ಉ.ಪ್ರ. ಸಿಎಂ ಆಗೋದು ಬಾಲಿವುಡ್ ಡ್ರೀಮ್ ಗರ್ಲ್ ಗೆ ನಿಮಿಷದ ಕೆಲಸ, ಆದರೆ
ಮಥುರಾ (ಉತ್ತರ ಪ್ರದೇಶ), ಜುಲೈ 26 : "ನಾನು ಆಗಬೇಕು ಅಂದುಕೊಂಡರೆ ನಿಮಿಷದಲ್ಲಿ ಮುಖ್ಯಮಂತ್ರಿ ಆಗ್ತೀನಿ" ಎಂದು ಹೇಳುವ ಮೂಲಕ ಅಚ್ಚರಿಯ ಹೇಳಿಕೆ ನೀಡಿದ್ದಾರೆ ನಟಿ-ಬಿಜೆಪಿ ಸಂಸದೆ ಹೇಮಾಮಾಲಿನಿ.
ಅದೂ ಉತ್ತರ ಪ್ರದೇಶದಂಥ ರಾಜ್ಯಕ್ಕೆ ಮುಖ್ಯಮಂತ್ರಿ ಆಗುವುದು ತನ್ನ ಪಾಲಿಗೆ ನಿಮಿಷದ ವಿಚಾರ ಎಂದು ಹೇಳುವ ಮೂಲಕ ಅಚ್ಚರಿಗೆ ದೂಡಿದ್ದಾರೆ. ರಾಜಸ್ತಾನದ ಬನ್ ಸ್ವಾರದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಗುರುವಾರ ಭಾಗವಹಿಸಿದ್ದ ವೇಳೆ ಹೀಗೆ ಹೇಳಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
69 ವರ್ಷದ ಹೇಮಾಮಾಲಿನಿಗೆ ಆ ಸ್ಥಾನದ ಬಗ್ಗೆ ಅಂಥ ಆಸಕ್ತಿ ಇಲ್ಲವಂತೆ. ಅದಕ್ಕೆ ನೀಡಿರುವ ಕಾರಣ ಏನು ಗೊತ್ತಾ? ನನಗೆ ಕಟ್ಟಿ ಹಾಕಿದ ಹಾಗೆ ಬದುಕಲು ಆಗಲ್ಲ. ತುಂಬ ಸ್ವಚ್ಛಂದವಾಗಿ ಅಡ್ಡಾಡುತ್ತಾ ಇರುವುದು ನನಗೆ ಇಷ್ಟ. ಆದ್ದರಿಂದ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕರೂ ಬೇಡ ಅಂದಿದ್ದಾರೆ.

ಹೇಮಾ ಮಾಲಿನಿ ಮೊದಲ ಬಾರಿಗೆ ರಾಜ್ಯಸಭೆಗೆ 2003ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರಕಾರ ಇದ್ದ ಅವಧಿಯಲ್ಲಿ ನಾಮ ನಿರ್ದೇಶನಗೊಂಡಿದ್ದರು. ಅದಕ್ಕೂ ಮುನ್ನ ಆಕೆ ಬಿಜೆಪಿ ಪರ ಚುನಾವಣೆ ಪ್ರಚಾರಗಳನ್ನು ಕೈಗೊಂಡಿದ್ದರು. ಆದರೆ 2004ರಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. 2010ರಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದರು. 2011ರಲ್ಲಿ ಕಡಿಮೆ ಅವಧಿಗೆ ರಾಜ್ಯಸಬೆಗೆ ಆಯ್ಕೆಯಾದರು.
2014ರಲ್ಲಿ ಚುನಾವಣೆ ರಾಜಕಾರಣಕ್ಕೆ ಇಳಿದ ಅವರು, ರಾಷ್ಟ್ರೀಯ ಲೋಕ ದಳದ ಜಯಂತ್ ಚೌಧರಿ ವಿರುದ್ಧ ಗೆದ್ದರು. ಆದರೂ ಹೇಮಾಮಾಲಿನಿ ಬಾಲಿವುಡ್ ನ 'ಡ್ರೀಮ್ ಗರ್ಲ್' ಅಂತಲೇ ಪ್ರಸಿದ್ಧಿ ಪಡೆದವರು. 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಭಾರತ ಹಾಗೂ ವಿದೇಶಗಳಲ್ಲಿ 1000ಕ್ಕೂ ಹೆಚ್ಚು ಕಲಾ ಪ್ರದರ್ಶನಗಳನ್ನು ನೀಡಿದ್ದಾರೆ.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications