ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣ: ಉದ್ಯಮಿ ಅನೂಪ್ ಬಂಧನ
ನವದೆಹಲಿ, ಜನವರಿ 31: ಯುಪಿಎ ಸರ್ಕಾರದ ಅವಧಿಯ 3,600 ಕೋಟಿ ರು ಹೆಲಿಕಾಪ್ಟರ್ ಖರೀದಿ ಹಗರಣದ ತನಿಖೆ ಮತ್ತೆ ಚುರುಕುಗೊಂಡಿದೆ. ವಿವಿಐಪಿಗಳು ಭಾಗಿಯಾಗಿದ್ದಾರೆ ಎನ್ನಲಾದ ಬಹುಕೋಟಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಅನೂಪ್ ಕುಮಾರ್ ಗುಪ್ತಾ ಎಂಬುವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
ಇಂಡಿಯಾ ಗೇಟ್ ಬಾಸ್ಮತಿ ಅಕ್ಕಿ ಮಾರಾಟ ಮಾಡುವ ಕೆಆರ್ ಬಿಎಲ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ(ಜಂಟಿ)ರಾಗಿರುವ ಗುಪ್ತಾ ಬಂಧಿಸಿ, ವಿಶೇಷ ನ್ಯಾಯಲಯದಲ್ಲಿ ಶನಿವಾರ ಹಾಜರುಪಡಿಸಲಾಗಿದೆ. ಮನಿಲಾಂಡ್ರಿಂಗ್ ನಿಯಂತ್ರಣ ಕಾಯ್ದೆ( ಪಿಎಂಎಲ್ಎ) ಅನ್ವಯ ಪ್ರಕರಣ ದಾಖಲಾಗಿದ್ದು, ಗುಪ್ತಾ ಅವರನ್ನು 5 ದಿನಗಳ ಕಾಲ ವಿಚಾರಣೆ ನಡೆಸಲು ತನಿಖಾ ಸಂಸ್ಥೆಗೆ ಕೋರ್ಟ್ ಅವಕಾಶ ನೀಡಿದೆ.
ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಸಹಕರಿಸದ ಕಾರಣ ಗುಪ್ತಾ ಅವರನ್ನು ಬಂಧಿಸಲಾಗಿದೆ ಎಂದು ತನಿಖಾಧಿಕಾರಿ ಹೇಳಿದ್ದಾರೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಯುಪಿಎ-2 ಸರ್ಕಾರದ ಅವಧಿಯಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಿ ಅವರಂತಹ ವಿವಿಐಪಿಗಳ ಓಡಾಟಕ್ಕಾಗಿ 3,600 ಕೋಟಿ ರೂ ವೆಚ್ಚದಲ್ಲಿ ಐಷಾರಾಮಿ ಹೆಲಿಕಾಪ್ಟರ್ಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಈ ಒಪ್ಪಂದದಲ್ಲಿ ಕಿಕ್ ಬ್ಯಾಕ್ ಪಡೆಯಲಾಗಿದ್ದು, ಅವ್ಯವಹಾರ ನಡೆದಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಒಪ್ಪಿಸಲಾಗಿತ್ತು.
ಈ ಹಗರಣದಲ್ಲಿ ಕಿಕ್ ಬ್ಯಾಕ್ ಪಡೆದ ಸಂಸ್ಥೆಗಳ ಪೈಕಿ ರವಾಸಿ ಅಲ್ ಖಲೀಜ್ ಜನರಲ್ ಟ್ರೇಡಿಂಗ್ (RAKGT) ಎಲ್ಎಲ್ ಸಿದುಬೈ ಕೂಡಾ ಸೇರಿದೆ. ಈ ಸಂಸ್ಥೆ ಅನೂಪ್ ಗುಪ್ತಾ ನಿರ್ದೇಶಕರಾಗಿರುವ ಕೆಆರ್ ಬಿಎಲ್ ಡಿಎಂಸಿಸಿ ಸಂಸ್ಥೆಯ ಅಧೀನಕ್ಕೆ ಬಂದಿದೆ. RAKGTನಲ್ಲಿ ಸುಮಾರು ಶೇ 49ರಷ್ಟು ಪಾಲನ್ನು ಗುಪ್ತಾ ಅವರ ಸಂಸ್ಥೆ ಹೊಂದಿದ್ದು, ಆರ್ಥಿಕ ವ್ಯವಹಾರಗಳ ನಿರ್ವಹಣೆ ಗುಪ್ತಾ ಅವರೇ ನಿರ್ವಹಿಸುತ್ತಿದ್ದರು ಎಂದು ಜಾರಿ ನಿರ್ದೇಶನಾಲಯ ಹೇಳಿದೆ.
ಇದಲ್ಲದೆ, ಏರ್ ಕ್ರಾಫ್ಟ್ ನಿರ್ಮಾಣಕ್ಕಾಗಿ ಭಾರತ ಸರ್ಕಾರ ಹಾಗೂ ಎಂಬ್ರಾಯಿರ್ ಸಂಸ್ಥೆ ನಡುವಿನ 208 ಮಿಲಿಯನ್ ಯುಎಸ್ ಡಾಲರ್ ಒಪ್ಪಂದದಿಂದಲೂ ಗುಪ್ತಾಗೆ ಕಿಕ್ ಬ್ಯಾಕ್ ಸಿಕ್ಕಿರುವ ಆರೋಪ ಹೊರೆಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications