Budget 2023: ಬಜೆಟ್ ಮಂಡನೆಗೆ ಕೆಂಪು ಬಣ್ಣದ ಸೀರೆಯುಟ್ಟು ಬಂದ ನಿರ್ಮಲಾ ಸೀತಾರಾಮನ್, ಕಾರಣ ಇಲ್ಲಿದೆ
2023 ರ ಕೇಂದ್ರ ಬಜೆಟ್ ಮಂಡಿಸಲಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೆಂಪು ಸೀರೆಯನ್ನು ಧರಿಸಿದ್ದು, ಇದಕ್ಕೂ ಇದೆ ಕಾರಣ. ಮುಂದೆ ಓದಿ.
ನವದೆಹಲಿ, ಫೆಬ್ರವರಿ. 01: ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಈ ಬಾರಿ ಐದನೇ ಬಜೆಟ್ ಮಂಡಿಸಲಿದ್ದಾರೆ. ಪ್ರತಿ ಬಾರಿಯು ತಾವ ಬಜೆಟ್ ಮಂಡನೆಗೆ ಬರುವಾಗ ಕೈಮಗ್ಗದ ಸೀರೆಗಳಲ್ಲಿ ಕಂಗೊಳಿಸುವ ಅವರು ಈ ಬಾರಿ ಕೆಂಪು ಬಣ್ಣದ ಸೀರೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಬಜೆಟ್ ದಿನದಂದು ತಮ್ಮ 5ನೇ ಬಜೆಟ್ ಮಂಡನೆಗೆ ಕಪ್ಪು ಅಂಚಿರುವ, ಚಿನ್ನದ ಬಣ್ಣದ ಎಳೆಗಳಿರುವ ಗಾಢ ಕೆಂಪು ಸೀರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸುಂದರವಾದ ಸೀರೆಯಲ್ಲಿ ನಕ್ಷತ್ರದಂತಹ ಪುಟ್ಟ ಪುಟ್ಟ ವಿನ್ಯಾಸಗಳು ಇದ್ದು, ಸೀರೆಗೆ ಮತ್ತಷ್ಟು ಮೆರುಗು ನೀಡಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕೈಮಗ್ಗ ಸೀರೆಯ ಮೇಲಿನ ಪ್ರೀತಿ ಹೊಸದೇನಲ್ಲ, ಆದರೆ ಬಜೆಟ್ ದಿನದಂದು ಅವರ ಉಡುಗೆಯ ಆಯ್ಕೆಯು ಯಾವಾಗಲೂ ಆಸಕ್ತಿಯ ವಿಷಯವಾಗಿರುತ್ತದೆ. ಈ ದಿನ ಅವರು ಆಯ್ಕೆ ಮಾಡುವ ಬಟ್ಟೆಯ ಬಣ್ಣದಿಂದ ಬಜೆಟ್ನ ಒಟ್ಟಾರೆ ಮನಸ್ಥಿತಿಯ ಬಗ್ಗೆ ಯಾವುದಾದರೂ ಸುಳಿವು ಇರಬಹುದೆ ಎಂದು ಹುಡುಕಲಾಗುತ್ತದೆ.

ಸಾಮಾನ್ಯವಾಗಿ, ಹಣಕಾಸು ಸಚಿವರು ಬಜೆಟ್ ದಿನದಂದು ಗಾಢ ಬಣ್ಣದ ಬಟ್ಟೆಗಳಿಗೆ ಒತ್ತು ನೀಡುತ್ತಾರೆ. ಕಳೆದ ವರ್ಷ, ಅವರು ಬಿಳಿಯ ಬಣ್ಣದ ಬಾರ್ಡರ್ ಇದ್ದ ಮೆರೂನ್ ಕೈಮಗ್ಗದ ಸೀರೆಯನ್ನು ಧರಿಸಿದ್ದರು.
2021 ರಲ್ಲಿ, ನಿರ್ಮಲಾ ಸೀತಾರಾಮನ್ ಕೆಂಪು ಮತ್ತು ಬಿಳಿ ಬಣ್ಣದ ರೇಷ್ಮೆ ಪೊಚಂಪಲ್ಲಿ ಸೀರೆ ಧರಿಸಿದ್ದರು. 2020 ರಲ್ಲಿ, ಬಜೆಟ್ ದಿನದ ಉಡುಪು ನೀಲಿ ಬಣ್ಣದ ಅಂಚು ಹೊಂದಿರುವ ಹಳದಿ ರೇಷ್ಮೆ ಸೀರೆಯಾಗಿತ್ತು. ಹಳದಿ ಬಣ್ಣವನ್ನು ಸಮೃದ್ಧಿ ಎಂದು ಹೇಳಲಾಗುತ್ತದೆ.
ನಿರ್ಮಲಾ ಸೀತಾರಾಮನ್ ಅವರ 2019 ರ ಚೊಚ್ಚಲ ಬಜೆಟ್ ಮಂಡನೆಗೆ ಗುಲಾಬಿ ಬಣ್ಣದ ಗೋಲ್ಡನ್ ಬಾರ್ಡರ್ ಇರುವ ಸೀರೆಯನ್ನು ಧರಿಸಿದ್ದರು.

ಬುಧವಾರ ಬಜೆಟ್ 2023 ಮಂಡನೆಗೆ ಮುಂಚಿತವಾಗಿ, ನಿರ್ಮಲಾ ಸೀತಾರಾಮನ್ ಹಣಕಾಸು ಸಚಿವಾಲಯಕ್ಕೆ ಭೇಟಿ ನೀಡಿದ್ದಾರೆ. ಬಳಿಕ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಕೇಂದ್ರ ಸಂಪುಟ ಸಭೆಯ ನಂತರ ಸಚಿವರು 2023ರ ಬಜೆಟ್ ಅನ್ನು ಬೆಳಗ್ಗೆ 11 ಗಂಟೆಗೆ ಮಂಡಿಸಲಿದ್ದಾರೆ.
ಈ ವರ್ಷದ ಬಜೆಟ್ 2024 ರ ಸಂಸತ್ತಿನ ಚುನಾವಣೆಯ ಮೊದಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೊನೆಯ ಪೂರ್ಣ ಬಜೆಟ್ ಆಗಿದ್ದು ಮಹತ್ವ ಪಡೆದುಕೊಂಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications