ಉತ್ತರಪ್ರದೇಶದಲ್ಲಿ ಭಸ್ಮವಾದ 500, 1000 ನೋಟುಗಳು ಯಾರದ್ದು?
ಲಕ್ನೋ, ನವೆಂಬರ್ 9: ಹಳೆಯ 500, 1,000 ರೂಪಾಯಿ ನೋಟುಗಳನ್ನು ಸರ್ಕಾರ ಹಿಂಪಡೆದು ಅದಕ್ಕೆ ಅಂತಿಮ ಸಂಸ್ಕಾರ ನೆರವೇರಿಸುವ ಮೊದಲೇ ಉತ್ತರಪ್ರದೇಶದ ಬರೇಲಿ ಅರಣ್ಯದಲ್ಲಿ 500 ಮತ್ತು 1000 ರೂ.ಗಳ ರಾಶಿ ರಾಶಿ ನೋಟುಗಳ ಕಂತೆಗೆ ಬೆಂಕಿ ಹಚ್ಚಿರುವ ಪ್ರಕರಣ ಬೆಳಕಿಗೆ ಬಂದಿದೆ.
ಖೋಟಾನೋಟು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಮಂಗಳವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ 500, 1,000 ರು ಮುಖಬೆಲೆಯ ನೋಟುಗಳ ಮಾನ್ಯತೆಯನ್ನು ರದ್ದುಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಆದೇಶ ಹೊರಡಿಸಿದ್ದರು.

ಈ ರೀತಿ ರದ್ದಾಗಿ ರದ್ದಿ ಕಾಗದಂತಾಗಿರುವ ಅಧಿಕ ಮೌಲ್ಯದ ಹಣವನ್ನು ಗೋಣಿಚೀಲಗಳಲ್ಲಿ ತುಂಬಿ ನಂತರ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ನಡೆದಿದೆ. ಎಷ್ಟು ಮೊತ್ತದ ಹಣ ಯಾರಿಗೆ ಸೇರಿದ್ದು ಎಂಬುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಭಾರಿ ಪ್ರಮಾಣದಲ್ಲಿ ಸುಟ್ಟು ಕರಕ
ಲಾಗಿದ್ದು, ಆ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿತ್ತು. ಬರೇಲಿಯ ಪರ್ಸಾ ಖೇಡ ರಸ್ತೆಯ ಸಿಬಿ ಗಂಜ್ಎಂಬಲ್ಲಿ ಘಟನೆ ನಡೆದಿದ್ದು, ಮೊದಲಿಗೆ ನೋಟುಗಳನ್ನು ಹರಿದು ಹಾಕಿ ನಂತರ ಸುಟ್ಟು ಹಾಕಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಈಗ ಅರ್ಧ ಸುಟ್ಟಿರುವ ನೋಟುಗಳು ಅಸಲಿಯೋ ಅಥವಾ ನಕಲಿಯೋ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಬರೇಲಿಯ ಎಸ್ಪಿ ಜೋಗಿಂದರ್ ಸಿಂಗ್ ಹೇಳಿದ್ದಾರೆ.
ನೋಟುಗಳ ವಿನಿಮಯದ ವೇಳೆ ಘೋಷಿತ ಆದಾಯಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಹಣ ವಿನಿಮಯ ಮಾಡಿದ್ದು ಕಂಡು ಬಂದರೆ ಶೇ.200 ರಷ್ಟು ದಂಡ ವಿಧಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿರುವುದು ಕಾಳಧನಿಕರಿಗೆ ನಡುಕ ಹುಟ್ಟಿಸಿರಬಹುದು.(ಐಎಎನ್ಎಸ್)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications