ಮೋದಿ ಬಗ್ಗೆ ಜೈಲಿನಿಂದ ಬಿಡುಗಡೆಯಾದ ಕನ್ಹಯ್ಯಾ ಹೇಳಿದ್ದೇನು?
ನವದೆಹಲಿ,ಮಾರ್ಚ್, 04: " ಮಾನ್ಯ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿಯವರೇ ನಾವು ನಿಮ್ಮ ಮಕ್ಕಳಲ್ಲ, ಜೆಎನ್ ಯು ವಿದ್ಯಾರ್ಥಿಗಳು, ದಯವಿಟ್ಟು ನಮ್ಮ ಮೇಲೆ ಹೊರಿಸುತ್ತಿರುವ ದೇಶ ದ್ರೋಹದ ಆರೋಪ ನಿಲ್ಲಿಸಿ" ಇದು ಕನ್ಹಯ್ಯಾ ಕುಮಾರ್ ನೇರ ಮಾತುಗಳು.
ದೇಶ ದ್ರೋಹದ ಆರೋಪದ ಮೇಲೆ ಬಂಧಿತನಾಗಿ ಆರು ತಿಂಗಳ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ದೆಹಲಿ ಜವಾಹರಲಾಲ್ ನೆಹರು ವಿವಿ ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯಾ ಕುಮಾರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಗುರುವಾರ ರಾತ್ರಿ ಮಾತನಾಡಿದ್ದಾರೆ.[ಕನ್ಹಯ್ಯಾ ಕುಮಾರ್ ಘೋಷಣೆ ಕೂಗಿದ 2 ವಿಡಿಯೋ ನಕಲಿ!]
ದೆಹಲಿಯಲ್ಲಿ ಕುಮಾರ್ ಭಾಷಣ ಕೇಳಲು 2,500 ವಿದ್ಯಾರ್ಥಿಗಳು ಸೇರಿದ್ದರು. ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿಯವರೇ ಹೈದರಾಬಾದ್ ನ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಅವರ ಮಾತಿನಲ್ಲಿ ವ್ಯಂಗ್ಯ, ಆಕ್ರೋಶ, ದೇಶದ ಬಗ್ಗೆ ಅವರಿಗಿರುವ ಭಾವನೆ ಎಲ್ಲವೂ ವ್ಯಕ್ತವಾಗುತ್ತಿತ್ತು.[ಬಿಗಿ ಭದ್ರತೆಯಲ್ಲಿ ಕನ್ಹಯ್ಯಾ ಕುಮಾರ್ ಬಿಡುಗಡೆ]

ಜೆಎನ್ ಯು ಮರೆಯುವುದು ಕಷ್ಟ
ಜೆಎನ್ ಯುವಿನಲ್ಲಿ ಪ್ರವೇಶ ಪಡೆಯುವುದು ಎಷ್ಟು ಕಷ್ಟವೋ, ಜೆಎನ್ ಯುನಲ್ಲಿರುವವರನ್ನು ಮರೆಯುವುದೂ ಅಷ್ಟೆ ಕಷ್ಟ.

ಎಲ್ಲರಿಗೂ ಧನ್ಯವಾದ!
ಸಂಸತ್ತಿನಲ್ಲಿ ಕುಳಿತು ಯಾವುದು ಸರಿ ಹಾಗೂ ಯಾವುದು ತಪ್ಪು ಎಂದು ನಿರ್ಧಾರ ಮಾಡಿದವರಿಗೆಲ್ಲರಿಗೂ ಧನ್ಯವಾದಗಳು.

ಎಬಿವಿಪಿ ಬಗ್ಗೆ ದ್ವೇಷ ಇಲ್ಲ
ಎಬಿವಿಪಿ ಬಗ್ಗೆ ನನಗೆ ಯಾವುದೆ ದ್ವೇಷ ಇಲ್ಲ. ಮುಂದೆ ದ್ವೇಷ ಸಾಧಿಸುವ ಕೆಲಸವನ್ನು ಮಾಡುವುದಿಲ್ಲ.

ರೈತರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ?
ಹುತಾತ್ಮ ಸೈನಿಕರ ಬಗ್ಗೆ ಮಾತನಾಡುವವರು, ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ರೈತರ ಬಗ್ಗೆ ಏಕೆ ಮಾತನಾಡುವುದಿಲ್ಲ.

ಮೋದಿಯರೇ ಹಿಟ್ಲರ್ ಬಗ್ಗೆ ಮಾತನಾಡಿ
ಮೋದಿಯವರೇ ಸ್ಟಾಲಿನ್ ಬಗ್ಗೆ ಮಾತನಾಡುವ ನೀವು ಹಿಟ್ಲರ್ ಮತ್ತು ಮುಸಲೋನಿ ಬಗ್ಗೆಯೂ ಮಾತನಾಡಿ.

ನಾನು ಸತ್ಯವನ್ನೇ ನಂಬಿದ್ದೇನೆ
ಪ್ರಧಾನಿಯವರು 'ಸತ್ಯಮೇವ ಜಯತೇ' ಎಂದು ಟ್ವೀಟ್ ಮಾಡಿದ್ದರು. ನಾನು ಸಹ ಸತ್ಯವನ್ನೇ ನಂಬಿದ್ದೇನೆ.

ಭಾರತಕ್ಕೆ ಸ್ವಾತಂತ್ರ್ಯವಿಲ್ಲ
ನಾವು ಭಾರತದಲ್ಲಿ ಸ್ವಾತಂತ್ರ್ಯ ಕೇಳುತ್ತಿಲ್ಲ... ಭಾರತಕ್ಕೆ ಸ್ವಾತಂತ್ರ್ಯ ಕೇಳುತ್ತಿದ್ದೇವೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications