ಬಜೆಟ್ ಅಧಿವೇಶನ ಮೊಟಕು: ಸ್ಪೀಕರ್ ಭೇಟಿಗೆ ತೆರಳಿದ ಪ್ರಧಾನಿ ಮೋದಿ ಮತ್ತು ಸಚಿವರು
ನವದೆಹಲಿ, ಮಾರ್ಚ್. 23: ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ಕಲಾಪವನ್ನು ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಅಧಿವೇಶನ ಮುಂದೂಡಲ್ಪಟ್ಟ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಹಿರಿಯ ಸಚಿವರು ಗುರುವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಸಭೆ ನಡೆಸುತ್ತಿದ್ದಾರೆ.
ಹಿರಿಯ ಸಚಿವರಾದ ರಾಜನಾಥ್ ಸಿಂಗ್, ಪ್ರಹ್ಲಾದ್ ಜೋಶಿ ಕಿರಣ್ ರಿಜಿಜು ಮುಂತಾದವರು ಪ್ರಧಾನಿ ಮೋದಿಗೆ ಸಾಥ್ ನೀಡಿದ್ದಾರೆ. ಕಲಾಪ ಸ್ಥಗೀತಗೊಂಡಿರುವ ಬೆನ್ನಲ್ಲೇ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗುತ್ತಿರುವ ಅಜೆಂಡಾ ತಿಳಿದಿಲ್ಲ. ಆದರೆ, ಇದು ಕಲಾಪದ ಬಿಕ್ಕಟ್ಟಿಗೆ ಸಂಬಂಧಿಸಿರಬಹುದು ಎಂಬ ಊಹಾಪೋಹವಿದೆ. ಬಜೆಟ್ ಮೇಲಿನ ಹಣಕಾಸು ಮಸೂದೆಯ ನಂತರ, ಎರಡನೇ ಮಸೂದೆಯನ್ನು ಇಂದು ಅಂಗೀಕರಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಟೀಕೆ ಮಾಡಿದ ಕಾರಣ ಮಾನನಷ್ಟ ಮೊಕದ್ದಮೆಯಲ್ಲಿ ಗುರುವಾರ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿಯ ಅನರ್ಹತೆ ಕೂಡ ಈ ಭೇಟಿಯ ಚರ್ಚೆಯಲ್ಲಿ ನಡೆಯಬಹುದು ಎಂಬ ಊಹಾಪೋಹವಿದೆ. ರಾಹುಲ್ ಗಾಂಧಿ ಅವರ ಅನರ್ಹತೆಗೆ ಸಂಬಂಧಿಸಿದಂತೆ ಬಿಜೆಪಿ ತೀವ್ರವಾಗಿ ಒತ್ತಡ ಹಾಕುತ್ತಿದ್ದು, ಈ ನಿರ್ಧಾರವು ಪ್ರಸ್ತುತ ಸ್ಪೀಕರ್ ಅವರ ಕೈಯಲ್ಲಿದೆ.
ಕಳೆದ ವಾರದಿಂದ, ಅದಾನಿ - ಹಿಂಡೆನ್ಬರ್ಗ್ ಗಲಾಟೆ ಮತ್ತು ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗದ ಬಗ್ಗೆ ಪ್ರತಿಪಕ್ಷಗಳು ಸಂಸತ್ತಿನಲ್ಲಿ ವಾಗ್ದಾಳಿ ನಡೆಸುತ್ತಿವೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಭಾರತೀಯ ಪ್ರಜಾಪ್ರಭುತ್ವದ ಕುರಿತು ರಾಹುಲ್ ಗಾಂಧಿ ಅವರು ಮಾಡಿದ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿದೆ. ಈಗೀನ ಸೂರತ್ ನ್ಯಾಯಾಲಯದ ತೀರ್ಪು ಬಿಜೆಪಿಗೆ ಮತ್ತಷ್ಟು ಟೀಕಿಸಲು ಅವಕಾಶ ಮಾಡಿಕೊಟ್ಟಿದೆ.

ಗುರುವಾರ ಬೆಳಗ್ಗೆ, ಸದನದ ಮೇಜಿನ ಮೇಲೆ ಕಾಗದಗಳನ್ನು ಎಸೆದ ಕಾಂಗ್ರೆಸ್ ಸದಸ್ಯರು ಘೋಷಣೆಗಳನ್ನು ಕೂಗಿ ಹಿಂಡೆನ್ಬರ್ಗ್ - ಅದಾನಿ ಸಮಸ್ಯೆಯನ್ನು ತನಿಖೆ ಮಾಡಲು ಜಂಟಿ ಸಂಸದೀಯ ಸಮಿತಿಗೆ ಒತ್ತಾಯಿಸಿದೆ. ಭಿತ್ತಿ ಫಲಕಗಳನ್ನು ಪ್ರದರ್ಶಿಸಿದ ಹಲವಾರು ಕಾಂಗ್ರೆಸ್ ಸದಸ್ಯರು ಸಭಾಧ್ಯಕ್ಷರ ವೇದಿಕೆ ಬಳಿ ಧರಣಿ ನಡೆಸಿದ್ದಾರೆ. ಬಳಿಕ ಗಲಾಟೆ ತೀವ್ರವಾಗಿ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಬೇಕಾಯಿತು.
ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಗಲಾಟೆಯನ್ನು ಪರಿಹರಿಸಲು ಪದೇ ಪದೇ ಸರ್ವಪಕ್ಷ ಸಭೆಗಳನ್ನು ನಡೆಸಿದ್ದಾರೆ. ಆದರೂ ಎರಡು ಪಕ್ಷಷಗಳು ತಮ್ಮ ಪ್ರತಿಭಟನೆ ಮತ್ತು ಒತ್ತಾಯವನ್ನು ಬಿಟ್ಟು ಸುಗಮ ಕಲಾಪಕ್ಕೆ ಅವಕಾಶ ನೀಡುತ್ತಿಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications