Budget 2023: ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆ ಖರೀದಿಸುವವರಿಗೆ ಶುಭ ಸುದ್ದಿ
ಪ್ರಧಾನ ಮಂತ್ರಿ ಆವಾಸ್ ಯೋಜನೆ ನಿಧಿಯನ್ನು 66% ರಷ್ಟು ಅಂದರೆ 79,000 ಕೋಟಿ ರೂಪಾಯಿಗೆ ಹೆಚ್ಚಿಸಲು ಕೇಂದ್ರವು ನಿರ್ಧರಿಸಿದೆ.
ನವದೆಹಲಿ, ಫೆಬ್ರವರಿ. 01: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರ ಬುಧವಾರ ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2023-24 ಅನ್ನು ಮಂಡಿಸಿದ್ದಾರೆ. ಈ ವೇಳೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆ ಖರೀದಿಸುವವರಿಗೆ ಶುಭ ಸುದ್ದಿ ನೀಡಿದ್ದಾರೆ.
ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ನಿಧಿಯನ್ನು 66% ರಷ್ಟು ಅಂದರೆ 79,000 ಕೋಟಿ ರೂಪಾಯಿಗೆ ಹೆಚ್ಚಿಸಲು ಕೇಂದ್ರವು ನಿರ್ಧರಿಸಿದೆ ಎಂದು ಘೋಷಿಸಿದ್ದಾರೆ.
2022-23ರ ಬಜೆಟ್ನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಲ್ಲರಿಗೂ ವಸತಿ ಎಂಬ ಸರ್ಕಾರದ ಯೋಜನೆಗೆ 48,000 ಕೋಟಿ ರೂಪಾಯಯಿಯನ್ನು ಘೋಷಿಸಿದ್ದಾರೆ.

ಇದೇ ವೇಳೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಗುರುತಿಸಲಾದ ಅರ್ಹ ಫಲಾನುಭವಿಗಳಿಗೆ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ 80 ಲಕ್ಷ ಮನೆಗಳನ್ನು ನೀಡಲಾಗುವುದು, ಅವುಗಳನ್ನ ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದರು.
ಇನ್ನು, ಸೆಪ್ಟೆಂಬರ್ 29, 2022 ರ ಹೊತ್ತಿಗೆ ಎರಡು ಕೋಟಿ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಅಂಕಿಅಂಶಗಳು ಹಂಚಿಕೊಂಡಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿ ಹಣಕಾಸು ವರ್ಷದಲ್ಲಿ ವಿಭಿನ್ನ ಗುರಿಗಳನ್ನು ನಿಗದಿಪಡಿಸುತ್ತವೆ. ವಸತಿ ಯೋಜನೆಯಡಿ ಪಟ್ಟಿ ತಯಾರಿಸುವಾಗ ಫಲಾನುಭವಿಯ ಬಳಿ ಯಾವುದೇ ಮೋಟಾರು ಚಾಲಿತ ದ್ವಿಚಕ್ರ ವಾಹನ ಅಥವಾ ತ್ರಿಚಕ್ರ ವಾಹನ ಇಲ್ಲವೇ ಎಂಬುದರ ಜೊತೆಗೆ ಇತರ ಮಾನದಂಡಗಳನ್ನು ಪರಿಶೀಲಿಸಲಾಗುತ್ತದೆ.
ವರದಿಗಳ ಪ್ರಕಾರ, ಇದುವರೆಗೆ ದೇಶದ ಲಕ್ಷಾಂತರ ಜನರು ಈ ಯೋಜನೆಯ ಲಾಭ ಪಡೆದಿದ್ದಾರೆ. ಈ ಯೋಜನೆಯಡಿ ಗುಡ್ಡಗಾಡು ಪ್ರದೇಶದ ಫಲಾನುಭವಿಗಳಿಗೆ 1.30 ಲಕ್ಷ ರೂಪಾಯಿ ಮತ್ತು ಬಯಲು ಸೀಮೆಯವರಿಗೆ ಮನೆ ನಿರ್ಮಿಸಿಕೊಳ್ಳಲು 1.20 ಲಕ್ಷ ರೂಪಾಯಿ ನೀಡಲಾಗುತ್ತದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications