆ ಮತ್ತು ಬಂಡವಾಳದ ವೆಚ್ಚ ಹೆಚ್ಚಿಸಲು ಹಣಕಾಸಿನ ಸ್ಥಳಾವಕಾಶದ ಲಭ್ಯತೆಯಲ್ಲಿ ಬೆಳವಣಿಗೆಯು ವ್ಯಾಪಕವಾಗಿದೆ: ಪ್ರಧಾನ ಆರ್ಥಿಕ ಸಲಹೆಗಾರ ಸಂಜೀವ್ ಸನ್ಯಾಲ್
Jan 31, 2022, 4:24 pm IST

ಪ್ರವಾಸೋದ್ಯಮ, ಪ್ರಯಾಣ ಮತ್ತು ಹೋಟೆಲ್‌ಗಳನ್ನು ಒಳಗೊಂಡಿರುವ ಸೇವಾ ವಲಯದ ವಿಭಾಗವು ಸಾಂಕ್ರಾಮಿಕ ರೋಗದ ಮೊದಲಿದ್ದ ಸ್ಥಳಕ್ಕಿಂತ ಇನ್ನೂ ಶೇ.8.5%ರಷ್ಟು ಇಳಿಕೆಯಾಗಿದೆ: ಪ್ರಧಾನ ಆರ್ಥಿಕ ಸಲಹೆಗಾರ ಸಂಜೀವ್ ಸನ್ಯಾಲ್
Jan 31, 2022, 4:23 pm IST

ಆರ್ಥಿಕ ಸಮೀಕ್ಷೆ 2021-2022 ಅನ್ನು ಪ್ರಧಾನ ಆರ್ಥಿಕ ಸಲಹೆಗಾರ ಸಂಜೀವ್ ಸನ್ಯಾಲ್ ಮತ್ತು ಅವರ ಸಲಹೆಗಾರರ ತಂಡ ಸಂಗ್ರಹಿಸಿದೆ: ಸಿಇಎ ಡಾ ವಿ ಅನಂತ ನಾಗೇಶ್ವರನ್.
Jan 31, 2022, 4:22 pm IST

ಹಿಂದಿನ ವರ್ಷದಲ್ಲಿ ಶೇ.7.3%ರಷ್ಟು ಸಂಕೋಚನದ ನಂತರ ಆರ್ಥಿಕತೆಯು ಈ ವರ್ಷ ಶೇ.9.2%ರಷ್ಟು ಬೆಳವಣಿಗೆಯಾಗಿದೆ ಎಂದು ಅಂದಾಜಿಸಲಾಗಿದೆ: ಪ್ರಧಾನ ಆರ್ಥಿಕ ಸಲಹೆಗಾರ ಸಂಜೀವ್ ಸನ್ಯಾಲ್
Jan 31, 2022, 4:21 pm IST

2021-22ರಲ್ಲಿ ಸಾಂಕ್ರಾಮಿಕ ಪೂರ್ವದ ಮಟ್ಟಕ್ಕೆ ಆರ್ಥಿಕ ಚಟುವಟಿಕೆಗಳಲ್ಲಿ ಪುನಶ್ಚೇತನ ಕಂಡುಬಂದಿದೆ. ಎರಡನೇ ಕೋವಿಡ್ ಅಲೆಯಲ್ಲಿ ಆರೋಗ್ಯದ ವೆಚ್ಚವು ಹೆಚ್ಚು ತೀವ್ರವಾಗಿದ್ದರೂ, ಅದರ ಆರ್ಥಿಕ ವೆಚ್ಚವು ತುಂಬಾ ಸೌಮ್ಯವಾಗಿತ್ತು: ಪ್ರಧಾನ ಆರ್ಥಿಕ ಸಲಹೆಗಾರ ಸಂಜೀವ್ ಸನ್ಯಾಲ್
Jan 31, 2022, 3:24 pm IST

ರಾಜ್ಯಸಭೆ ಕಲಾಪವನ್ನು ಫೆಬ್ರವರಿ 1, 2022ಕ್ಕೆ ಮುಂದೂಡಲಾಗಿದೆ. "ಫೆ.1ರಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆ ಮುಗಿದ ಒಂದು ಗಂಟೆಯ ನಂತರ ರಾಜ್ಯಸಭೆಯ ಅಧಿವೇಶನ ಪ್ರಾರಂಭವಾಗುತ್ತದೆ," ಎಂದು ರಾಜ್ಯಸಭಾ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು ಹೇಳಿದ್ದಾರೆ.
Jan 31, 2022, 2:56 pm IST

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣದಲ್ಲಿ 2014 ರಿಂದ ಸರ್ಕಾರದ ಸಾಧನೆಗಳನ್ನು ಮಾತ್ರ ಎತ್ತಿ ತೋರಿಸಿದ್ದಾರೆ. ಚೀನಾದ ಆಕ್ರಮಣ (ಎಲ್‌ಎಸಿಯಲ್ಲಿ), ಹಣದುಬ್ಬರ, ನಿರುದ್ಯೋಗ, ರೈಲ್ವೆ ನೇಮಕಾತಿಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಮೋದಿ ಭಾಷಣದಲ್ಲಿ ಗಣನೀಯ ವಿಚಾರ ಏನೂ ಇರಲಿಲ್ಲ. ಇದು ಸರ್ಕಾರದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ: ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ
Jan 31, 2022, 2:28 pm IST

ಮಧ್ಯಾಹ್ನ 3.30ಕ್ಕೆ ಆರ್ಥಿಕ ಸಮೀಕ್ಷೆಯನ್ನು ಪ್ರಕಟಿಸಲಾಗುತ್ತದೆ.
Jan 31, 2022, 2:17 pm IST

2022ನೇ ಸಾಲಿನಲ್ಲಿ ದೇಶದಲ್ಲಿ ಕೃಷಿ ಕ್ಷೇತ್ರದ ಬೆಳವಣಿಗೆ ದರ ಶೇಕಡ 3.9 ಹಾಗೂ ಕೈಗಾರಿಕಾ ಕ್ಷೇತ್ರದ ಬೆಳವಣಿಗೆ ದರ ಶೇಕಡ 11.8 ಆಗಿರಲಿದೆ ಎಂದು ಆರ್ಥಿಕ ಸಮೀಕ್ಷೆಯು ಅಂದಾಜು ಮಾಡಿದೆ.
Jan 31, 2022, 1:40 pm IST

ಇಂದು ಸಂಜೆ 5 ಗಂಟೆಗೆ ಸಂಸತ್ತಿನ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಕಚೇರಿಯಲ್ಲಿ ಕಾಂಗ್ರೆಸ್ ಲೋಕಸಭಾ ಸಂಸದರ ಸಭೆ ನಡೆಯಲಿದೆ.
Jan 31, 2022, 1:21 pm IST

ಆರ್ಥಿಕ ಸಮೀಕ್ಷೆಯು ಮುಂದಿನ ಹಣಕಾಸು ವರ್ಷ 2022-23 ಜಿಡಿಪಿ ಬೆಳವಣಿಗೆ ದರವನ್ನು ಶೇಕಡ 8-8.5ರಲ್ಲಿ ಇರಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಥಿಕತೆಯು ಶೇ.9.2 ರಷ್ಟು ಬೆಳವಣಿಗೆಯಾಗಲಿದೆ ಎಂದು ಅಂದಾಜಿಸಲಾಗಿದೆ.
Jan 31, 2022, 1:19 pm IST

ಲೋಕಸಭೆಯನ್ನು ನಾಳೆ ಫೆಬ್ರವರಿ 1, 2022 ಕ್ಕೆ ಮುಂದೂಡಲಾಗಿದೆ.
Jan 31, 2022, 1:05 pm IST

ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆ ಮಂಡಿಸಿದ ಹಣಕಾಸು ಸಚಿವೆ
Jan 31, 2022, 12:51 pm IST

ಆರ್ಥಿಕ ಸಮೀಕ್ಷೆಯನ್ನು ಶೀಘ್ರದಲ್ಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
Jan 31, 2022, 12:25 pm IST

ಮೊದಲ ದಿನ ಸಂಸತ್ತಿನಲ್ಲಿ ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಸಂಸದರು ಹಾಜರಿದ್ದಾರೆ.
Jan 31, 2022, 12:08 pm IST

ರಾಷ್ಟ್ರಪತಿ ಭಾಷಣ ಮುಕ್ತಾಯ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.
Jan 31, 2022, 12:07 pm IST

ನಾವು ಅಫ್ಘಾನಿಸ್ತಾನದಲ್ಲಿ ಅಲ್ಪಸಂಖ್ಯಾತರಿಗೆ ಸಹಾಯ ಮಾಡಿದ್ದೇವೆ: ರಾಮನಾಥ್ ಕೋವಿಂದ್
Jan 31, 2022, 12:07 pm IST

ಸರ್ಕಾರವು 21 ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಗಳಿಗೆ ಅಧಿಕಾರ ನೀಡಿದೆ: ರಾಷ್ಟ್ರಪತಿ
Jan 31, 2022, 12:06 pm IST

ಭಾರತವು ಈಗ ವಿಶ್ವದ ಅಗ್ರ ಮೊಬೈಲ್ ಉತ್ಪಾದನಾ ಕೇಂದ್ರಗಳಲ್ಲಿ ಒಂದಾಗಿದೆ: ರಾಷ್ಟ್ರಪತಿ
Jan 31, 2022, 12:00 pm IST

ತ್ರಿವಳಿ ತಲಾಖ್ ಅನ್ನು ಅಪರಾಧ ಎಂದು ಪರಿಗಣಿಸುವ ಮೂಲಕ ಸರ್ಕಾರವು ಮುಸ್ಲಿಂ ಮಹಿಳೆಯರ ಜೊತೆ ನಿಂತಿದೆ. ಮುಸ್ಲಿಮ್ ಮಹಿಳೆಯರು ಮೆಹ್ರಾಮ್ (ಪುರುಷರು) ಜೊತೆ ಹಜ್‌ಗೆ ತೆರಳುವ ನಿಷೇಧವನ್ನು ಸರ್ಕಾರ ತೆಗೆದುಹಾಕಿದೆ: ರಾಷ್ಟ್ರಪತಿ ರಾಮನಾಥ್ ಕೋವಿಂದ್
Jan 31, 2022, 11:49 am IST

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತದ ಯುವ ಶಕ್ತಿಯ ಸಾಮರ್ಥ್ಯವನ್ನು ನಾವು ನೋಡಿದ್ದೇವೆ. ಭಾರತ ಅತ್ಯುತ್ತಮ ಪ್ರದರ್ಶನ ನೀಡಿ 7 ಪದಕಗಳನ್ನು ಗೆದ್ದಿದೆ. ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲೂ ಭಾರತ 19 ಪದಕ ಗೆದ್ದು ದಾಖಲೆ ನಿರ್ಮಿಸಿದೆ: ರಾಷ್ಟ್ರಪತಿ
Jan 31, 2022, 11:47 am IST

ನಮ್ಮ ರೈತರು ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವನ್ನು ಹೊಂದಿದ್ದಾರೆ. ಸರ್ಕಾರ ಎಂದಿಗೂ ಸಣ್ಣ ಪ್ರಮಾಣದ ರೈತರಿಗೆ ಅಧಿಕ ಆದ್ಯತೆ ನೀಡಿದೆ. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ 11 ಕೋಟಿ ರೈತರ ಕುಟುಂಬಗಳು ಪ್ರಯೋಜನ ಪಡೆದಿವೆ: ರಾಷ್ಟ್ರಪತಿ ರಾಮನಾಥ್ ಕೋವಿಂದ್
Jan 31, 2022, 11:44 am IST

ಎಲ್ಲಾ 33 ಸೈನಿಕ ಶಾಲೆಗಳು ಈಗ ಹೆಣ್ಣುಮಕ್ಕಳಿಗೂ ಪ್ರವೇಶ ನೀಡಲು ಪ್ರಾರಂಭಿಸಿರುವುದು ಸಂತೋಷದ ವಿಷಯ. ಜೂನ್ 2022 ರಲ್ಲಿ ಮಹಿಳಾ ಕೆಡೆಟ್‌ಗಳ ಮೊದಲ ಬ್ಯಾಚ್ ಎನ್‌ಡಿಎಗೆ ಬರಲಿದೆ: ರಾಷ್ಟ್ರಪತಿ ಕೋವಿಂದ್
Jan 31, 2022, 11:43 am IST

ಗಂಡು-ಹೆಣ್ಣು ಮಕ್ಕಳಿಗೆ ಸಮಾನ ಸ್ಥಾನಮಾನ ಕಲ್ಪಿಸಿ ಸರ್ಕಾರವು ಹೆಣ್ಣು ಮಕ್ಕಳಿಗೆ ವಿವಾಹವಾಗಲು ಕನಿಷ್ಠ 18 ವರ್ಷವನ್ನು ಹೆಚ್ಚಿಸಿ 21 ವರ್ಷಕ್ಕೆ ತರುವ ಮಸೂದೆಯನ್ನು ಮಂಡಿಸಿದೆ: ರಾಷ್ಟ್ರಪತಿ ರಾಮನಾಥ್ ಕೋವಿಂದ್
Jan 31, 2022, 11:40 am IST

ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿ ಸ್ಥಳೀಯ ಭಾಷೆಗಳನ್ನು ಉತ್ತೇಜಿಸಲಾಗುತ್ತಿದೆ. ಪ್ರಮುಖ ಪರೀಕ್ಷೆಗಳಲ್ಲೂ ಭಾರತೀಯ ಭಾಷೆಗಳಲ್ಲಿ ನಡೆಸಲು ಒತ್ತು ನೀಡಲಾಗುತ್ತಿದೆ. ಈ ವರ್ಷ 10 ರಾಜ್ಯಗಳಲ್ಲಿ 19 ಎಂಜಿನಿಯರಿಂಗ್ ಕಾಲೇಜುಗಳು 6 ಭಾರತೀಯ ಭಾಷೆಗಳಲ್ಲಿ ಇರಲಿದೆ: ರಾಷ್ಟ್ರಪತಿ ರಾಮನಾಥ್ ಕೋವಿಂದ್
Jan 31, 2022, 11:38 am IST

ಮಹಿಳಾ ಸಬಲೀಕರಣವು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಉಜ್ವಲ ಯೋಜನೆಯ ಯಶಸ್ಸಿಗೆ ನಾವೇ ಸಾಕ್ಷಿಯಾಗಿದ್ದೇವೆ. ಮುದ್ರಾ ಯೋಜನೆಯ ಮೂಲಕ, ಮಹಿಳೆಯರ ಉದ್ಯಮಶೀಲತೆ ಮತ್ತು ಕೌಶಲ್ಯಕ್ಕೆ ಉತ್ತೇಜನ ನೀಡಲಾಗಿದೆ. 'ಬೇಟಿ ಬಚಾವೋ, ಬೇಟಿ ಪಢಾವೋ' ಮೂಲಕ ಮಹಿಳೆಯರಿಗೆ ಉತ್ತೇಜನ ನೀಡಲಾಗಿದೆ: ರಾಷ್ಟ್ರಪತಿ
Jan 31, 2022, 11:34 am IST

ಮಹಿಳೆಯರು ಈಗ ಎನ್‌ಡಿಎಗೆ ಪ್ರವೇಶ ಪಡೆಯುತ್ತಿದ್ದಾರೆ. ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ: ರಾಷ್ಟ್ರಪತಿ
Jan 31, 2022, 11:33 am IST

ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಪ್ರಧಾನಮಂತ್ರಿ ಸ್ವಾನಿಧಿ ಯೋಜನೆಯನ್ನೂ ನಡೆಸಲಾಗುತ್ತಿದೆ. ಇಲ್ಲಿಯವರೆಗೆ 28 ಲಕ್ಷ ಬೀದಿಬದಿ ವ್ಯಾಪಾರಿಗಳು 2900 ಕೋಟಿ ರೂ.ಗಳನ್ನು ಪಡೆದಿದ್ದಾರೆ. ಸರ್ಕಾರ ಈಗ ಈ ಮಾರಾಟಗಾರರನ್ನು ಆನ್‌ಲೈನ್ ಕಂಪನಿಗಳೊಂದಿಗೆ ಸಂಪರ್ಕಿಸುತ್ತಿದೆ: ರಾಷ್ಟ್ರಪತಿ ರಾಮನಾಥ್ ಕೋವಿಂದ್
Jan 31, 2022, 11:31 am IST

ನಮ್ಮ ಸರ್ಕಾರ ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ 44 ಕೋಟಿ ಬಡ ನಾಗರಿಕರನ್ನು ಬ್ಯಾಂಕಿಂಗ್ ವ್ಯವಸ್ಥೆಗೆ ಪರಿಚಯಿಸಿದೆ. ಈ ಮೂಲಕ ಕೋಟಿಗಟ್ಟಲೆ ಫಲಾನುಭವಿಗಳು ನೇರ ನಗದು ವರ್ಗಾವಣೆಯ ಪ್ರಯೋಜನವನ್ನು ಕಲ್ಪಿಸಿದೆ: ರಾಮನಾಥ್ ಕೋವಿಂದ್
Jan 31, 2022, 11:28 am IST

ವಿಶ್ವದ ಅತೀ ದೊಡ್ಡ ಪಡಿತರ ವಿತರಣಾ ಕಾರ್ಯಕ್ರಮ: ರಾಷ್ಟ್ರಪತಿ

ಯಾರೂ ಹಸಿವಿನಿಂದ ಇರಬಾರದು ಎಂಬ ನಿಟ್ಟಿನಲ್ಲಿ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಭಾಗವಾಗಿ ಪ್ರತಿ ತಿಂಗಳು ಬಡವರಿಗೆ ಉಚಿತ ಪಡಿತರವನ್ನು ವಿತರಿಸುತ್ತಿದೆ. ಇಂದು ಭಾರತವು ವಿಶ್ವದ ಅತಿದೊಡ್ಡ ಆಹಾರ ವಿತರಣಾ ಕಾರ್ಯಕ್ರಮವಾಗಿದೆ. ಪಡಿತರ ವಿತರಣೆಯನ್ನು ಮಾರ್ಚ್ 2022 ರವರೆಗೆ ವಿಸ್ತರಿಸಲಾಗಿದೆ: ರಾಷ್ಟ್ರಪತಿ ರಾಮನಾಥ್ ಕೋವಿಂದ್
READ MORE

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+