ಭಾರತ@75ನಿಂದ ಭಾರತ@100ಗೆ ಆರ್ಥಿಕತೆ ಪಥ ತೋರುವ ಬಜೆಟ್
"ನಾವು ಆಜಾದಿ ಕಾ ಅಮೃತ ಮಹೋತ್ಸವ ಆಚರಿಸುತ್ತಿದ್ದೇವೆ ಮತ್ತು ನಾವು ಅಮೃತ ಕಾಲ ಅಂದರೆ ಭಾರತ ಸ್ವಾತಂತ್ರ್ಯಗಳಿಸಿ 100 ವರ್ಷ ಪೂರೈಸುವ ಮುಂದಿನ 25 ವರ್ಷಗಳಿಗೆ ಪ್ರವೇಶಿಸಿದ್ದೇವೆ" ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿಂದು ಕೇಂದ್ರ ಬಜೆಟ್ 2022-23 ಮಂಡಿಸುತ್ತಾ ಹೇಳಿದರು. ಭಾರತ@75 ನಿಂದ ಭಾರತ @100ಗೆ ಮುನ್ನಡೆಯಲು ಮುಂದಿನ 25 ವರ್ಷಗಳ ಅಮೃತ ಕಾಲದಲ್ಲಿ ಆರ್ಥಿಕತೆ ಮುನ್ನಡೆಸಲು ಈ ಬಜೆಟ್ ಭದ್ರ ಬುನಾದಿ ಮತ್ತು ನೀಲನಕ್ಷೆ ನೀಡಲಿದೆ ಎಂದು ಅವರು ಹೇಳಿದರು.
ಅಮೃತ ಕಾಲದ ಮುನ್ನೋಟ
ಎಲ್ಲರ ಸಮಗ್ರ ಕಲ್ಯಾಣಕ್ಕೆ ಒತ್ತು ನೀಡಲಾಗುತ್ತಿದ್ದು, ಅದರಲ್ಲಿ ಸೂಕ್ಷ್ಮ ಆರ್ಥಿಕ ಮಟ್ಟಕ್ಕೆ ಪೂರಕವಾಗಿ ಸೂಕ್ಷ್ಮ ಆರ್ಥಿಕ ಪ್ರಗತಿಗೆ ಕ್ರಮ ಕೈಗೊಳ್ಳಲಾಗುವುದು; ಡಿಜಿಟಲ್ ಆರ್ಥಿಕತೆ ಮತ್ತು ಫಿನ್ ಟೆಕ್(ಹಣಕಾಸು ತಂತ್ರಜ್ಞಾನ)ಗೆ ಉತ್ತೇಜನ; ತಂತ್ರಜ್ಞಾನ ಆಧಾರಿತ ಅಭಿವೃದ್ಧಿ; ಇಂಧನ ಪರಿವರ್ತನೆ ಮತ್ತು ಹವಾಮಾನ ವೈಪರೀತ್ಯ ಹಾಗೂ ಖಾಸಗಿ ಹೂಡಿಕೆಯೊಂದಿಗೆ ಸಾರ್ವಜನಿಕ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವ ಜತೆಗೆ, ಖಾಸಗಿ ಹೂಡಿಕೆಯಲ್ಲಿ ಜನರನ್ನು ಸೆಳೆಯುವುದು, ಆ ಮೂಲಕ ಮುಂದಿನ 25 ವರ್ಷಗಳಲ್ಲಿ ಕೆಲವು ಗುರಿಗಳನ್ನು ಸಾಧಿಸುವ ಮೂಲಕ ನಮ್ಮ ಮುನ್ನೋಟವನ್ನು ತಲುಪುವುದಾಗಿದೆ ಎಂದು ಸಚಿವರು ಹೇಳಿದರು.
Budget 2022; ಪಿಎಂ ಗತಿಶಕ್ತಿ ರಾಷ್ಟ್ರೀಯ ಯೋಜನೆ ವಿವರಗಳು
ನಾಲ್ಕು ಆದ್ಯತೆಗಳು:
Recommended Video
ಪಿಎಂ ಗತಿಶಕ್ತಿ; ಸಮಗ್ರ ಅಭಿವೃದ್ಧಿ; ಉತ್ಪಾದನೆ ವೃದ್ಧಿ ಮತ್ತು ಹೂಡಿಕೆ; ಸೌರಶಕ್ತಿಯ ಅವಕಾಶಗಳ ಬಳಕೆ; ಇಂಧನ ಪರಿವರ್ತನೆ ಮತ್ತು ಹವಾಮಾನ ವೈಪರೀತ್ಯ ಮತ್ತು ಹಣಕಾಸು ಹೂಡಿಕೆ ಈ ನಾಲ್ಕಕ್ಕೆ ಭವಿಷ್ಯದ ಮತ್ತು ಸಮಗ್ರ ಬಜೆಟ್ ಗೆ ಆದ್ಯತೆ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಪ್ರಗತಿಗಾಗಿ ಬಜೆಟ್:
ಪ್ರಸಕ್ತ ಹಣಕಾಸು ವರ್ಷ ಶೇ.9.2ರಷ್ಟು ಪ್ರಗತಿ ಅಂದಾಜಿಸಲಾಗಿದೆ ಮತ್ತು ಎಲ್ಲಾ ಆರ್ಥಿಕತೆಗಳಿಗೆ ಹೋಲಿಸಿದರೆ ಭಾರತದ ಪ್ರಗತಿ ಅತಿ ಹೆಚ್ಚಿನದಾಗಿದೆ ಎಂದು ಹಣಕಾಸು ಸಚಿವರು ಪ್ರಮುಖವಾಗಿ ಪ್ರಸ್ತಾಪಿಸಿದರು. ಈ ದೂರದೃಷ್ಟಿಯ ಮತ್ತು ಸಮಗ್ರ ಬಜೆಟ್ ಪ್ರಗತಿಗೆ ಒತ್ತು ನೀಡುವುದನ್ನು ಮುಂದುವರಿಸಿದೆ. ಇದರಿಂದ ನಮ್ಮ ಯುವಜನತೆ, ಮಹಿಳೆಯರು, ರೈತರು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೇರ ಲಾಭ ಖಾತ್ರಿಯಾಗಿದೆ ಎಂದರು. ಪಿಎಂ ಗತಿಶಕ್ತಿ ಆಧುನಿಕ ಮೂಲಸೌಕರ್ಯಕ್ಕೆ ದೊಡ್ಡ ಸಾರ್ವಜನಿಕ ಹೂಡಿಕೆಗಳಿಗೆ ಮಾರ್ಗದರ್ಶಿಯಾಗಲಿದೆ. ಇದರಿಂದ ಬಹು ಮಾದರಿ ಆಯಾಮದ ಸಮನ್ವಯದೊಂದಿಗೆ ಹೆಚ್ಚಿನ ಅನುಕೂಲವಾಗಲಿದೆ. ದೇಶದ ಸದೃಢ ಸ್ಥಿತಿ ಸ್ಥಾಪಕತ್ವ ಆರ್ಥಿಕತೆಯ ಚೇತರಿಕೆ ಮತ್ತು ಕ್ಷಿಪ್ರ ಪುಟಿದೇಳುವುದರಿಂದ ಪ್ರತಿಫಲನಗೊಂಡಿದೆ ಎಂದು ಅವರು ಹೇಳಿದರು.

ಲಸಿಕೀಕರಣ ಅಭಿಯಾನದ ವೇಗ ಮತ್ತು ವ್ಯಾಪ್ತಿ:
ಲಸಿಕೀಕರಣ ಅಭಿಯಾನದ ವ್ಯಾಪ್ತಿ ಮತ್ತು ವೇಗದ ಕುರಿತಂತೆ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು ಮತ್ತು ಆರೋಗ್ಯ ಮೂಲಸೌಕರ್ಯದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೈಗೊಂಡ ವೇಗದ ಪ್ರಗತಿ ನಾವು ಸವಾಲುಗಳನ್ನು ಎದುರಿಸಲು ಸಹಕಾರಿಯಾಯಿತು ಎಂದರು. ನಾವು ಒಮಿಕ್ರಾನ್ ಅಲೆಯ ನಡುವೆ ಇದ್ದೇವೆ. ಅದರಿಂದ ಪ್ರಕರಣಗಳು ಹೆಚ್ಚುತ್ತಿವೆ. ಆದರೆ ಸೌಮ್ಯ ಲಕ್ಷಣಗಳು ಕಂಡುಬರುತ್ತಿವೆ ಮತ್ತು ಸದೃಢ ಪ್ರಗತಿಯ ಪಯಣ ಮುಂದುವರಿಕೆಗೆ 'ಸಬ್ ಕಾ ಪ್ರಯಾಸ್' ಭಾರತಕ್ಕೆ ಸಹಕಾರಿಯಾಗಲಿದೆ ಎಂದರು. ಬಡವರು ಎಲ್ಲ ಅವಕಾಶಗಳನ್ನು ಬಳಸಿಕೊಳ್ಳುವಂತೆ ಉತ್ತೇಜಿಸುವ ಬಲಿಷ್ಠ ಬದ್ಧತೆಯನ್ನು ವ್ಯಕ್ತಪಡಿಸಿದ ಸಚಿವರು, ನಾನಾ ವರ್ಗದ ಆದಾಯ ಮಿತಿಗೆ ಒಳಪಡುವ ಅತಿದೊಡ್ಡ ಜನಸಂಖ್ಯೆ ಆಗಿರುವ ಮಧ್ಯಮ ವರ್ಗದವರಿಗೆ ಪೂರಕ ಆರ್ಥಿಕ ವ್ಯವಸ್ಥೆ ಹಾಗೂ ಅಗತ್ಯ ನೆರವು ಒದಗಿಸಲಾಗುವುದು ಎಂದು ಸಚಿವರು ಹೇಳಿದರು.(ಹಣಕಾಸು ಸಚಿವಾಲಯ)
-
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Rama Navami 2026: ಶ್ರೀರಾಮನವಮಿ ದಿನಾಂಕ, ಮುಹೂರ್ತ, ಮಹತ್ವ, ಪೂಜಾ ವಿಧಾನ ಸೇರಿ ಸಂಪೂರ್ಣ ವಿವರ












Click it and Unblock the Notifications