ಕಾಶ್ಮೀರದ ಪುಲ್ವಾಮಾದಲ್ಲಿ ಬುಲ್ಡೋಜರ್ ಮೂಲಕ ಪಾಕ್ ಮೂಲದ ಉಗ್ರನ ಮನೆ ಧ್ವಂಸ
ಶ್ರೀನಗರ, ಡಿಸೆಂಬರ್ 10: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧದ ಮೊದಲ ಬುಲ್ಡೋಜರ್ ಕಾರ್ಯಾಚರಣೆ ನಡೆದಿದೆ. ಅಧಿಕಾರಿಗಳು ಪುಲ್ವಾಮಾದಲ್ಲಿ ಭಯೋತ್ಪಾದಕನ ಮನೆಯನ್ನು ಧ್ವಂಸಗೊಳಿಸಿದ್ದಾರೆ.
ಪಾಕಿಸ್ತಾನ ಮೂಲದ ಭಯೋತ್ಪಾದಕ ಆಶಿಕ್ ನೆಂಗ್ರೂ ಮನೆಯನ್ನು ನಾಶಮಾಡಲಾಗಿದೆ. ಪುಲ್ವಾಮಾ ಜಿಲ್ಲೆಯ ರಾಜ್ಪೋರಾದಲ್ಲಿ ಅತಿಕ್ರಮಿಸಿದ ಸರ್ಕಾರಿ ಭೂಮಿಯಲ್ಲಿ ಮನೆ ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂ ಕಾಲೋನಿ ನೆರೆಹೊರೆಯಲ್ಲಿರುವ ಎರಡು ಅಂತಸ್ತಿನ ಮನೆಯನ್ನು ಕೆಡವಲು ಬುಲ್ಡೋಜರ್ಗಳನ್ನು ಬಳಸಲಾಗಿದೆ. ಪೊಲೀಸರು ಧ್ವಂಸ ತಂಡದ ಜತೆಗಿದ್ದರು.

ನೆಂಗ್ರೂ 2019 ರಲ್ಲಿ ಪಾಕಿಸ್ತಾನಕ್ಕೆ ತೆರಳಿದ್ದಾನೆ. ಆತ ಹಲವಾರು ಭಯೋತ್ಪಾದಕ ದಾಳಿಗಳ ಹಿಂದೆ ಶಂಕಿತರಾಗಿದ್ದಾರೆ.
ಕೆಲವು ತಿಂಗಳ ಹಿಂದೆ, ನೆಂಗ್ರೂ ಸಹೋದರ ಮಂಜೂರ್ ಅಹ್ಮದ್ ಹತ್ಯೆಯಾಗಿದೆ.
ಭಯೋತ್ಪಾದಕ ಗುಂಪುಗಳ ನಡುವಿನ ಪೈಪೋಟಿಯಿಂದಾಗಿ ಮಂಜೂರ್ನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೋಪಿಯಾನ್ನ ಹಣ್ಣಿನ ತೋಟದಲ್ಲಿ ಗುಂಡಿನ ದಾಳಿಗೊಳಗಾದ ಶವ ಪತ್ತೆಯಾಗಿತ್ತು.
ಕಾಶ್ಮೀರದ ಪುಲ್ವಾಮದ ಅವಂತಿಪುರದಲ್ಲಿ ಉಗ್ರರು ನಡೆಸಿದ್ದ ಬಾಂಬ್ ಸ್ಫೋಟದಲ್ಲಿ ಭಾರತೀಯ ಸೇನೆಯ 40 ಯೋಧರು ಹುತಾತ್ಮರಾಗಿದ್ದರು.

ಜೈಷ್-ಇ- ಮೊಹಮ್ಮದ್ ಭಯೋತ್ಪಾದಕ ಸಂಘಟನೆ ಪುಲ್ವಾಮಾ ದಾಳಿಯ ಹೊಣೆ ಹೊತ್ತಿತ್ತು.
ಸಿಆರ್ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ ಬಸ್ಗೆ ಸ್ಫೋಟಕ ತುಂಬಿದ್ದ ಕಾರನ್ನು ಗುದ್ದಿಸಲಾಗಿತ್ತು. ಈ ಘಟನೆಯಲ್ಲಿ ನಲವತ್ತು ಯೋಧರು ಮರಣ ಹೊಂದಿದ್ದರು. ಇದು ಜಗತ್ತಿನಾದ್ಯಂತ ಸುದ್ದಿ ಮಾಡಿತ್ತು. ಉಗ್ರ ಸಂಘಟನೆಯ ಕೃತ್ಯವನ್ನು ಪ್ರಮುಖ ಜಾಗತಿಕ ನಾಯಕರು ಖಂಡಿಸಿದ್ದರು. ಭಾರತವು ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್ ಕೈಗೊಂಡಿತ್ತು. ಉಗ್ರರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಿತ್ತು.
2004ರಲ್ಲಿ ಪಾಕ್ ಮೂಲದ ಉಗ್ರರು ನಡೆಸಿದ್ದ ದಾಳಿಯೊಂದರ ಸಂದರ್ಭ ಗಡಿ ಭದ್ರತಾ ಪಡೆಯ 28 ಯೋಧರು ಹುತಾತ್ಮರಾಗಿದ್ದರು. ಅದಾದ ನಂತರ, ಕಾಶ್ಮೀರದಲ್ಲಿ ನಡೆದ ದೊಡ್ಡ ಮಟ್ಟದ ದಾಳಿ ಇದಾಗಿತ್ತು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications