ಕಾರ್ಗಿಲ್ ಯೋಧನ ಸಂಕಷ್ಟ: ಮಧ್ಯಪ್ರವೇಶಿಸಲು ಆಗೊಲ್ಲ ಎಂದ ಸೇನೆ
ಗುವಾಹಟಿ, ಜೂನ್ 1: ಅಸ್ಸಾಂನಲ್ಲಿ ಹುಟ್ಟಿ ಬೆಳೆದಿರುವುದಕ್ಕೆ ಸೂಕ್ತ ದಾಖಲೆ ಇಲ್ಲದೆ ಜೈಲುಪಾಲಾಗಿರುವ ಕಾರ್ಗಿಲ್ ಯುದ್ಧದ ಹಿರಿಯ ಯೋಧ ಮೊಹಮ್ಮದ್ ಸನಾವುಲ್ಲಾ ಅವರಿಗೆ ಅಪಾರ ಕಾಳಜಿ ಇರುವುದಾಗಿ ಭಾರತೀಯ ಸೇನೆ ಹೇಳಿದೆ. ಆದರೆ, ಈ ಸಂದರ್ಭದಲ್ಲಿ ಯಾವುದೇ ಸಹಾಯ ಮಾಡಲು ಸಾಧ್ಯವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದೆ.
2017ರಲ್ಲಿ ಗೌರವಾನ್ವಿತ ಕ್ಯಾಪ್ಟನ್ ಆಗಿ ನಿವೃತ್ತರಾದ ಯೋಧ ಸನಾವುಲ್ಲಾ ಅವರು ಸೇನೆಯಲ್ಲಿ 30 ವರ್ಷ ಸೇವೆ ಸಲ್ಲಿಸಿದ್ದಾರೆ. ಅವರ ಬಳಿ ಯಾವುದೇ ದಾಖಲೆಗಳು ಇಲ್ಲದೆ ಇರುವುದರಿಂದ ವಿದೇಶಿಗ ಎಂದು ತೀರ್ಮಾನಿಸಿ ಅಸ್ಸಾಂ ಗಡಿ ಪೊಲೀಸರು ಅವರನ್ನು ಬಂಧಿಸಿದ್ದರು.
'ಸನಾವುಲ್ಲಾ ಅವರ ಪತ್ನಿ ಸಮೀನಾ ಬೇಗಂ ಅವರಿಗೆ ಗುರುವಾರ ಕರೆ ಮಾಡಿ ಸಂತೈಸಿದ್ದೇವೆ. ಅವರಿಗೆ ಅಗತ್ಯವಾದ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದೇವೆ' ಎಂದು ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

'ಈ ವಿಚಾರದಲ್ಲಿ ಸೇನೆ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ. ಏಕೆಂದರೆ ಇದು ಕಾನೂನು ಪ್ರಕರಣ. ರಾಜ್ಯ ಸೈನಿಕ ಮಂಡಳಿಯೊಂದಿಗೆ ಕೂಡ ಅವರ ವಿಚಾರವನ್ನು ಚರ್ಚಿಸಿದ್ದೇವೆ. ಅವರು ವಕೀಲರ ಮುಲಕವೇ ಹೋರಾಟ ನಡೆಸಬೇಕು ಎಂದು ಮಂಡಳಿ ಹೇಳಿದೆ. ಆದರೆ, ಕಾನೂನು ಪ್ರಕ್ರಿಯೆ ಸಂದರ್ಭದಲ್ಲಿ ಅಗತ್ಯವಿದ್ದರೆ ಅವರಿಗೆ ಸಹಾಯ ಮಾಡಲು ಖಂಡಿತವಾಗಿಯೂ ನಾವು ಸಿದ್ಧರಿದ್ದೇವೆ' ಎಂದು ಅವರು ಹೇಳಿದ್ದಾರೆ.
ಸನಾವುಲ್ಲಾ ಅವರ ಬಿಡುಗಡೆಗೆ ನಾಗರಿಕರು, ನಿವೃತ್ತ ಸೇನಾಧಿಕಾರಿಗಳು ಆಗ್ರಹಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications