Budget Session 2025: ಯುವಕರಿಗೆ ಬಂಪರ್, ಐತಿಹಾಸಿಕ ಬಜೆಟ್: ಪ್ರಧಾನಿ ನರೇಂದ್ರ ಮೋದಿ!
Budget Session 2025: ಕೇಂದ್ರ ಬಿಜೆಪಿ ಸರ್ಕಾರವು 2025-26ನೇ ಆರ್ಥಿಕ ಸಾಲಿನ ಬಜೆಟ್ ಮಂಡನೆ ಮಾಡುವುದಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯ ಬಜೆಟ್ ಮಂಡನೆಯ ಬಗ್ಗೆ ಮಾತನಾಡಿದ್ದು. ಈ ಬಾರಿ ಐತಿಹಾಸಿಕ ಬಜೆಟ್ ಮಂಡನೆ ಮಾಡಲಿದ್ದೇವೆ. ಅಲ್ಲದೆ ದೇಶದ ಯುವಕರಿಗೆ ಭರ್ಜರಿ ಗುಡ್ನ್ಯೂಸ್ ಕೊಡಲಿದ್ದೇವೆ ಎಂದು ಅವರು ಹೇಳಿದ್ದಾರೆ. ದೇಶದ ಅಭಿವೃದ್ಧಿಗೆ ಈ ಬಾರಿಯ ಬಜೆಟ್ ಸಹಕಾರಿಯಾಗಲಿದೆ. ಬಜೆಟ್ ಹೊಸ ಇತಿಹಾಸವನ್ನೇ ಸೃಷ್ಟಿ ಮಾಡಲಿದೆ. ಆದರೆ, ಈ ನಾವು ಯಾವುದೇ ಕಾರಣಕ್ಕೂ ವಿದೇಶಿ ಹಸ್ತಕ್ಷೇಪಕ್ಕೆ ಅವಕಾಶ ಕೊಡುವುದಿಲ್ಲ ಎಂದೂ ಮೋದಿ ಅವರು ಹೇಳಿದ್ದಾರೆ. ಬಜೆಟ್ನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದು ಏನು ಎನ್ನುವ ವಿವರ ಇಲ್ಲಿದೆ.
ಫೆಬ್ರವರಿ 1ರಂದು ಕೇಂದ್ರ ಬಿಜೆಪಿ ಸರ್ಕಾರವು ಈ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಲಿದೆ. ಈ ಬಾರಿಯ ಬಜೆಟ್ ಹಲವು ಕಾರಣಕ್ಕೆ ಪ್ರಾಮುಖ್ಯತೆ ಪಡೆದುಕೊಂಡಿದೆ. ದೇಶದಲ್ಲಿನ ಆರ್ಥಿಕ ಪರಿಸ್ಥಿತಿ, ನಿರುದ್ಯೋಗ, ಹಣದುಬ್ಬರ ಹಾಗೂ ಆರ್ಥಿಕ ಸಂಕಷ್ಟ ಸೇರಿದಂತೆ ಹಲವು ಕಾರಣಕ್ಕೆ ಈ ಬಾರಿಯ ಬಜೆಟ್ ಯಾವ ರೀತಿ ಇರಲಿದೆ ಎನ್ನುವ ಕುತೂಹಲ ಹೆಚ್ಚಾಗಿದೆ. ದೇಶದಲ್ಲಿ ತೆರಿಗೆಗಳು ಹೆಚ್ಚಾಗುತ್ತಿವೆ. ನಿರಂತರ ಬೆಲೆ ಏರಿಕೆ ಹಾಗೂ ಹಣದುಬ್ಬರದ ಪರಿಸ್ಥಿತಿಯಿಂದಾಗಿ ಮಧ್ಯಮ ವರ್ಗದವರು ಜೀವನ ನಡೆಸುವುದು ಸವಾಲಾಗಿದೆ ಎನ್ನುವ ಕೂಗು ಇದೆ. ಹೀಗಾಗಿ ಈ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯಾವ ರೀತಿಯ ಬಜೆಟ್ ಮಂಡನೆ ಮಾಡಲಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗಿದೆ.

ಭಾರತದ ಸರ್ವತೋಮುಖ ಅಭಿವೃದ್ಧಿಯ ಮೇಲೆ ಕೇಂದ್ರ ಸರ್ಕಾರದ ಗಮನ ಇದೆ. ಭೌಗೋಳಿಕ, ಸಾಮಾಜಿಕ ಹಾಗೂ ಆರ್ಥಿಕ ಬೆಳವಣಿಗೆಗೆ ಆದ್ಯತೆ ಕೊಡುತ್ತಿದ್ದೇವೆ. ಹೊಸ ಹಾಗೂ ಹೂಡಿಕೆಗೆ ಆದ್ಯತೆ ಕೊಟ್ಟಿದ್ದೇವೆ. ಈ ಬಾರಿಯ ಬಜೆಟ್ನಲ್ಲಿ ನಾವು ಯುವಕರಿಗೆ ಒಳ್ಳೆಯ ಅವಕಾಶ ಹಾಗೂ ಮಹಿಳೆಯರಿಗೆ ರಕ್ಷಣೆ ಕೊಡುವುದಕ್ಕೆ ಆದ್ಯತೆ ಕೊಡಲಿದ್ದೇವೆ ಎಂದಿದ್ದಾರೆ. ದೇಶದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಮತ್ತು ಸಮಾಜದಲ್ಲಿ ಅವರಿಗೆ ರಕ್ಷಣೆ ಹಾಗೂ ಗೌರವವನ್ನು ಹೆಚ್ಚಿಸುವ ಐತಿಹಾಸಿಕ ಮಸೂದೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಯುವಕರಿಗೆ ವಿಕಸಿತ ಭಾರತ: ಈ ಬಾರಿಯ ಬಜೆಟ್ನಲ್ಲಿ ವಿಕಸಿತ ಭಾರತಕ್ಕೆ ಆದ್ಯತೆ ನೀಡುತ್ತಿದ್ದೇವೆ. ಇಂದಿನ ಯುವಕ / ಯವತಿಯರು 50 ವರ್ಷಕ್ಕೆ ಬರುವ ಸಂದರ್ಭದಲ್ಲಿ ವಿಕಸಿತ ಭಾರತ ನಿರ್ಮಾಣವಾಗಲಿದೆ. ಭಾರತದ ವಿಕಸಿತ ಭಾರತ ಪರಿಕಲ್ಪನೆಯ ಲಾಭ ಯುವಕರಿಗೆ ಸಿಗಲಿದೆ. 20ರಿಂದ 25 ವರ್ಷ ವಯಸ್ಸಿನಲ್ಲಿರುವವರಿಗೆ ಉಜ್ವಲ ಭವಿಷ್ಯ ನಿರ್ಮಾಣವಾಗಲಿದೆ ಎಂದು ಅವರು ಹೇಳಿದ್ದಾರೆ.
ಬಜೆಟ್ನ ಕುತೂಹಲ ಹಾಗೂ ಪ್ರಶ್ನೆಗಳಿಗೆ ಉತ್ತರ ನೀಡುವ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ. 2014ರ ನಂತರ ಭಾರತದ ವ್ಯವಹಾರಗಳಲ್ಲಿ ಯಾವುದೇ ವಿದೇಶಿ ಹಸ್ತಕ್ಷೇಪಕ್ಕೆ ಅವಕಾಶ ಕೊಟ್ಟಿಲ್ಲ. ಇನ್ನು ಇದು ಮೊದಲ ಸಂಸತ್ ಅಧಿವೇಶನವಾಗಿದೆ. ಈ ಸಂದರ್ಭದಲ್ಲಿ ಕೆಲವರು ಅಶಾಂತಿ ಸೃಷ್ಟಿ ಮಾಡುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. ನಾವು ಯಾವುದೇ ವಿದೇಶಿ ಹಸ್ತಕ್ಷೇಪಕ್ಕೆ ಅವಕಾಶ ಕೊಡುವುದಿಲ್ಲ. 2014 ರಿಂದ ಪ್ರತಿ ಬಜೆಟ್ ಅಧಿವೇಶನದ ಸಂದರ್ಭದಲ್ಲೂ ವಿದೇಶಿ ಶಕ್ತಿಗಳು ಮಧ್ಯಪ್ರವೇಶಿಸುವುದಕ್ಕೆ ಪ್ರಯತ್ನಿಸುತ್ತಿವೆ ಎನ್ನುವುದನ್ನು ನಾನು ಗಮನಿಸಿದ್ದೇನೆ. ಆದರೆ ಈ ಬಾರಿ ನಾವು ಯಾವುದೇ ಪ್ರಭಾವಕ್ಕೂ ಮಣಿಯುವುದಿಲ್ಲ ಎಂದಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications