ಪ್ಯಾರಿಸ್ನಲ್ಲಿನ ಭಾರತ ಸರ್ಕಾರದ ಆಸ್ತಿ ಮುಟ್ಟುಗೋಲಿಗೆ ಮುಂದಾದ ಕೇರ್ನ್ ಎನರ್ಜಿ
ನವದೆಹಲಿ, ಜುಲೈ 08: ತೆರಿಗೆ ವಿವಾದಕ್ಕೆ ಸಂಬಂಧಿಸಿದಂತೆ ಬ್ರಿಟನ್ ಮೂಲದ ಕೇರ್ನ್ ಎನರ್ಜಿ ಸಂಸ್ಥೆ ಪ್ಯಾರಿಸ್ನಲ್ಲಿ ಭಾರತ ಸರ್ಕಾರಕ್ಕೆ ಸೇರಿದ ಸುಮಾರು 20 ಆಸ್ತಿ ವಶಪಡಿಸಿಕೊಳ್ಳಲು ಫ್ರೆಂಚ್ ನ್ಯಾಯಾಲಯದ ಆದೇಶ ಪಡೆದುಕೊಂಡಿದೆ.
ಕೇರ್ನ್ ಅರ್ಜಿಯನ್ನು ಪರಿಗಣಿಸಿದ್ದ ಫ್ರೆಂಚ್ ನ್ಯಾಯಾಲಯ, ಜೂನ್ 11ರಂದು, ಪ್ಯಾರಿಸ್ನಲ್ಲಿ ಭಾರತಕ್ಕೆ ಸೇರಿದ ಆಸ್ತಿಗೆ ಮುಟ್ಟುಗೋಲು ಹಾಕಲು ಅನುಮತಿ ನೀಡಿತ್ತು. ಬುಧವಾರ ಸಂಜೆಗೆ ಎಲ್ಲಾ ಕಾನೂನು ಪ್ರಕ್ರಿಯೆ ಪೂರ್ಣಗೊಂಡಿದೆ.
ಕೇರ್ನ್ ಎನರ್ಜಿ ಕಂಪನಿಗೆ ಅನಗತ್ಯವಾಗಿ ತೆರಿಗೆ ವಿಧಿಸುವ ಮೂಲಕ ಭಾರತ ಸರ್ಕಾರ 2014ರ ಭಾರತ- ಬ್ರಿಟನ್ ದ್ವಿಪಕ್ಷೀಯ ಹೂಡಿಕೆ ಒಪ್ಪಂದವನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಕ್ರೇರ್ನ್ ಅಂತರರಾಷ್ಟ್ರೀಯ ನ್ಯಾಯಮಂಡಳಿ ಮೊರೆಹೋಗಿತ್ತು. ಭಾರತೀಯ ನ್ಯಾಯಮೂರ್ತಿಯೊಬ್ಬರನ್ನು ಒಳಗೊಂಡಿದ್ದ ಅಂತರರಾಷ್ಟ್ರೀಯ ನ್ಯಾಯಮಂಡಳಿ ಕಳೆದ ಡಿಸೆಂಬರ್ನಲ್ಲಿ ತೀರ್ಪು ನೀಡಿತ್ತು.

ಕೇರ್ನ್ ಸಂಸ್ಥೆಗೆ 1.2 ಬಿಲಿಯನ್ ಡಾಲರ್ ಹಾಗೂ ಬಡ್ಡಿ ಸೇರಿಸಿ ಕೊಡುವಂತೆ ಭಾರತ ಸರ್ಕಾರಕ್ಕೆ ನ್ಯಾಯಮಂಡಳಿ ಸೂಚಿಸಿತ್ತು. ಆದರೆ ಈ ಆದೇಶ ಬಂದ ನಂತರವೂ ಭಾರತ ಹಣ ಪಾವತಿ ಮಾಡಿಲ್ಲ ಎಂದು ಆರೋಪಿಸಿ ಕೇರ್ನ್ ವಿವಿಧ ದೇಶಗಳಲ್ಲಿರುವ ಭಾರತ ಸರ್ಕಾರದ ಆಸ್ತಿಯನ್ನು ವಶಕ್ಕೆ ಪಡೆಯಲು ಮುಂದಾಗಿದೆ.
ಅಮೆರಿಕ, ಬ್ರಿಟನ್, ನೆದರ್ಲೆಂಡ್, ಕೆನಡಾ, ಫ್ರಾನ್ಸ್, ಸಿಂಗಪುರ, ಜಪಾನ್, ಕೇಮನ್ ಐಲೆಂಡ್ಸ್ ದೇಶಗಳಲ್ಲಿ ಕೇರ್ನ್ ನ್ಯಾಯಾಲಯಗಳ ಮೊರೆ ಹೋಗಿದೆ. ವಿದೇಶಗಳಲ್ಲಿ ಭಾರತ ಸರ್ಕಾರಕ್ಕೆ ಸೇರಿದ 70 ಬಿಲಿಯನ್ ಡಾಲರ್ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳಲು ಮುಂದಾಗಿದೆ.
ಇದಕ್ಕೆ ಪ್ರಸ್ತುತ ಫ್ರೆಂಚ್ ನ್ಯಾಯಾಲಯದಲ್ಲಿ ಅನುಮತಿ ದೊರೆತಿದ್ದು, ಪ್ಯಾರಿಸ್ನಲ್ಲಿ ಭಾರತಕ್ಕೆ ಸೇರಿದ 20 ಆಸ್ತಿಗಳನ್ನು ಕೇರ್ನ್ ಗುರುತಿಸಿ ವಶಕ್ಕೆ ಪಡೆಯಲು ಮುಂದಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications