ಸುರಕ್ಷತೆ ಇಲ್ಲದಿದ್ದರೆ ಕೇಬಲ್ ಟಿವಿ ಪರವಾನಗಿ ರದ್ದು: ಸುಪ್ರಿಂ
ನವದೆಹಲಿ, ಜನವರಿ 12: ಸುರಕ್ಷತೆ ಕ್ರಮಗಳನ್ನು ಕೈಗೊಳ್ಳದೇ ಇದ್ದರೆ ಕೇಬಲ್ ನೆಟ್ವರ್ಕ್ ಪರವಾನಗಿಯನ್ನು ರದ್ದು ಮಾಡಬಹುದು ಎಂದು ಸುಪ್ರಿಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಸುರಕ್ಷತೆ ಇಲ್ಲದ ಕೇಬಲ್ ನೆಟ್ವರ್ಕ್ಗಳಿಗೆ ನೋಟೀಸ್ ಸಹ ನೀಡದೇ ಪರವಾನಗಿ ನೀಡಬಹುದು ಎಂದು ಸುಪ್ರಿಂ ತನ್ನ ತೀರ್ಪಿನಲ್ಲಿ ಹೇಳಿದೆ. ಈ ವಿಷಯದಲ್ಲಿ ವಿಚಾರಣೆ ಸಹ ಅವಶ್ಯಕತೆ ಇಲ್ಲದೆ ಪರವಾನಗಿ ರದ್ದು ಮಾಡಬಹುದು, ವಿಚಾರಣೆಗೆ ನಂತರ ಅವಕಾಶ ನೀಡಲಾಗುವುದು ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ತಿದ್ದುಪಡಿ ಆಗಿರುವ ಕೇಬಲ್ ಟೆಲಿವಿಷನ್ ನೆಟ್ವರ್ಕ್ ಕಾಯ್ದೆ ಪ್ರಕಾರ 2012 ರ ರೂಲ್ 11 ಸಿ ನಿಬಂಧನೆಗಳ ಪ್ರಕಾರ ಸುರಕ್ಷತೆ ಅನುಮೋದನೆ ಪಡೆಯುವುದು ಕಡ್ಡಾಯ ಎಂದು ಮನೋಹರ್ ಸಪ್ರೆ ಮತ್ತು ಇಂದು ಮಲ್ಹೋತ್ರಾ ಅವರಿದ್ದ ಪೀಠವು ಹೇಳಿದೆ.
ಕೇಬಲ್ ಟಿವಿ ಸುರಕ್ಷತೆ ಅನುಮೋದನೆ ನೀಡುವುದು ಸಂಬಂಧಪಟ್ಟ ಇಲಾಖೆ ಮತ್ತು ಪ್ರಾಧಿಕಾರದ ಅಧೀನದಲ್ಲಿರುತ್ತದೆ. ಪರವಾನಗಿ ನೀಡುವುದು ರದ್ದು ಮಾಡುವುದು ಸಹ ಅದೇ ಪ್ರಾಧಿಕಾರದ ಅಧಿಕಾರದಲ್ಲಿ ಇರುತ್ತದೆ ಎಂದು ಪೀಠ ಹೇಳಿದೆ.
2015 ರ ಸೆಪ್ಟೆಂಬರ್ನಲ್ಲಿ ಬಾಂಬೆ ಹೈಕೋರ್ಟ್ ಇದೇ ವಿಷಯವಾಗಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಡಿಜಿ ಕೇಬಲ್ ನೆಟ್ವರ್ಕ್ ಮತ್ತು ಇತರರು ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ದರು. ಇಲ್ಲಿಯೂ ಅವರಿಗೆ ಸೋಲಾಗಿದೆ.
ಮಲ್ಟಿ ಸಿಸ್ಟಂ ಕಾರ್ಯಾಚರಣೆ ವ್ಯವಸ್ಥೆಯನ್ನು ಗೃಹ ಸಚಿವಾಲಯವು 2014ರಲ್ಲಿ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಡಿಜಿ ಕೇಬಲ್ ಬಾಂಬೆ ಹೈಕೋರ್ಟ್ ಮೆಟ್ಟಲಿರಿತ್ತು. ಆದರೆ ಅಲ್ಲಿ ಅವರ ಅರ್ಜಿಗೆ ಸೋಲಾಗಿತ್ತು. ಹಾಗಾಗಿ ಸುಪ್ರಿಂಗೆ ಅರ್ಜಿ ಸಲ್ಲಿಸಿದ್ದರು ಆದರೆ ಇಲ್ಲಿಯೂ ಸೋಲಾಗಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications