2026 ಬಜೆಟ್: 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್ಪ್ರೆಸ್ ಎಂದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026 - 2027ನೇ ಸಾಲಿನ ಕೇಂದ್ರ ಸಾಲಿನ ಬಜೆಟ್ ಅನ್ನು ಸುಧಾರಣಾ ಎಕ್ಸ್ಪ್ರೆಸ್ ಎಂದು ಮೆಚ್ಚುಗೆ ಸೂಚಿಸಿದ್ದಾರೆ. ಈ ಬಾರಿಯ ಬಜೆಟ್ 2047ರ ವಿಕಸಿತ ಭಾರತ್ ಕಡೆಗೆ ಭಾರತದ ಸುಧಾರಣಾ ಎಕ್ಸ್ಪ್ರೆಸ್ಗೆ ಐತಿಹಾಸಿಕ ಮಾರ್ಗಸೂಚಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಈ ಬಾರಿಯ ಬಜೆಟ್ ಹೆಚ್ಚಿನ ಬಂಡವಾಳ ಖರ್ಚು, ಹಣಕಾಸಿನ ಶಿಸ್ತು ಮತ್ತು ಹಣದುಬ್ಬರ ನಿಯಂತ್ರಣದ ಮೂಲಕ ಭಾರತದ ಬೆಳವಣಿಗೆಯನ್ನು ಹೆಚ್ಚಿಸುತ್ತದೆ ಮತ್ತು ಯುವ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿದೆ. ಇನ್ನು ಮುಖ್ಯವಾಗಿ ಈ ಬಾರಿಯ ಬಜೆಟ್ ಭಾರತದ ಸುಧಾರಣಾ ಎಕ್ಸ್ಪ್ರೆಸ್ಗೆ ಮಾರ್ಗಸೂಚಿಯಾಗಿದೆ. ವಿಕಸಿತ ಭಾರತ 2047ರ ದೃಷ್ಟಿಕೋನ ಹಾಗೂ ಪ್ರಗತಿಗೆ ಈ ಬಜೆಟ್ ಮಾರ್ಗಸೂಚಿಯಾಗಿದೆ. ವಿಕಸಿತ ಭಾರತದ ಪರಿಕಲ್ಪನೆಗೆ ಇಂದಿನ ಬಜೆಟ್ ಅಡಿಪಾಯವಾಗಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 9ನೇ ಬಾರಿಗೆ ಬಜೆಟ್ ಭಾಷಣ ಮಾಡುವ ಮೂಲಕ ಹೊಸ ಸಾಧನೆ ಮಾಡಿದ್ದಾರೆ. ಬಜೆಟ್ನಲ್ಲಿ ಘೋಷಿಸಲಾಗಿರುವ ದಿಟ್ಟ, ಪ್ರತಿಭಾನ್ವಿತ ಯುವಕರಿಗೆ ಮುಕ್ತ ಅವಕಾಶವನ್ನು ನೀಡುವ ಅಂಶಗಳು ಯುವ ಸಬಲೀಕರಣಕ್ಕೆ ವೇದಿಕೆಯಾಗಲಿದೆ. ಬಜೆಟ್ ಹಣಕಾಸಿನ ಕೊರತೆಯನ್ನು ಕಡಿಮೆ ಮಾಡುವುದು ಹಾಗೂ ಹಣದುಬ್ಬರವನ್ನು ನಿಯಂತ್ರಣ ಮಾಡುವ ಉದ್ದೇಶಗಳನ್ನು ಒಳಗೊಂಡಿದೆ. ಈ ಬಜೆಟ್ ಭಾರತದ ಜಾಗತಿಕ ಪಾತ್ರವನ್ನು ಮತ್ತಷ್ಟು ಬಲಪಡಿಸುತ್ತದೆ. ಭಾರತದ 140 ಕೋಟಿ ಜನರು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯ ಬಗ್ಗೆ ತೃಪ್ತರಾಗಿದ್ದಾರೆ.
ಅಲ್ಲದೇ ಕೆಲವೇ ದಿನಗಳಲ್ಲಿ ನಾವು ವಿಶ್ವದ ಮೂರನೇ ಅತಿದೊಡ್ಡ ಜಾಗತಿಕ ಆರ್ಥಿಕ ಶಕ್ತಿಯಾಗುವುದನ್ನು ನಿರೀಕ್ಷಿಸುತ್ತಿದ್ದೇವೆ. ಇದು ದೇಶದ ಕೋಟ್ಯಂತರ ಜನರ ಸಂಕಲ್ಪವಾಗಿದೆ. ವಿಶ್ವದ ವಿಶ್ವಾಸಾರ್ಹ, ಪ್ರಜಾಪ್ರಭುತ್ವ ಪಾಲುದಾರರಾಗಿ ಮತ್ತು ವಿಶ್ವಾಸಾರ್ಹ ಗುಣಮಟ್ಟದ ಪೂರೈಕೆದಾರರಾಗಿ, ಭಾರತದ ಪಾತ್ರ ನಿರಂತರವಾಗಿ ವಿಸ್ತರಿಸುತ್ತಲೇ ಇದೆ.
ಇನ್ನು ಭಾರತವೂ ಈಚೆಗೆ ಐರೋಪ್ಯ ಒಕ್ಕೂಟದೊಂದಿಗೆ ಸಹಿ ಹಾಕಿದೆ. ಈ ವ್ಯಾಪಾರ ಒಪ್ಪಂದಗಳ ಗರಿಷ್ಠ ಲಾಭವಾಗಲಿದೆ. ಇದು ಎಲ್ಲಾ ಒಪ್ಪಂದಗಳ ತಾಯಿ, ಭಾರತದ ಯುವಜನರಿಗೆ, ಭಾರತದ ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳಿಗೆ ಲಾಭವಾಗಲಿದೆ. ಈ ನಿಟ್ಟಿನಲ್ಲಿ ಬಜೆಟ್ನಲ್ಲಿ ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದೂ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣದಲ್ಲಿ ಹೇಳಿದ್ದಾರೆ.
ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ
ಇನ್ನು ಈ ಬಾರಿ ಕೇಂದ್ರ ಬಜೆಟ್ನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡಲಾಗಿದೆ. ವಿಶೇಷವಾಗಿ ಈಶಾನ್ಯ ಭಾರತದಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಉತ್ತೇಜಿಸಲು ಮಹತ್ವದ ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಈ ಬಜೆಟ್ನಲ್ಲಿ ವಿಶೇಷವಾಗಿ ಈಶಾನ್ಯ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
The Union Budget reflects the aspirations of 140 crore Indians. It strengthens the reform journey and charts a clear roadmap for Viksit Bharat.#ViksitBharatBudget https://t.co/26hIdizan9
— Narendra Modi (@narendramodi) February 1, 2026
ವಿವಿಧ ರಾಜ್ಯಗಳನ್ನು ಬಲಪಡಿಸುವ ಮೂಲಕ, ಬಜೆಟ್ ಸಮತೋಲಿತ ಮತ್ತು ಸಮಾನ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದೇವೆ. ಮೂಲಸೌಕರ್ಯ ಮತ್ತು ಹಲವಾರು ಪ್ರಮುಖ ಉಪಕ್ರಮಗಳನ್ನು ಅಳವಡಿಸಿಕೊಂಡಿದ್ದೇವೆ. ಹೈಸ್ಪೀಡ್ ರೈಲು ಕಾರಿಡಾರ್ಗಳ ನಿರ್ಮಾಣ ಮಾಡಲಾಗುವುದು. ಟಯರ್ 2 ಮತ್ತು ಟಯರ್ 3 ನಗರಗಳ ಬೆಳವಣಿಗೆಯ ಮೇಲೆ ವಿಶೇಷ ಗಮನ ಹರಿಸುವುದರಿಂದ ರಾಜ್ಯಗಳು ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದೂ ಪ್ರಧಾನಿ ನರೇಂದ್ರ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಬಜೆಟ್ ಲೈವ್ ಜೊತೆಗೆ ವಿಶ್ಲೇಷಣೆಯೂ ಇಲ್ಲಿದೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ (ಫೆ 1) ಸಂಸತ್ತಿನಲ್ಲಿ ಮಂಡಿಸಿದ ಬಜೆಟ್ ಭಾಷಣದ ಲೈವ್ ವಿಡಿಯೊ ಮತ್ತು ತಜ್ಞರ ವಿಶ್ಲೇಷಣೆಗಾಗಿ 'ಒನ್ ಇಂಡಿಯಾ ಕನ್ನಡ' ಯುಟ್ಯೂಬ್ ಚಾನೆಲ್ಗೆ ಭೇಟಿ ನೀಡಿ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications