ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಉತ್ತರ ಪ್ರದೇಶ ಬಸ್-ಟ್ರಕ್ ಡಿಕ್ಕಿಯಾಗಿ 8 ಮಂದಿ ಸಾವು, 24 ಮಂದಿ ಗಾಯ

|
Google Oneindia Kannada News

ಲಕ್ನೋ, ಸೆಪ್ಟೆಂಬರ್ 28: ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಎಂಟು ಮಂದಿ ದುರ್ಮರಣ ಹೊಂದಿದ್ದಾರೆ. ಇದೇ ವೇಳೆ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಉತ್ತರಪ್ರದೇಶ ಅಲ್ಲ, ಇದು ಅತ್ಯಾಚಾರಿಗಳ ಪ್ರದೇಶ- 'ಯೋಗಿ' ನಾಡಿನ ಕ್ರೂರ ಪ್ರಕರಣಗಳಿವು..ಉತ್ತರಪ್ರದೇಶ ಅಲ್ಲ, ಇದು ಅತ್ಯಾಚಾರಿಗಳ ಪ್ರದೇಶ- 'ಯೋಗಿ' ನಾಡಿನ ಕ್ರೂರ ಪ್ರಕರಣಗಳಿವು..

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಲಕ್ನೋ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಆರೋಗ್ಯ ಅಧಿಕಾರಿ ಸಂಜಯ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ.

Bus-Truck Collision in Lakhimpur Kheri; 8 Dead, Over 25 People Injured

ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದು, ಗಾಯಾಳುಗಳಿಗೆ 50,000 ರೂಪಾಯಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

English summary
Bus-Truck Collision in Lakhimpur Kheri; 8 Dead, Over 25 People Injured. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X