ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾರ್ಗಿಲ್ ಯೋಧನ ಸಂಕಷ್ಟ: ಮಧ್ಯಪ್ರವೇಶಿಸಲು ಆಗೊಲ್ಲ ಎಂದ ಸೇನೆ

|
Google Oneindia Kannada News

ಗುವಾಹಟಿ, ಜೂನ್ 1: ಅಸ್ಸಾಂನಲ್ಲಿ ಹುಟ್ಟಿ ಬೆಳೆದಿರುವುದಕ್ಕೆ ಸೂಕ್ತ ದಾಖಲೆ ಇಲ್ಲದೆ ಜೈಲುಪಾಲಾಗಿರುವ ಕಾರ್ಗಿಲ್ ಯುದ್ಧದ ಹಿರಿಯ ಯೋಧ ಮೊಹಮ್ಮದ್ ಸನಾವುಲ್ಲಾ ಅವರಿಗೆ ಅಪಾರ ಕಾಳಜಿ ಇರುವುದಾಗಿ ಭಾರತೀಯ ಸೇನೆ ಹೇಳಿದೆ. ಆದರೆ, ಈ ಸಂದರ್ಭದಲ್ಲಿ ಯಾವುದೇ ಸಹಾಯ ಮಾಡಲು ಸಾಧ್ಯವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದೆ.

2017ರಲ್ಲಿ ಗೌರವಾನ್ವಿತ ಕ್ಯಾಪ್ಟನ್ ಆಗಿ ನಿವೃತ್ತರಾದ ಯೋಧ ಸನಾವುಲ್ಲಾ ಅವರು ಸೇನೆಯಲ್ಲಿ 30 ವರ್ಷ ಸೇವೆ ಸಲ್ಲಿಸಿದ್ದಾರೆ. ಅವರ ಬಳಿ ಯಾವುದೇ ದಾಖಲೆಗಳು ಇಲ್ಲದೆ ಇರುವುದರಿಂದ ವಿದೇಶಿಗ ಎಂದು ತೀರ್ಮಾನಿಸಿ ಅಸ್ಸಾಂ ಗಡಿ ಪೊಲೀಸರು ಅವರನ್ನು ಬಂಧಿಸಿದ್ದರು.

30 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಯೋಧ ಭಾರತೀಯ ಪ್ರಜೆಯೇ ಅಲ್ಲವಂತೆ!30 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಯೋಧ ಭಾರತೀಯ ಪ್ರಜೆಯೇ ಅಲ್ಲವಂತೆ!

'ಸನಾವುಲ್ಲಾ ಅವರ ಪತ್ನಿ ಸಮೀನಾ ಬೇಗಂ ಅವರಿಗೆ ಗುರುವಾರ ಕರೆ ಮಾಡಿ ಸಂತೈಸಿದ್ದೇವೆ. ಅವರಿಗೆ ಅಗತ್ಯವಾದ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದೇವೆ' ಎಂದು ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

can not interfere in Kargil war veteran sanaullah arrest as foreigner

'ಈ ವಿಚಾರದಲ್ಲಿ ಸೇನೆ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ. ಏಕೆಂದರೆ ಇದು ಕಾನೂನು ಪ್ರಕರಣ. ರಾಜ್ಯ ಸೈನಿಕ ಮಂಡಳಿಯೊಂದಿಗೆ ಕೂಡ ಅವರ ವಿಚಾರವನ್ನು ಚರ್ಚಿಸಿದ್ದೇವೆ. ಅವರು ವಕೀಲರ ಮುಲಕವೇ ಹೋರಾಟ ನಡೆಸಬೇಕು ಎಂದು ಮಂಡಳಿ ಹೇಳಿದೆ. ಆದರೆ, ಕಾನೂನು ಪ್ರಕ್ರಿಯೆ ಸಂದರ್ಭದಲ್ಲಿ ಅಗತ್ಯವಿದ್ದರೆ ಅವರಿಗೆ ಸಹಾಯ ಮಾಡಲು ಖಂಡಿತವಾಗಿಯೂ ನಾವು ಸಿದ್ಧರಿದ್ದೇವೆ' ಎಂದು ಅವರು ಹೇಳಿದ್ದಾರೆ.

ಕಾರ್ಗಿಲ್ ಯುದ್ಧ: ಅನುಜ್ ಎಂಬ ವೀರ ಯೋಧನ ರೋಮಾಂಚನಕಾರಿ ಸಾಹಸಗಾಥೆ ಕಾರ್ಗಿಲ್ ಯುದ್ಧ: ಅನುಜ್ ಎಂಬ ವೀರ ಯೋಧನ ರೋಮಾಂಚನಕಾರಿ ಸಾಹಸಗಾಥೆ

ಸನಾವುಲ್ಲಾ ಅವರ ಬಿಡುಗಡೆಗೆ ನಾಗರಿಕರು, ನಿವೃತ್ತ ಸೇನಾಧಿಕಾರಿಗಳು ಆಗ್ರಹಿಸಿದ್ದಾರೆ.

English summary
The Indian Army said it cannot interfere in the case of Mohammed Sanaullah a retired service man declared as a foreigner and sent to jail in Assam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X