ರೈಲ್ವೆ ಹಾಗೂ ಕೇಂದ್ರ ಬಜೆಟ್ ಮಂಡನೆ ದಿನಾಂಕ ನಿಗದಿ
ನವದೆಹಲಿ, ಫೆ.04: ಸಂಸತ್ತಿನ ಬಜೆಟ್ ಅಧಿವೇಶನ ಫೆಬ್ರವರಿ 23ರಿಂದ ಆರಂಭವಾಗಲಿದ್ದು ಮಾರ್ಚ್ 16 ರ ತನಕ ನಡೆಯಲಿದೆ. ಫೆ.25ರಂದು ರೈಲ್ವೆ ಬಜೆಟ್ ಹಾಗೂ ಫೆ. 29ರಂದು ಕೇಂದ್ರ ಮುಂಗಡಪತ್ರ ಮಂಡನೆಯಾಗಲಿದೆ. ಮತ್ತೊಮ್ಮೆ ಏಪ್ರಿಲ್ 25ರಿಂದ ಮೇ 13ರ ತನಕ ಅಧಿವೇಶನ ನಿಗದಿಯಾಗಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರ ಸಮಿತಿ ಸಭೆಯಲ್ಲಿ ಬಜೆಟ್ ಅಧಿವೇಶನದ ದಿನಾಂಕ ನಿಗದಿ ಪಡಿಸಲಾಯಿತು. ಆದರೆ, ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಅಧಿವೇಶನ ಎಷ್ಟು ದಿನಗಳ ಕಾಲ ಮುಂದುವರಿಯಲಿದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ.
ಫೆಬ್ರವರಿ 26ರಂದು ಬಜೆಟ್ ಪೂರ್ವ ಆರ್ಥಿಕ ಸಮೀಕ್ಷೆ ನಡೆಯಲಿದ್ದು, ಫೆ.29ರಂದು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಸಾಮಾನ್ಯ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಂ ವೆಂಕಯ್ಯ ನಾಯ್ಡು ಅವರು ಗುರುವಾರ ತಿಳಿಸಿದರು. [ಅರುಣ್ ಜೇಟ್ಲಿರಿಂದ ಪೂರ್ಣ ಪ್ರಮಾಣದ ಬಜೆಟ್ ]

ಸರಕು ವಾಹನ ತೆರಿಗೆ ಮಸೂದೆ ಮಂಡನೆ, ದಲಿತ ವಿದ್ಯಾರ್ಥಿ ರೋಹಿತ್ ವೆಮುಲಾ ಸಾವಿನ ಪ್ರಕರಣದ ಗಲಾಟೆ ನಡುವೆ ಬಜೆಟ್ ಅಧಿವೇಶನವನ್ನು ಯಶಸ್ವಿಗೊಳಿಸಲು ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಸಿದ್ಧವಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಫೆಬ್ರವರಿ 29ಕ್ಕೆ 2016-17ನೇ ಸಾಲಿನ ಬಜೆಟ್ ಮಂಡಿಸಲಿದೆ. ಇದಕ್ಕಾಗಿ ಜಯಂತ್ ಸಿನ್ಹಾ, ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣ್ಯಯನ್, ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗರಿಯಾ ಅವರನ್ನೊಳಗೊಂಡ ಜೇಟ್ಲಿ ನೇತೃತ್ವದ ತಂಡ 2016ನೇ ಸಾಲಿನ ಬಜೆಟ್ ಸಿದ್ಧಪಡಿಸುತ್ತಿದೆ.
ಕೇಂದ್ರ ಬಜೆಟ್ ನಲ್ಲಿ ವಿತ್ತೀಯ ಕೊರತೆ ಮತ್ತು ಚಾಲ್ತಿ ಖಾತೆ ಕೊರತೆ ಇರುವುದರಿಂದ ಜನೋಪಯೋಗಿ ಯೋಜನೆಗಳಿಗೆ ಅನುದಾನ ಒದಗಿಸಲು ರಕ್ಷಣೆ, ಮೂಲಭೂತ ಸೌಲಭ್ಯ ಕ್ಷೇತ್ರಗಳಿಗೆ ನೀಡುತ್ತಿರುವ ಅನುದಾನ ಕಡಿತ ಮಾಡಬಹುದು. ರೈಲ್ವೆ ಬಜೆಟ್ ನಲ್ಲಿ ಸುರಕ್ಷತೆ ಹಾಗೂ ಹಾಲಿ ಇರುವ ಯೋಜನೆ ಅನುಷ್ಠಾನಕ್ಕೆ ಹೆಚ್ಚಿನ ಮಹತ್ವ ನೀಡುವ ಸಾಧ್ಯತೆ ಕಂಡು ಬಂದಿದೆ.(ಒನ್ ಇಂಡಿಯಾ ಸುದ್ದಿ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications