ರೈಲ್ವೆ ಹಾಗೂ ಕೇಂದ್ರ ಬಜೆಟ್ ಮಂಡನೆ ದಿನಾಂಕ ನಿಗದಿ
ನವದೆಹಲಿ, ಫೆ.04: ಸಂಸತ್ತಿನ ಬಜೆಟ್ ಅಧಿವೇಶನ ಫೆಬ್ರವರಿ 23ರಿಂದ ಆರಂಭವಾಗಲಿದ್ದು ಮಾರ್ಚ್ 16 ರ ತನಕ ನಡೆಯಲಿದೆ. ಫೆ.25ರಂದು ರೈಲ್ವೆ ಬಜೆಟ್ ಹಾಗೂ ಫೆ. 29ರಂದು ಕೇಂದ್ರ ಮುಂಗಡಪತ್ರ ಮಂಡನೆಯಾಗಲಿದೆ. ಮತ್ತೊಮ್ಮೆ ಏಪ್ರಿಲ್ 25ರಿಂದ ಮೇ 13ರ ತನಕ ಅಧಿವೇಶನ ನಿಗದಿಯಾಗಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರ ಸಮಿತಿ ಸಭೆಯಲ್ಲಿ ಬಜೆಟ್ ಅಧಿವೇಶನದ ದಿನಾಂಕ ನಿಗದಿ ಪಡಿಸಲಾಯಿತು. ಆದರೆ, ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಅಧಿವೇಶನ ಎಷ್ಟು ದಿನಗಳ ಕಾಲ ಮುಂದುವರಿಯಲಿದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ.
ಫೆಬ್ರವರಿ 26ರಂದು ಬಜೆಟ್ ಪೂರ್ವ ಆರ್ಥಿಕ ಸಮೀಕ್ಷೆ ನಡೆಯಲಿದ್ದು, ಫೆ.29ರಂದು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಸಾಮಾನ್ಯ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಂ ವೆಂಕಯ್ಯ ನಾಯ್ಡು ಅವರು ಗುರುವಾರ ತಿಳಿಸಿದರು. [ಅರುಣ್ ಜೇಟ್ಲಿರಿಂದ ಪೂರ್ಣ ಪ್ರಮಾಣದ ಬಜೆಟ್ ]

ಸರಕು ವಾಹನ ತೆರಿಗೆ ಮಸೂದೆ ಮಂಡನೆ, ದಲಿತ ವಿದ್ಯಾರ್ಥಿ ರೋಹಿತ್ ವೆಮುಲಾ ಸಾವಿನ ಪ್ರಕರಣದ ಗಲಾಟೆ ನಡುವೆ ಬಜೆಟ್ ಅಧಿವೇಶನವನ್ನು ಯಶಸ್ವಿಗೊಳಿಸಲು ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಸಿದ್ಧವಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಫೆಬ್ರವರಿ 29ಕ್ಕೆ 2016-17ನೇ ಸಾಲಿನ ಬಜೆಟ್ ಮಂಡಿಸಲಿದೆ. ಇದಕ್ಕಾಗಿ ಜಯಂತ್ ಸಿನ್ಹಾ, ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣ್ಯಯನ್, ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗರಿಯಾ ಅವರನ್ನೊಳಗೊಂಡ ಜೇಟ್ಲಿ ನೇತೃತ್ವದ ತಂಡ 2016ನೇ ಸಾಲಿನ ಬಜೆಟ್ ಸಿದ್ಧಪಡಿಸುತ್ತಿದೆ.
ಕೇಂದ್ರ ಬಜೆಟ್ ನಲ್ಲಿ ವಿತ್ತೀಯ ಕೊರತೆ ಮತ್ತು ಚಾಲ್ತಿ ಖಾತೆ ಕೊರತೆ ಇರುವುದರಿಂದ ಜನೋಪಯೋಗಿ ಯೋಜನೆಗಳಿಗೆ ಅನುದಾನ ಒದಗಿಸಲು ರಕ್ಷಣೆ, ಮೂಲಭೂತ ಸೌಲಭ್ಯ ಕ್ಷೇತ್ರಗಳಿಗೆ ನೀಡುತ್ತಿರುವ ಅನುದಾನ ಕಡಿತ ಮಾಡಬಹುದು. ರೈಲ್ವೆ ಬಜೆಟ್ ನಲ್ಲಿ ಸುರಕ್ಷತೆ ಹಾಗೂ ಹಾಲಿ ಇರುವ ಯೋಜನೆ ಅನುಷ್ಠಾನಕ್ಕೆ ಹೆಚ್ಚಿನ ಮಹತ್ವ ನೀಡುವ ಸಾಧ್ಯತೆ ಕಂಡು ಬಂದಿದೆ.(ಒನ್ ಇಂಡಿಯಾ ಸುದ್ದಿ)
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications