‘ಖಲಿಸ್ತಾನ್’ ವಿಚಾರದಲ್ಲಿ ಕೆನಡಾ ಕಿರಿಕ್ ಕಂಟಿನ್ಯೂ!
'ಖಲಿಸ್ತಾನ್' ವಿಚಾರದಲ್ಲಿ ಭಾರತದ ವಿರುದ್ಧ ಪಾಶ್ಚಿಮಾತ್ಯ ದೇಶಗಳ ಕಿರಿಕ್ ನಿಲ್ಲುತ್ತಿಲ್ಲ ಎಂಬ ಆರೋಪಗಳ ನಡುವೆ, ಇದೀಗ ಕೆನಡಾದಲ್ಲಿ ಮತ್ತೊಂದು ಪ್ರಮುಖ ಘಟನೆ ವರದಿಯಾಗಿದೆ. ಅದ್ರಲ್ಲೂ ಕೆಲ ದಿನಗಳ ಹಿಂದೆ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಆರೋಪದ ಅಡಿಯಲ್ಲಿ ಕೆಲವು ಭಾರತ ಮೂಲದ ಪ್ರಜೆಗಳನ್ನ ಕೆನಡಾ ಅರೆಸ್ಟ್ ಮಾಡಿತ್ತು. ಈಗ ಕೂಡ ಅದೇ ರೀತಿ ಮತ್ತೊಬ್ಬರನ್ನು ಅಂದರ್ ಮಾಡಿದೆ.
ಭಾರತದ ಮೋಸ್ಟ್ ವಾಟೆಂಡ್ ಉಗ್ರ & ಖಲಿಸ್ತಾನಿ ಗ್ಯಾಂಗ್ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ನ 2023ರ ಜೂನ್ 18ರಂದು ಕೆನಡಾದ ಸರ್ರೆಯಲ್ಲಿ ಗುಂಡಿಟ್ಟು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಹಿಂಸಾಚಾರ & ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾದ ಆರೋಪ ಕೊಲೆಯಾಗಿದ್ದ ನಿಜ್ಜರ್ ವಿರುದ್ಧ ಇತ್ತು. ಆದ್ರೆ ಭಾರತದ ಏಜೆಂಟ್ಗಳು ಈ ಕೊಲೆ ಮಾಡಿದ್ದಾರೆ ಎನ್ನುತ್ತಿದೆ ಕೆನಡಾ. ಹೀಗಾಗಿಯೇ ಸೂಕ್ತ ಸಾಕ್ಷ್ಯ ಇಲ್ಲದೆ, ಇಂತಹ ಆರೋಪ ಸರಿಯಲ್ಲ ಎಂದು ಭಾರತ ವಾರ್ನಿಂಗ್ ಮಾಡುತ್ತಿದೆ. ಹೀಗಿದ್ದಾಗ ಭಾರತ ಮೂಲದ ಪ್ರಜೆಗಳನ್ನ ಕೆನಡಾ ಅರೆಸ್ಟ್ ಮಾಡುತ್ತಿರುವುದು ಉರಿಯುವ ಬೆಂಕಿಗೆ ತುಪ್ಪ ಸುರಿದಂತೆ ಆಗುತ್ತಿದೆ. ಈಗಲೂ ಅಂತಹದ್ದೇ ಕಿತಾಪತಿ ಮಾಡಿದೆ.

ಕೊಲೆಗೆ ಸಂಚು ಮಾಡಿದ್ದು ಯಾರು?
ಹೌದು ಖಾಲಿಸ್ತಾನಿ ಪ್ರತ್ಯೇಕವಾದಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ನ ಹತ್ಯೆ ಕೇಸ್ ಹಿನ್ನೆಲೆ ಕೆನಡಾ ಪೊಲೀಸರು ಮತ್ತೊಬ್ಬ ಭಾರತೀಯ ಪ್ರಜೆಯ ಬಂಧಿಸಿದ್ದಾರೆ. ಈ ಮೂಲಕ ಈವರೆಗೂ ನಿಜ್ಜರ್ ಮರ್ಡರ್ ಕೇಸ್ನಲ್ಲಿ ಅರೆಸ್ಟ್ ಆಗಿರುವ ಭಾರತೀಯ ಪ್ರಜೆಗಳ ಸಂಖ್ಯೆ 4ಕ್ಕೆ ಏರಿದ್ದು, ಈಗ ಅರೆಸ್ಟ್ ಆಗಿರುವ ವ್ಯಕ್ತಿಯನ್ನ ಅಮನ್ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಇನ್ನು ನಿಜ್ಜರ್ ಕೊಲೆ ಮಾಡೋದಕ್ಕೆ ಸಂಚು ರೂಪಿಸಿದ ಆರೋಪ ಈತನ ಮೇಲಿತ್ತು ಎನ್ನುತ್ತಿದೆ ಕೆನಡಾ. ಜೂನ್ 18, 2023 ರಂದು ಸರ್ರೆಯ ಗುರುನಾನಕ್ ಸಿಖ್ ಗುರುದ್ವಾರ ಸಮೀಪ ನಿಜ್ಜರ್ನ ಭೀಕರವಾಗಿ ಕೊಲೆ ಮಾಡಲಾಗಿತ್ತು. ಗುರುದ್ವಾರಕ್ಕೆ ಬಂದಿದ್ದ ಹರ್ದೀಪ್ ಸಿಂಗ್ ನಿಜ್ಜರ್ ವಾಪಸ್ ಹೋಗುವಾಗ, ಗೇಟ್ ಬಳಿಯೇ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಿದ್ದರು ಕೊಲೆಗಾರರು.
ಜಗತ್ತಿನಾದ್ಯಂತ ಕೊಲೆಯ ಸಂಚಲನ!
45 ವರ್ಷ ವಯಸ್ಸಿನ ನಿಜ್ಜರ್ ಹತ್ಯೆ ಸಂಚಲನ ಸೃಷ್ಟಿ ಮಾಡಿದ್ದು, ಜಾಗತಿಕ ಮಟ್ಟದಲ್ಲಿಯೂ ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು. ಪ್ರಮುಖವಾಗಿ ಈ ಹತ್ಯೆ ಭಾರತ & ಕೆನಡಾ ಸಂಬಂಧಕ್ಕೆ ಹುಳಿ ಹಿಂಡಿತ್ತು. ಇದೀಗ ಅರೆಸ್ಟ್ ಆಗಿರುವ ಆರೋಪಿ ವಿರುದ್ಧ ನಿಜ್ಜರ್ ಕೊಲೆ ಮಾಡೋಕೆ ಸಂಚು ರೂಪಿಸಿದ ಆರೋಪ ಇದೆ. ನಿಜ್ಜರ್ ಕೊಲೆ ಪ್ರಕರಣದ ಸಂಬಂಧ ಅಮನ್ದೀಪ್ ಸಿಂಗ್ ಅರೆಸ್ಟ್ ಆಗಿದ್ದು, ಸದ್ಯ ಪೊಲೀಸರ ವಶದಲ್ಲಿರುವ ಆರೋಪಿ ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ನಂತರ ತಿಕ್ಕಾಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications