ಪೌರತ್ವ ತಿದ್ದುಪಡಿ ಮಸೂದೆ: ಮೋದಿಗೆ 'ಜೈ' ಎಂದ ಸಮೀಕ್ಷಾ ಫಲಿತಾಂಶ
ದೇಶಾದ್ಯಂತ ಸದ್ಯ ಭಾರೀ ಅಶಾಂತಿಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆಯ ವಿಚಾರದಲ್ಲಿ ಸಿ-ವೋಟರ್ ಜನಾಭಿಪ್ರಾಯ ಸಂಗ್ರಹಿಸಿದೆ.
ಪ್ರಮುಖವಾಗಿ ಉತ್ತರ ಮತ್ತು ಈಶಾನ್ಯ ಭಾರತದ ಭಾಗಗಳಲ್ಲಿ, ಹಿಂಸಾಚಾರ ಮುಂದುವರಿದಿದೆ. ಎನ್ಡಿಎ ಮೈತ್ರಿಕೂಟದ ರಾಜ್ಯಗಳಲ್ಲೂ ಈ ಮಸೂದೆ ಜಾರಿಗೆ ಬರುವ ವಿಚಾರದಲ್ಲಿ ಗೊಂದಲ ಮುಂದುವರಿದಿದೆ.
ಮಸೂದೆಯ ವಿಚಾರದಲ್ಲಿ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಿಜೆಪಿ ದೇಶಾದ್ಯಂತ ಬೃಹತ್ ಅಭಿಯಾನ ಹಮ್ಮಿಕೊಂಡಿದೆ. ಬೆಂಗಳೂರಿನಲ್ಲೂ ಭಾನುವಾರ (ಡಿ 22) ಮಸೂದೆ ಬೆಂಬಲಿಸಿ ಬೃಹತ್ ಜಾಥಾ ನಡೆಯಲಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಸಾವಿರಕ್ಕೂ ಹೆಚ್ಚು ಚಿಂತಕರು, ಮೋದಿ ಸರಕಾರವನ್ನು ಬೆಂಬಲಿಸಿದ್ದಾರೆ. ಈ ನಡುವೆ, ಸಿ-ವೋಟರ್ ಜಂಟಿಯಾಗಿ ನಡೆಸಿದ ಜನಾಭಿಪ್ರಾಯವೂ ಮೋದಿ ಸರಕಾರದ ಪರವಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ
ಸಿವೋಟರ್ ಮತ್ತು ಐಎಎನ್ಎಸ್ ಜಂಟಿಯಾಗಿ ಸಮೀಕ್ಷೆ ನಡೆಸಲಾಗಿದ್ದು, ತಿದ್ದುಪಡಿ ಮಸೂದೆ ಸರಿಯೋ ತಪ್ಪೋ, ಮಸೂದೆಯ ವಿಚಾರದಲ್ಲಿ ಗೊಂದಲ ಮೂಡಲು ಕಾರಣವಾದ ಅಂಶಗಳು ಯಾವುದು.. ಹೀಗೆ ಹಲವು ವಿಚಾರಗಳಲ್ಲಿ ಜನಾಭಿಪ್ರಾಯ ಸಂಗ್ರಹಿಸಲಾಗಿದೆ.

ಜನರನ್ನು ಕನ್ಫ್ಯೂಸ್ ಮಾಡಿದ್ದು ಯಾರು
ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಜನರನ್ನು ಕನ್ಫ್ಯೂಸ್ ಮಾಡಿದ್ದು ಯಾರು ಎನ್ನುವ ಪ್ರಶ್ನೆಗೆ, ಜನಾಭಿಪ್ರಾಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ ಫಲಿತಾಂಶ ಹೀಗಿದೆ:
ವಿರೋಧ ಪಕ್ಷಗಳು: ಶೇ. 29
ಮಾಧ್ಯಮಗಳು: ಶೇ.20
ಸರಕಾರ: ಶೇ. 37
ಯಾರೂ ಅಲ್ಲ: ಶೇ. 1
ಹೇಳಲು ಕಷ್ಟ: ಶೇ. 10
ಎಲ್ಲರೂ: ಶೇ.3

ಈಶಾನ್ಯ ರಾಜ್ಯಗಳು ಮತ್ತು ಮುಸ್ಲಿಂ ಸಮುದಾಯದ ತಲಾ ಐನೂರು ಜನ
ಡಿಸೆಂಬರ್ 17-19ರ ಅವಧಿಯಲ್ಲಿ, ಸುಮಾರು ಮೂರು ಸಾವಿರ ಜನರ ಅಭಿಪ್ರಾಯವನ್ನು ಕ್ರೋಢಿಕರಿಸಿ ಈ ಸರ್ವೇಯನ್ನು ಸಿದ್ದಪಡಿಸಲಾಗಿದೆ. ಅಸ್ಸಾಂ. ಈಶಾನ್ಯ ರಾಜ್ಯಗಳು ಮತ್ತು ಮುಸ್ಲಿಂ ಸಮುದಾಯದ ತಲಾ ಐನೂರು ಜನ ಅಭಿಪ್ರಾಯವನ್ನೂ ಈ ಸಮೀಕ್ಷೆಯಲ್ಲಿ ಸೇರಿಸಲಾಗಿದೆ (ಇದೇ ಅವಧಿಯಲ್ಲಿ ತೆಗೆದುಕೊಂಡ ಅಭಿಪ್ರಾಯ).

ಮಸೂದೆ, ಮುಸ್ಲಿಂ ಸಮುದಾಯದ ವಿರುದ್ದವೇ ಎನ್ನುವ ಪ್ರಶ್ನೆ
ಸಮೀಕ್ಷೆಯ ಪ್ರಕಾರ ಹೊರಬಿದ್ದ ಇನ್ನೊಂದು ಫಲಿತಾಂಶದ ಪ್ರಕಾರ, ಈ ತಿದ್ದುಪಡಿ ಮಸೂದೆ, ಮುಸ್ಲಿಂ ಸಮುದಾಯದ ವಿರುದ್ದವೇ ಎನ್ನುವ ಪ್ರಶ್ನೆಗೆ ಒಟ್ಟಾರೆಯಾಗಿ ಇಲ್ಲ ಎನ್ನುವ ಉತ್ತರ ಬಂದಿದೆ. ಈ ಸಮೀಕ್ಷೆಗೆ ಬಂದ ಉತ್ತರ ಹೀಗಿದೆ:
ಮುಸ್ಲಿಂ ವಿರುದ್ದವಾಗಿ ಅಲ್ಲ: ಶೇ. 56
ಮುಸ್ಲಿಮರ ವಿರುದ್ದ: ಶೇ. 32
ಮಾಹಿತಿಯಿಲ್ಲ: ಶೇ. 8
ಎಲ್ಲರ ವಿರುದ್ದ: ಶೇ. 4

ಮೋದಿ ಸರಕಾರ
ಮೋದಿ ಸರಕಾರದ ಈ ತಿದ್ದುಪಡಿ ಮಸೂದೆಯಕ್ಕೆ ನಿಮ್ಮ ಬೆಂಬಲವಿದೆಯೇ ಎನ್ನುವ ಪ್ರಶ್ನೆಗೆ ಬಂದ ಉತ್ತರ ಹೀಗಿದೆ:
ಸರಕಾರದ ನಿರ್ಧಾರಕ್ಕೆ ಬೆಂಬಲವಿದೆಯೇ, ಹೌದು: ಶೇ. 65
ಸರಕಾರದ ನಿರ್ಧಾರಕ್ಕೆ ಬೆಂಬಲವಿದೆಯೇ, ಹೌದು: ಶೇ. 28
ಸರಕಾರದ ನಿರ್ಧಾರಕ್ಕೆ ಬೆಂಬಲವಿದೆಯೇ, ಪ್ರತಿಕ್ರಿಯಿಸುವುದಿಲ್ಲ: ಶೇ. 7
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications