CAA: ಸಿಎಎ ಅಲ್ಪಸಂಖ್ಯಾತರ ವಿರುದ್ಧವಾಗಿಲ್ಲ
ನವದೆಹಲಿ, ಮಾರ್ಚ್ 11: ಲೋಕಸಭೆ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಇರುವಾಗ ಕೇಂದ್ರದ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಸಿಎಎ ಜಾರಿಗೊಳಿಸಲು ಸೋಮವಾರ ಅಧಿಸೂಚನೆ ಹೊರಡಿಸುವ ಮೂಲಕ ದೇಶಾದ್ಯಂತ ಚರ್ಚೆಯನ್ನು ಹುಟ್ಟು ಹಾಕಿದೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮೂಲಕ ಕೇಂದ್ರ ಸರ್ಕಾರ 2014ರ ಡಿಸೆಂಬರ್ 31ರ ತನಕ ಭಾರತಕ್ಕೆ ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನದ ಹಿಂದೂ, ಸಿಖ್, ಜೈನ, ಬುದ್ಧ, ಪಾರ್ಸಿ ಮತ್ತು ಕ್ರೈಸ್ತರಿಗೆ ದೇಶದ ಪೌರತ್ವವನ್ನು ನೀಡಲಿದೆ.

ಸಂಸತ್ ಮತ್ತು ರಾಜ್ಯಸಭೆಯಲ್ಲಿ ಪೌರತ್ವ (ತಿದ್ದುಪಡಿ) ಮಸೂದೆ 2019 ಅಂಗೀಕಾರಗೊಂಡಿತ್ತು. ಆದರೆ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಇದನ್ನು ಜಾರಿಗೊಳಿಸುವ ಅಧಿಸೂಚನೆ ಪ್ರಕಟಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಇದು ಅಲ್ಪ ಸಂಖ್ಯಾತರ ವಿರೋಧಿ ಎಂಬ ವಾದವೂ ಇದೆ.
ಅಲ್ಪಸಂಖ್ಯಾತರ ವಿರೋಧಿಯಲ್ಲ: ರಾಜ್ಯಸಭೆಯಲ್ಲಿ ಈ ಹಿಂದೆ ಪೌರತ್ವ (ತಿದ್ದುಪಡಿ) ಮಸೂದೆ 2019 ಮಂಡನೆ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, "ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಹೊಸ ಭರವಸೆಯನ್ನು ಇದು ನೀಡುತ್ತದೆ" ಎಂದು ಹೇಳಿದ್ದರು.
"ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಧರ್ಮದ ಆಧಾರದ ಮೇಲೆ ಕಿರುಕುಳವನ್ನು ಎದುರಿಸಿದ ನಂತರ ಭಾರತಕ್ಕೆ ವಲಸೆ ಬಂದವರಿಗೆ ಇದು ಸಹಕಾರಿ. ಮಸೂದೆಯು ಭಾರತದಲ್ಲಿನ ಯಾವುದೇ ಅಲ್ಪಸಂಖ್ಯಾತರ ವಿರುದ್ಧವಾಗಿಲ್ಲ ಮತ್ತು ಪ್ರತಿಯೊಬ್ಬ ಭಾರತೀಯ ನಾಗರಿಕನ ಹಕ್ಕುಗಳನ್ನು ಸಮಾನವಾಗಿ ರಕ್ಷಿಸಲಾಗುವುದು" ಎಂದು ಸ್ಪಷ್ಟಪಡಿಸಿದ್ದರು.
ರಾಜ್ಯಸಭೆಯಲ್ಲಿ ಸಿಎಎ ಮಸೂದೆ ಮಂಡನೆ ಬಳಿಕ ನಡೆದ ಚರ್ಚೆಗೆ ಉತ್ತರ ನೀಡಿದ್ದ ಅಮಿತ್ ಶಾ, "ದಶಕಗಳಿಂದ ಧಾರ್ಮಿಕ ಕಿರುಕುಳ ಅನುಭವಿಸಿದ ಜನರಿಗೆ ಭಾರತೀಯ ಪೌರತ್ವವನ್ನು ನೀಡುವ ಮೂಲಕ ಅವರಿಗೆ ಗೌರವಯುತ ಜೀವನವನ್ನು ನೀಡುವ ಗುರಿಯನ್ನು ಸರ್ಕಾರ ಹೊಂದಿದೆ. ಅವರು ಪೌರತ್ವ ನೀಡುವ ಷರತ್ತುಗಳನ್ನು ಪೂರೈಸಿದರೆ. ಭಾರತಕ್ಕೆ ಪ್ರವೇಶಿಸಿದ ದಿನಾಂಕ ಮತ್ತು ವರ್ಷದಿಂದ ಪೌರತ್ವವನ್ನು ನೀಡಲಾಗುವುದು" ಎಂದು ಹೇಳಿದ್ದರು.
"ಅವರ ವ್ಯಾಪಾರ ಮತ್ತು ವ್ಯಾಪಾರ ಹಿತಾಸಕ್ತಿಗಳನ್ನು ಸಮಾನವಾಗಿ ರಕ್ಷಿಸುವುದರ ಜೊತೆಗೆ ಅವರ ವಿರುದ್ಧದ ಎಲ್ಲಾ ಪ್ರಕರಣಗಳು ಮತ್ತು ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತದೆ. ಅಲ್ಪಸಂಖ್ಯಾತರ ಪಾಸ್ಪೋರ್ಟ್ಗಳು ಮತ್ತು ವೀಸಾಗಳ ಅವಧಿ ಮುಗಿದಿದ್ದರೂ, ಅವರನ್ನು ಅಕ್ರಮ ಎಂದು ಪರಿಗಣಿಸಲಾಗುವುದಿಲ್ಲ" ಎಂದು ತಿಳಿಸಿದ್ದರು.
ಪೌರತ್ವ (ತಿದ್ದುಪಡಿ) ಕಾಯ್ದೆ ಮೂರು ದೇಶಗಳ 6 ಅಲ್ಪಸಂಖ್ಯಾತ ಸಮುದಾಯಗಳ ವಲಸಿಗರು/ ವಿದೇಶಿಯರು ತಮ್ಮ ಧರ್ಮದ ಆಧಾರದ ಮೇಲೆ ಕಿರುಕುಳದ ಕಾರಣದಿಂದ ಭಾರತಕ್ಕೆ ಬಂದವರು ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಅನುಕೂಲ ಮಾಡಿಕೊಡುತ್ತದೆ. ಹೀಗೆ ಭಾರತಕ್ಕೆ ಬಂದ ವಿದೇಶಿಗರು ಕೆಲವು ಕಾನೂನು ಪ್ರಕ್ರಿಯೆ ಪೂರೈಸಿದ ನಂತರ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರು.
ಡಿಸೆಂಬರ್ 2014ಕ್ಕಿಂತ ಮೊದಲು ಮೂರು ದೇಶಗಳಿಂದ ಭಾರತಕ್ಕೆ ವಲಸೆ ಬಂದಿದ್ದರೆ ಅಂತಹವರು ಪೌರತ್ವಕ್ಕಾಗಿ ಷರತ್ತುಗಳು/ ಅರ್ಹತೆಗಳನ್ನು ಪೂರೈಸಿ ಭಾರತೀಯ ಪೌರತ್ವವನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಭಾರತೀಯ ಪ್ರಜೆಗಳಿಗೆ ಇದು ಯಾವುದೇ ರೀತಿಯಲ್ಲಿಯೂ ಅನ್ವಯವಾಗುವುದಿಲ್ಲ.
2019ರಲ್ಲಿಯೇ ಸಿಎಎ ಉಭಯ ಸದನಗಳಲ್ಲಿ ಅಂಗೀಕಾರಗೊಂಡು ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದಿತ್ತು. ಆದರೆ ಇದರ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆದವು. ಸುಮಾರು 100ಕ್ಕೂ ಅಧಿಕ ಜನರು ಸಾವನ್ನಪ್ಪಿದರು. ಆದ್ದರಿಂದ ಇದನ್ನು ಸರ್ಕಾರ ಜಾರಿಗೊಳಿಸಿರಲಿಲ್ಲ.
ಕೇಂದ್ರ ಗೃಹ ಸಚಿವಾಲಯ ಸಿಎಎ ಜಾರಿಗಾಗಿಯೇ ಪ್ರತ್ಯೇಕ ಪೋರ್ಟಲ್ ಆರಂಭಿಸಿದೆ. ಮೂರು ದೇಶಗಳಿಂದ ಭಾರತಕ್ಕೆ ವಲಸೆ ಬಂದಿದ್ದರೆ ಅವರು ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ ಪೌರತ್ವ ಪಡೆಯಲು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸುವವರು ಪ್ರಯಾಣದ ದಾಖಲೆ ಮೂಲಕ ಭಾರತದಕ್ಕೆ ಬಂದ ವರ್ಷವನ್ನು ಸಾಬೀತು ಮಾಡಬೇಕು. ಬೇರೆ ಯಾವುದೇ ದಾಖಲೆಗಳ ಅಗತ್ಯವಿಲ್ಲ.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ












Click it and Unblock the Notifications