ವೀರಪ್ಪನ್ ಕಾರ್ಯಾಚರಣೆಯಲ್ಲಿದ್ದ ಅಧಿಕಾರಿ ಈಗ ಜಮ್ಮು ರಾಜ್ಯಪಾಲರ ಸಲಹೆಗಾರ
ನವದೆಹಲಿ, ಜೂನ್ 21: ಕರ್ನಾಟಕ-ತಮಿಳುನಾಡು ಗಡಿಭಾಗದಲ್ಲಿ ಕಾಡುಗಳ್ಳ ವೀರಪ್ಪನ್ ವಿರುದ್ಧ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಐಪಿಎಲ್ ಅಧಿಕಾರಿ ಕೆ. ವಿಜಯ್ ಕುಮಾರ್ ಅವರನ್ನು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಎನ್.ಎನ್. ವೋಹ್ರಾ ಅವರ ಸಲಹೆಗಾರರಾಗಿ ನೇಮಿಸಲಾಗಿದೆ.
ವಿಜಯ್ ಕುಮಾರ್ ಅವರು ಕೇಂದ್ರ ಗೃಹ ಸಚಿವಾಲಯದಲ್ಲಿ ಹಿರಿಯ ಭದ್ರತಾ ಸಲಹೆಗಾರರಾಗಿ ಕಳೆದ ವಾರವಷ್ಟೇ ನಿವೃತ್ತರಾಗಿದ್ದರು.
ವೀರಪ್ಪನ್ನನ್ನು ಹಿಡಿಯಲು ತಮಿಳುನಾಡಿನಲ್ಲಿ ರಚಿಸಲಾಗಿದ್ದ ವಿಶೇಷ ಕಾರ್ಯಪಡೆಯ ಮುಖ್ಯಸ್ಥರಾಗಿದ್ದ ವಿಜಯ್ ಕುಮಾರ್ ಅವರು 'ಆಪರೇಷನ್ ಕಕೂನ್ ಅನ್ನು ಆರಂಭಿಸಿದ್ದರು.

ವೀರಪ್ಪನ್ ಹತ್ಯೆಯೊಂದಿಗೆ ಯಶಸ್ವಿ ಕಾರ್ಯಾಚರಣೆ ಪೂರ್ಣಗೊಳಿಸಿದ್ದ ವಿಜಯ್ಕುಮಾರ್ಬ ಅವರು ಜನಪ್ರಿಯತೆ ಪಡೆದುಕೊಂಡಿದ್ದರು.
ಛತ್ತೀಸಗಡದಲ್ಲಿ ಹೆಚ್ಚುವರಿ ಗೃಹ ಕಾರ್ಯದರ್ಶಿಯಾಗಿದ್ದ ಐಎಎಸ್ ಅಧಿಕಾರಿ ಬಿವಿಆರ್ ಸುಬ್ರಮಣ್ಯಂ ಅವರನ್ನು ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿಯನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ.
ಕಾರ್ಯಾವಧಿ ವಿಸ್ತರಣೆಯಲ್ಲಿ ಒಂದು ವರ್ಷ ಪೂರೈಸಿರುವ ಬಿ.ಬಿ.ವ್ಯಾಸ್ ಅವರ ಸ್ಥಾನವನ್ನು ಸುಬ್ರಮಣ್ಯಂ ಅವರು ತುಂಬಲಿದ್ದಾರೆ.
ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂದಕ್ಕೆ ಪಡೆದುಕೊಂಡಿದ್ದರಿಂದ ಸರ್ಕಾರ ಪತನವಾಗಿದ್ದು, ರಾಜ್ಯಪಾಲರ ಆಳ್ವಿಕೆಯನ್ನು ಹೇರಲಾಗಿದೆ. ಈ ಸಂಬಂಧ ಅಲ್ಲಿ ಸುಬ್ರಮಣ್ಯಂ ಅವರನ್ನು ಸಲಹೆಗಾರರನ್ನಾಗಿ ನೇಮಿಸಲು ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.
ಸುಬ್ರಮಣ್ಯಂ ಅವರು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ವ್ಯಕ್ತಿ. ಆಂತರಿಕ ಭದ್ರತೆ ವಿಚಾರದಲ್ಲಿ ಅವರು ಪರಿಣತರಾಗಿದ್ದಾರೆ. ಸರ್ಕಾರ ನಿಶ್ಚಿತ ಉದ್ದೇಶಗಳೊಂದಿಗೆ ಅವರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಕಳುಹಿಸುತ್ತಿದೆ.
ರಾಜ್ಯದಲ್ಲಿನ ತನ್ನ ಕಠಿಣ ಮತ್ತು ಬಿಗಿಯಾದ ನೀತಿಗಳನ್ನು ಜಾರಿಗೊಳಿಸುವ ಸಲುವಾಗಿ ಸುಬ್ರಮಣ್ಯಂ ಅವರನ್ನು ನೇಮಿಸಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications