ಉಪ ಚುನಾವಣೆ: ಬಿಜೆಪಿ ಕಳೆದುಕೊಂಡಿದ್ದೇ ಹೆಚ್ಚು
ನವದೆಹಲಿ, ಸೆ. 16 : ಮೂರು ಲೋಕಸಭಾ ಕ್ಷೇತ್ರ ಸೇರಿದಂತೆ 9 ರಾಜ್ಯಗಳ 32 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದೆ.
ಲೋಕಸಭಾ ಕ್ಷೇತ್ರಗಳ ಫಲಿತಾಂಶದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಎಲ್ಲ ಪಕ್ಷಗಳು ತಮ್ಮ ತಮ್ಮ ಸ್ಥಾನ ಕಾಪಾಡಿಕೊಂಡಿವೆ.(ಚುನಾವಣಾ ಫಲಿತಾಂಶ 2014: ಪಕ್ಷಗಳ ಬಲಾಬಲ)
ನರೇಂದ್ರ ಮೋದಿ ರಾಜೀನಾಮೆ ನೀಡಿರುವ ಗುಜರಾತ್ನ ವಡೋದರಾದಲ್ಲಿ ಬಿಜೆಪಿಯ ರಂಜನ್ ಬೆನ್ ಭಟ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮುಲಾಯಂ ಸಿಂಗ್ ಯಾದವ್ ರಾಜೀನಾಮೆಯಿಂದ ತೆರವಾಗಿದ್ದ ಉತ್ತರ ಪ್ರದೇಶದ ಮೈನ್ ಪುರಿಯಲ್ಲಿ ಅವರ ಮೊಮ್ಮಗ ತೇಜ್ ಪ್ರತಾಪ್ ಯಾದವ್ಗೆ ವಿಜಯಲಕ್ಷ್ಮೀ ಒಲಿದಿದ್ದಾಳೆ. ಇನ್ನು ತೆಲಂಗಾಣಾದ ಮೇದಕ್ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಟಿಆರ್ಎಸ್ ಗೆಲುವಿನ ದಡ ಸೇರಿದೆ.(ಯಾರಿಗೆ ಲಾಭ? ಯಾರಿಗೆ ನಷ್ಟ? ಲೆಕ್ಕಾಚಾರ ಶುರು)

ವಿಧಾನಸಭಾ ಕ್ಷೇತ್ರಗಳು
ಉತ್ತರ ಪ್ರದೇಶದ 11 ಕ್ಷೇತ್ರಗಳಲ್ಲಿ ಆಡಳಿತಾರೂಢ ಸಮಾಜವಾದಿ ಪಾರ್ಟಿ 8 ಕ್ಷೇತ್ರಗಳಲ್ಲಿ ಮತ್ತು ಬಿಜೆಪಿ 3 ಕ್ಷೇತ್ರಗಳಲ್ಲಿ ಜಯಗಳಿಸಿವೆ. ಗುಜರಾತ್ನ 9 ಕ್ಷೇತ್ರಗಳ ಪೈಕಿ 6 ರಲ್ಲಿ ಬಿಜೆಪಿ ಮತ್ತು 3 ರಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ.
ರಾಜಸ್ಥಾನದ 4 ಕ್ಷೇತ್ರಗಳಲ್ಲಿ 3 ರನ್ನು ಕೈ ತನ್ನ ತೆಕ್ಕೆಗೆ ತೆಗೆದುಕೊಂಡಿದ್ದರೆ ಒಂದು ಸ್ಥಾನಕ್ಕೆ ಕಮಲ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಪಶ್ಚಿಮ ಬಂಗಾಳದ 2 ಸ್ಥಾನಗಳಲ್ಲಿ ಬಿಜೆಪಿ ಮತ್ತು ಟಿಎಂಸಿ ತಲಾ ಒಂದೊಂದು ಸ್ಥಾನ ಗಳಿಸಿವೆ.
ಅಸ್ಸಾಂನ ಮೂರು ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಎಐಯುಡಿಎಫ್ಗೆ ತಲಾ ಒಂದೊಂದು ಸ್ಥಾನಗಳನ್ನು ಮತದಾರ ಫ್ರಭು ದಯಪಾಲಿಸಿದ್ದಾನೆ.
ಇಡೀ ದಿನದ ಘಟನಾವಳಿಗಳು
3.32: ಪ್ರತಿಯೊಂದು ಕ್ಷೇತ್ರದ ಸೋಲನ್ನು ಹಂತಹಂತವಾಗಿ ಚರ್ಚೆ ಮಾಡಲು ಬಿಜೆಪಿಯ ಹಿರಿಯ ನಾಯಕರಿಂದ ನಿರ್ಧಾರ
3.15 : ನಾವು ಈ ತರಹದ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ಫಲಿತಾಂಶದ ಮೇಲೆ ಸ್ಥಳೀಯ ಸಂಗತಿಗಳು ಪರಿಣಾಮ ಬೀರಿರಬಹುದು. ಈ ಬಗ್ಗೆ ಎಲ್ಲ ರಾಜ್ಯಗಳ ಪ್ರಮುಖ ನಾಯಕರೊಂದಿಗೆ ಚರ್ಚಿಸಲಾಗುವುದು ಎಂದು ಬಿಜೆಪಿ ಮುಖಂಡ ಎಂ.ಎ.ನಖ್ವಿ ತಿಳಿಸಿದರು.
Results not as expected,bypolls mostly depend on local issues,state units will have discussions: MA Naqvi,BJP pic.twitter.com/O9mDDWS7Gu
— ANI (@ANI_news) September 16, 2014 2.45 : ಬಿಜೆಪಿ ಮತ್ತು ಕೇಸರಿ ಪಡೆಯ ಕುತಂತ್ರಗಳಿಗೆ ಜನರು ತಕ್ಕ ಉತ್ತರ ನೀಡಿದ್ದಾರೆ ಎಂದ ಆನಂದಶರ್ಮಾ.
2.30: ಸಮಾಜವಾದಿ ಪಕ್ಷದ ಕಾರ್ಯಕರ್ತರಿಂದ ಲಕ್ನೋದಲ್ಲಿ ಸಂಭ್ರಮಾಚರಣೆ ಆರಂಭ.
1.45: ಮುಲಾಯಂ ಸಿಂಗ್ ಯಾದವ್ ಮೊಮ್ಮಗ ತೇಜ್ ಪ್ರತಾಪ್ಗೆ ಮೈನ್ಪುರಿ ಕ್ಷೇತ್ರದಲ್ಲಿ ಮೂರು ಲಕ್ಷ ಮತಗಳ ಅಂತರದ ಗೆಲುವು.
1.25: ರಾಜಸ್ಥಾನದ ನಸೀರಾಬಾದ್ ಕ್ಷೇತ್ರದಲ್ಲಿ ಮತ ಮರುಎಣಿಕೆಯ ನಂತರ ಕಾಂಗ್ರೆಸ್ನ ಅಭ್ಯರ್ಥಿ ಜಯಗಳಿಸಿದ್ದಾರೆ ಎಂದು ಘೊಷಣೆ.
12.58 :ಬಿನ್ಜೋರ್ ಕ್ಷೇತ್ರದಲ್ಲಿ ಎಸ್ಪಿ ಅಭ್ಯರ್ಥಿಗೆ 11,567 ಮತಗಳ ಅಂತರದ ಜಯ.
12.49: ಗುಜರಾತ್ ಕಂಬಾಲಿಯಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯಥಿಗೆ 1,277 ಮತಗಳ ಅಂತರದ ಜಯ.
12.18: ಕಾಂಗ್ರೆಸ್ ಮುಖಂಡ ಸಚಿನ್ ಪೈಲೆಟ್ ಸುದ್ದಿಗೋಷ್ಠಿ.
11.30: ಪಶ್ಚಿಮ ಬಂಗಾಳದ ಬಾರ್ಸಿತ್ ದಕೀನ್ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು, ಅಸ್ಸಾಂನ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಎಐಡಿಎಫ್ಗೆ ಜಯ.
11.06: ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಸೊನ್ನೆ ಸುತ್ತಿದ ಬಿಜೆಪಿ. ಆಂಧ್ರದ ನಂದಿಗಾಮಾದಲ್ಲಿ ಟಿಡಿಪಿಯ ಟಿ.ಸೌಮ್ಯಾಗೆ 75 ಸಾವಿರ ಮತಗಳ ಅಂತರದ ಜಯ.
The way BJP was creating tension in UP, people have given a befitting reply: Naresh Agarwal, SP on Bypoll trends pic.twitter.com/jPKcNDKXaZ
— ANI (@ANI_news) September 16, 2014 11.09: ರಾಜಸ್ಥಾನದ ವಿಯರ್ ಕ್ಷೇತ್ರದಲ್ಲಿ ಗೆಲುವುನ ನಗೆ ಬೀರಿದ ಕಾಂಗ್ರೆಸ್.
10.22: ನರೇಂದ್ರ ಮೋದಿ ತೆರವು ಮಾಡಿದ್ದ ವಡೋದರಾ ಕ್ಷೇತ್ರದಲ್ಲಿ ಬಿಜೆಪಿಯ ರಂಜನ್ ಬೆನ್ ಭಟ್ ಅವರಿಗೆ ಭರ್ಜರಿ ಗೆಲುವು
10.18 : ಗುಜರಾತ್ ನ ಮಾಂಗ್ರೋಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಬಾಬು ವಾಜಾಗೆ ಗೆಲುವು.
10.06 : ಗುಜರಾತ್ನ ಮಣಿನಗರದಲ್ಲಿ ಬಿಜೆಪಿಗೆ ಜಯ
10.00 : ವಡೋದರಾದಲ್ಲಿ ಬಿಜೆಪಿಗೆ 1,40,000 ಮತಗಳ ಮುನ್ನಡೆ.
9.57 : ಉತ್ತರ ಪ್ರದೇಶದ ಮೈನ್ಪುರಿ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷಕ್ಕೆ 33 ಸಾವಿರ ಮತಗಳ ಮುನ್ನಡೆ.
9.52 : ಉತ್ತರರ ಪ್ರದೇಶದ 11 ವಿಧಾನಸಭಾ ಕ್ಷೇತ್ರಗಳ ಪೈಕಿ 8 ರಲ್ಲಿ ಸಮಾಜವಾದಿ ಪಾರ್ಟಿ ಮುನ್ನಡೆ, ಗುಜರಾತ್ ನ 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ
9.50 : ಕಾಶ್ಮೀರ ಪ್ರವಾಹ ಹಿನ್ನೆಲೆಯಲ್ಲಿ ವಿಜಯೋತ್ಸವ ಇಲ್ಲ ಎಂದ ಬಿಜೆಪಿ.
9.00 : ಗುಜರಾತ್ ನ 9 ವಿಧಾನಸಭಾ ಕ್ಷೇತ್ರಗಳಲ್ಲಿ 5ರಲ್ಲಿ ಬಿಜೆಪಿ 4ರಲ್ಲಿ ಕಾಂಗ್ರೆಸ್ ಮುನ್ನಡೆ
8.00 : ಲೋಕಸಭಾ ಕ್ವೇತ್ರದ ಮೂರು ಮತ್ತು ವಿವಧ ರಾಜ್ಯಗಳ 33 ವಿಧಾಸಭಾ ಕ್ಷೇತ್ರದ ಮತೆಣಿಕೆ ಏಕಕಾಲಕ್ಕೆ ಆರಂಭಗಳೂರು, ಸೆ. 16 : ಮೂರು ಲೋಕಸಭಾ ಕ್ಷೇತ್ರ ಸೇರಿದಂತೆ ವಿವಿಧ ರಾಜ್ಯಗಳ 33 ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮಂಗಳವಾರ ಬೆಳಿಗ್ಗೆ ಆರಂಭವಾಗಿದೆ.
-
ನೇಪಾಳ ಚುಣಾವಣೆ ಫಲಿತಾಂಶ ಅಂತಿಮ, ಬಲೇಂದ್ರ ಶಾ ಪಕ್ಷಕ್ಕೆ ಒಟ್ಟು 119 ಸ್ಥಾನ | Nepal Election 2026 -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications