ರಾತ್ರಿ 12.30; ರೀ, ಎದ್ದೇಳ್ರೀ ಸಿನಿಮಾಕ್ಕೆ ಹೋಗೋಣ!
ನವದೆಹಲಿ, ಜೂನ್, 29: ನಿಮ್ಮ ಹೆಂಡತಿ ಮಧ್ಯರಾತ್ರಿ ನಿಮ್ಮನ್ನು ಎಬ್ಬಿಸಿ ಶಾಪಿಂಗ್ ಹೋಗೋಣ ಎಂದರೂ ಆಶ್ಚರ್ಯವಿಲ್ಲ. ನನ್ನ ಬಳಿ ಟೈಮಿಲ್ಲ ನಾಳೆ ಸಿನಿಮಾಕ್ಕೆ ಹೋಗೋಣ ಎಂದು ನೆಪ ಹೇಳುವಂತೆಯೂ ಇಲ್ಲ. ಕೇಂದ್ರ ಸರ್ಕಾರ ಬುಧವಾರ "ಮಾದರಿ ಮಳಿಗೆ ಮತ್ತು ಸಂಸ್ಥೆ" ಕಾಯಿದೆಗೆ ಅನುಮೋದನೆ ನೀಡುವ ಮೂಲಕ ಗಂಡಸರನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ!
ಕೇಂದ್ರ ಸರ್ಕಾರ ಬುಧವಾರ "ಮಾದರಿ ಮಳಿಗೆ ಮತ್ತು ಸಂಸ್ಥೆ" ಕಾಯಿದೆಗೆ ಅನುಮೋದನೆ ನೀಡಿದ್ದು ಪರಿಣಾಮ ಇನ್ನು ಮುಂದೆ ಬ್ಯಾಂಕ್ ಗಳು, ಮಳಿಗೆಗಳು, ಸಿನಿಮಾ ಮಂದಿರ, ಚಿಲ್ಲರೆ ವ್ಯವಹಾರದ ಅಂಗಡಿಗಳು, ಮಾಲ್ಗಳು ವಾರದ ಏಳು ದಿನ ಅಲ್ಲದೇ ದಿನದ 24 ತಾಸುಗಳ ಕಾಲವೂ ತೆರೆದಿರಲಿವೆ.[ಎಫ್ ಡಿಐ ಹೂಡಿಕೆ : ಕೇಂದ್ರ ಸರ್ಕಾರದ ದಿಟ್ಟ ನಿರ್ಧಾರ]

ಈ ನೀತಿಯ ಅನ್ವಯ ಪಟ್ಟಿಯಲ್ಲಿರುವ ಎಲ್ಲ ವ್ಯಾಪಾರ ವಹಿವಾಟು ತಾಣಗಳಿಗೆ ಹೆಚ್ಚಿನ ಸ್ವಾತಂತ್ರ್ಯ ಲಭ್ಯವಾಗಲಿದೆ. ಘಟಕಗಳು 10 ಹಾಗೂ ಅದಕ್ಕಿಂತ ಹೆಚ್ಚು ಉದ್ಯೋಗಿಗಳನ್ನು ನಿಯೋಜಿಸಿಕೊಳ್ಳಲು ಅವಕಾಶ ಸಿಗಲಿದೆ. ತಮಗೆ ಇಷ್ಟ ಬಂದಾಗ ಬಂದ್ ಮಾಡಲು ಸಹ ಸ್ವಾತಂತ್ರ್ಯ ಲಭ್ಯವಾಗುತ್ತದೆ.
ಮಹಿಳೆಯರನ್ನು ನೇಮಕ ಮಾಡಿಕೊಳ್ಳು ಅವಕಾಶ ನೀಡಲಾಗಿದ್ದು ಕಟ್ಟು ನಿಟ್ಟಿನ ಕೆಲ ನಿಯಮಾವಳಿ ಬಗ್ಗೆ ಸೂಚನೆ ನೀಡಿದೆ. ಕುಡಿಯಲು ಉತ್ತಮ ನೀರು, ಕ್ಯಾಂಟೀನ್, ಪ್ರಥಮ ಚಿಕಿತ್ಸೆ ಸೇರಿದಂತೆ ಸರಿಯಾದ ವಾತಾವರಣ ನಿರ್ಮಾಣ ಮಾಡಿಕೊಡಬೇಕು ಎಂದು ತಿಳಿಸಲಾಗಿದೆ.[ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದಿಂದ ಕೊಡುಗೆ]
ಹೊಸ ಪದ್ಧತಿಯನ್ನು ಕಾಲಕಾಲಕ್ಕೆ ಪರಿಶೀಲನೆ ಮಾಡುತ್ತಿರಬೇಕು. ಯಾವುದಾರೂ ಬದಲಾವಣೆ ಅಗತ್ಯವಿದೆಯೇ? ವಾಸ್ತವ ಸ್ಥಿತಿ ಹೇಗಿದೆ ಎಂಬುದನ್ನು ಕಾರ್ಮಿಕ ಇಲಾಖೆ ಮೇಲ್ವಿಚಾರಣೆ ಮಾಡುತ್ತಿರಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.
ಸಾಮಾಜಿಕ ಸೇವೆ ಮತ್ತಿತರ ವಿಷಯದಲ್ಲಿ ಏಕರೂಪತೆಯನ್ನು ತರುವ ಸಲುವಾಗಿ ಕೇಂದ್ರ ಸಚಿವ ಸಂಪುಟ ಮಾದರಿ ವಾಣಿಜ್ಯ ಮಳಿಗೆ ಮತ್ತು ಸಂಸ್ಥೆಗಳ ಕಾಯಿದೆಗೆ ಅನುಮೋದನೆ ನೀಡಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications