5 ರಾಜ್ಯಗಳ ಚುನಾವಣೆ, ಕೇಂದ್ರ ಬಜೆಟ್ ಮುಂದೆ ಹೋಗಬಹುದಾ?
ನವದೆಹಲಿ, ಜನವರಿ 5: ಮಾರ್ಚ್ 8ರವರೆಗೆ ಕೇಂದ್ರ ಬಜೆಟ್ ಮಂಡನೆಯನ್ನು ಮುಂದಕ್ಕೆ ಹಾಕಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ. ಬುಧವಾರವಷ್ಟೇ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಿದ ಚುನಾವಣೆ ಆಯೋಗ ಈ ವಿಚಾರವಾಗಿ ನಿರ್ಧರಿಸಬೇಕಾಗಿದೆ.
ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ್, ಮಣಿಪುರ ಹಾಗೂ ಪಂಜಾಬ್ ನಲ್ಲಿ ಚುನಾವಣೆಗೆ ದಿನಾಂಕ ಘೋಷಣೆ ಮಾಡಿಯಾಗಿದೆ. ವಿರೋಧ ಪಕ್ಷಗಳೇನೋ ಒತ್ತಾಯ ಮಾಡಿರಬಹುದು. ಆದರೆ ಬಜೆಟ್ ಸಾಂವಿಧಾನಿಕ ಜವಾಬ್ದಾರಿ. ಅದನ್ನು ಮುಂದಕ್ಕೆ ಹಾಕೋದಿಕ್ಕೆ ಅಗಲ್ಲ ಎನ್ನುತ್ತಾರೆ ಕಾನೂನು ತಜ್ಞರು. ಆದರೆ ಬಜೆಟ್ ನಲ್ಲಿ ಆ ಐದು ರಾಜ್ಯಗಳಿಗೆ ಸಂಬಂಧಪಟ್ಟ ಯೋಜನೆಗಳನ್ನು ತಾತ್ಕಾಲಿಕವಾಗಿ ಘೋಷಿಸದೆ ಇದ್ದರೆ ಆಯಿತು ಎನ್ನುತ್ತಾರೆ.[ಉತ್ತರಪ್ರದೇಶ ಚುನಾವಣೆ: ಹೊರಬಿದ್ದ ಕುತೂಹಲಕಾರಿ ಸಮೀಕ್ಷೆ ಫಲಿತಾಂಶ]

ಈಗಾಗಲೇ ವಿಪಕ್ಷಗಳು ಈ ಬಗ್ಗೆ ರಾಷ್ಟ್ರಪತಿ ಹಾಗೂ ಚುನಾವಣೆ ಆಯೋಗಕ್ಕೆ ಮನವಿ ಸಲ್ಲಿಸಿವೆ. ಸಂವಿಧಾನ ಹಾಗೂ ಕಾನೂನು ತಜ್ಞರ ಅಭಿಪ್ರಾಯ ಪಡೆದು, ಈ ಬಗ್ಗೆ ಚುನಾವಣೆ ಆಯೋಗ ನಿರ್ಧಾರ ಮಾಡಬೇಕಿದೆ. ಈಗಾಗಲೇ ನಿಗದಿಯಾಗಿರುವಂತೆ ಫೆಬ್ರವರಿ 1ರಂದೇ ಬಜೆಟ್ ಮಂಡಿಸಬೇಕೆ ಅಥವಾ ಕೊನೆ ಹಂತದ ಚುನಾವಣೆ ನಡೆಯುವ ಮಾರ್ಚ್ 1ರವರೆಗೆ ಮುಂದಕ್ಕೆ ಹಾಕಬೇಕೆ ಎಂಬುದನ್ನು ಕಾದುನೋಡಬೇಕಿದೆ.
ಈ ಮಧ್ಯೆ ಸರಕಾರವೇ ಹೇಳಿದೇ ಇದು ಸಾಂವಿಧಾನಿಕ ಜವಾಬ್ದಾರಿ. ಅದನ್ನು ಮುಂದೂಡಲು ಸಾಧ್ಯವಿಲ್ಲ. ಈ ಹಿಂದೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ಬಜೆಟ್ ಮುಂದೂಡಲಾಗಿದೆಯಾ ಎಂಬುದನ್ನು ವಿಪಕ್ಷಗಳು ನೋಡುತ್ತಿವೆ. ಚುನಾವಣೆ ದಿನಾಂಕ ಘೋಷಣೆಯಾದ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗುತ್ತದೆ.[5 ರಾಜ್ಯಗಳಲ್ಲಿ ಚುನಾವಣೆ ಮತದಾನ, ಫಲಿತಾಂಶ: ನಿಮಗಿದು ತಿಳಿದಿರಲಿ]
ವಿರೋಧ ಪಕ್ಷಗಳ ವಾದವೇನೆಂದರೆ, ಬಜೆಟ್ ಘೋಷಣೆಯಿಂದ ಅಧಿಕಾರದಲ್ಲಿರುವ ಪಕ್ಷಕ್ಕೆ ಅನುಕೂಲವಾಗುತ್ತದೆ. ಚುನಾವಣೆಯನ್ನೇ ಗಮನದಲ್ಲಿಟ್ಟುಕೊಂಡು ಕೆಲವು ಘೋಷಣೆಗಳನ್ನು ಮಾಡುವ ಸಾಧ್ಯತೆಯಿದೆ. ಆದರೆ ಕಾನೂನು ತಜ್ಞರ ಪ್ರಕಾರ, ಚುನಾವಣೆ ಘೋಷಣೆಯಾದ ರಾಜ್ಯಗಳಿಗೆ ಸಂಬಂಧಿಸಿದ ಯೋಜನೆಗಳನ್ನು ಮಾತ್ರ ತಾತ್ಕಾಲಿಕವಾಗಿ ಮಂಡಿಸದಂತೆ ಸರಕಾರಕ್ಕೆ ಚುನಾವಣೆ ಆಯೋಗ ಸಲಹೆ ಮಾಡಬಹುದು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications