ರಫೇಲ್ ಜೆಟ್ ಆಫ್ಸೆಟ್ ತಂತ್ರಜ್ಞಾನ ಹಸ್ತಾಂತರಿಸದ ಡಸಾಲ್ಟ್: ಸಿಎಜಿ ವರದಿ
ನವದೆಹಲಿ, ಸೆಪ್ಟೆಂಬರ್ 24: ಭಾರತಕ್ಕೆ 36 ರಫೇಲ್ ಯುದ್ಧ ವಿಮಾನಗಳನ್ನು ಒದಗಿಸುವುದರ ಬಗ್ಗೆ ಒಪ್ಪಂದ ಮಾಡಿಕೊಂಡಿರುವ ಫ್ರಾನ್ಸ್ನ ಡಸಾಲ್ಟ್ ಏವಿಯೇಷನ್ ಸಂಸ್ಥೆ, ಅದರ ಬಿಡಿಭಾಗಗಳನ್ನು ತಯಾರಿಸುವ ತಂತ್ರಜ್ಞಾನವನ್ನು ಇನ್ನೂ ಭಾರತಕ್ಕೆ ಹಸ್ತಾಂತರಿಸಿಲ್ಲ.
ರಫೇಲ್ನ ಐದು ಯುದ್ಧ ವಿಮಾನಗಳನ್ನು ಭಾರತಕ್ಕೆ ಈಗಾಗಲೇ ಹಸ್ತಾಂತರ ಮಾಡಲಾಗಿದೆ. ಆದರೆ ತಂತ್ರಜ್ಞಾನ ಹಸ್ತಾಂತರದ ಬಗ್ಗೆ ಮಾಡಿಕೊಂಡಿರುವ ಒಪ್ಪಂದದಲ್ಲಿ ನೀಡಿರುವ ಭರವಸೆಯನ್ನು ಇನ್ನೂ ಈಡೇರಿಸಿಲ್ಲ ಎಂದು ಸಂಸತ್ನಲ್ಲಿ ಮಂಡಿಸಲಾದ ಸಿಎಜಿ ವರದಿಯಲ್ಲಿ ತಿಳಿಸಲಾಗಿದೆ.
'36 ಮಧ್ಯಮ ಬಹು ಕಾರ್ಯದ ಯುದ್ಧ ವಿಮಾನಗಳಿಗೆ (ಎಂಎಂಆರ್ಸಿಎ) ಸಂಬಂಧಿಸಿದ ಆಫ್ಸೆಟ್ ಒಪ್ಪಂದದಂತೆ ಡಸಾಲ್ಟ್ ಏವಿಯೇಷನ್ ಮತ್ತು ಎಂಬಿಡಿಎಗಳು ಸೆ 2015ರಂದು ಡಿಆರ್ಡಿಒಕ್ಕೆ ಅತ್ಯಾಧುನಿಕ ತಂತ್ರಜ್ಞಾನದ ಶೇ 30ರಷ್ಟು ಆಫ್ಸೆಟ್ ನೆರವುಗಳನ್ನು ಒದಗಿಸುವುದಾಗಿ ತಿಳಿಸಿದ್ದವು. ಹಗುರ ಯುದ್ಧ ವಿಮಾನಗಳಿಗೆ ಸ್ವದೇಶಿ ನಿರ್ಮಿತ ಎಂಜಿನ್ (ಕಾವೇರಿ) ಅಭಿವೃದ್ಧಿಪಡಿಸಲು ಈ ತಾಂತ್ರಿಕ ನೆರವನ್ನು ಪಡೆಯಲು ಡಿಆರ್ಡಿಒ ಬಯಸಿತ್ತು. ಇದುವರೆಗೂ ಉತ್ಪಾದಕ ಸಂಸ್ಥೆಯು ಈ ತಂತ್ರಜ್ಞಾನವನ್ನು ವರ್ಗಾಯಿಸುವ ಬಗ್ಗೆ ಖಾತರಿ ನೀಡಿಲ್ಲ' ಎಂದು ವರದಿಯಲ್ಲಿ ಸಿಎಜಿ ಹೇಳಿದ್ದಾರೆ.

ಅನಿಲ್ ಅಂಬಾನಿ ಅವರ ರಿಲಯನ್ಸ್ ಸಂಸ್ಥೆಯನ್ನು ಒಳಗೊಂಡ ಶೇ 50ರಷ್ಟು ಆಪ್ಸೆಟ್ ತಯಾರಿಕೆಯ ಒಪ್ಪಂದವು 2019ರ ಸಾರ್ವತ್ರಿಕ ಚುನಾವಣೆಯಲ್ಲಿ ವಿವಾದದ ಸಂಗತಿಯಾಗಿತ್ತು. ಆದರೆ ಇದರ ಬಗ್ಗೆ ಸಿಎಜಿ ವರದಿಯಲ್ಲಿ ಉಲ್ಲೇಖವಿಲ್ಲ.
2005ರಿಂದ 2018ರ ಮಾರ್ಚ್ವರೆಗೂ ವಿದೇಶಿ ಕಂಪೆನಿಗಳ ಜತೆ 66,427 ಕೋಟಿ ವೆಚ್ಚದಲ್ಲಿ 46 ಆಫ್ಸೆಟ್ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ ಎಂದು ಸಿಎಜಿ ತಿಳಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications