‘ಖಲಿಸ್ತಾನ್’ ವಿಚಾರದಲ್ಲಿ ಕೆನಡಾ ಕಿರಿಕ್ ಕಂಟಿನ್ಯೂ!
'ಖಲಿಸ್ತಾನ್' ವಿಚಾರದಲ್ಲಿ ಭಾರತದ ವಿರುದ್ಧ ಪಾಶ್ಚಿಮಾತ್ಯ ದೇಶಗಳ ಕಿರಿಕ್ ನಿಲ್ಲುತ್ತಿಲ್ಲ ಎಂಬ ಆರೋಪಗಳ ನಡುವೆ, ಇದೀಗ ಕೆನಡಾದಲ್ಲಿ ಮತ್ತೊಂದು ಪ್ರಮುಖ ಘಟನೆ ವರದಿಯಾಗಿದೆ. ಅದ್ರಲ್ಲೂ ಕೆಲ ದಿನಗಳ ಹಿಂದೆ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಆರೋಪದ ಅಡಿಯಲ್ಲಿ ಕೆಲವು ಭಾರತ ಮೂಲದ ಪ್ರಜೆಗಳನ್ನ ಕೆನಡಾ ಅರೆಸ್ಟ್ ಮಾಡಿತ್ತು. ಈಗ ಕೂಡ ಅದೇ ರೀತಿ ಮತ್ತೊಬ್ಬರನ್ನು ಅಂದರ್ ಮಾಡಿದೆ.
ಭಾರತದ ಮೋಸ್ಟ್ ವಾಟೆಂಡ್ ಉಗ್ರ & ಖಲಿಸ್ತಾನಿ ಗ್ಯಾಂಗ್ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ನ 2023ರ ಜೂನ್ 18ರಂದು ಕೆನಡಾದ ಸರ್ರೆಯಲ್ಲಿ ಗುಂಡಿಟ್ಟು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಹಿಂಸಾಚಾರ & ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾದ ಆರೋಪ ಕೊಲೆಯಾಗಿದ್ದ ನಿಜ್ಜರ್ ವಿರುದ್ಧ ಇತ್ತು. ಆದ್ರೆ ಭಾರತದ ಏಜೆಂಟ್ಗಳು ಈ ಕೊಲೆ ಮಾಡಿದ್ದಾರೆ ಎನ್ನುತ್ತಿದೆ ಕೆನಡಾ. ಹೀಗಾಗಿಯೇ ಸೂಕ್ತ ಸಾಕ್ಷ್ಯ ಇಲ್ಲದೆ, ಇಂತಹ ಆರೋಪ ಸರಿಯಲ್ಲ ಎಂದು ಭಾರತ ವಾರ್ನಿಂಗ್ ಮಾಡುತ್ತಿದೆ. ಹೀಗಿದ್ದಾಗ ಭಾರತ ಮೂಲದ ಪ್ರಜೆಗಳನ್ನ ಕೆನಡಾ ಅರೆಸ್ಟ್ ಮಾಡುತ್ತಿರುವುದು ಉರಿಯುವ ಬೆಂಕಿಗೆ ತುಪ್ಪ ಸುರಿದಂತೆ ಆಗುತ್ತಿದೆ. ಈಗಲೂ ಅಂತಹದ್ದೇ ಕಿತಾಪತಿ ಮಾಡಿದೆ.

ಕೊಲೆಗೆ ಸಂಚು ಮಾಡಿದ್ದು ಯಾರು?
ಹೌದು ಖಾಲಿಸ್ತಾನಿ ಪ್ರತ್ಯೇಕವಾದಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ನ ಹತ್ಯೆ ಕೇಸ್ ಹಿನ್ನೆಲೆ ಕೆನಡಾ ಪೊಲೀಸರು ಮತ್ತೊಬ್ಬ ಭಾರತೀಯ ಪ್ರಜೆಯ ಬಂಧಿಸಿದ್ದಾರೆ. ಈ ಮೂಲಕ ಈವರೆಗೂ ನಿಜ್ಜರ್ ಮರ್ಡರ್ ಕೇಸ್ನಲ್ಲಿ ಅರೆಸ್ಟ್ ಆಗಿರುವ ಭಾರತೀಯ ಪ್ರಜೆಗಳ ಸಂಖ್ಯೆ 4ಕ್ಕೆ ಏರಿದ್ದು, ಈಗ ಅರೆಸ್ಟ್ ಆಗಿರುವ ವ್ಯಕ್ತಿಯನ್ನ ಅಮನ್ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಇನ್ನು ನಿಜ್ಜರ್ ಕೊಲೆ ಮಾಡೋದಕ್ಕೆ ಸಂಚು ರೂಪಿಸಿದ ಆರೋಪ ಈತನ ಮೇಲಿತ್ತು ಎನ್ನುತ್ತಿದೆ ಕೆನಡಾ. ಜೂನ್ 18, 2023 ರಂದು ಸರ್ರೆಯ ಗುರುನಾನಕ್ ಸಿಖ್ ಗುರುದ್ವಾರ ಸಮೀಪ ನಿಜ್ಜರ್ನ ಭೀಕರವಾಗಿ ಕೊಲೆ ಮಾಡಲಾಗಿತ್ತು. ಗುರುದ್ವಾರಕ್ಕೆ ಬಂದಿದ್ದ ಹರ್ದೀಪ್ ಸಿಂಗ್ ನಿಜ್ಜರ್ ವಾಪಸ್ ಹೋಗುವಾಗ, ಗೇಟ್ ಬಳಿಯೇ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಿದ್ದರು ಕೊಲೆಗಾರರು.
ಜಗತ್ತಿನಾದ್ಯಂತ ಕೊಲೆಯ ಸಂಚಲನ!
45 ವರ್ಷ ವಯಸ್ಸಿನ ನಿಜ್ಜರ್ ಹತ್ಯೆ ಸಂಚಲನ ಸೃಷ್ಟಿ ಮಾಡಿದ್ದು, ಜಾಗತಿಕ ಮಟ್ಟದಲ್ಲಿಯೂ ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು. ಪ್ರಮುಖವಾಗಿ ಈ ಹತ್ಯೆ ಭಾರತ & ಕೆನಡಾ ಸಂಬಂಧಕ್ಕೆ ಹುಳಿ ಹಿಂಡಿತ್ತು. ಇದೀಗ ಅರೆಸ್ಟ್ ಆಗಿರುವ ಆರೋಪಿ ವಿರುದ್ಧ ನಿಜ್ಜರ್ ಕೊಲೆ ಮಾಡೋಕೆ ಸಂಚು ರೂಪಿಸಿದ ಆರೋಪ ಇದೆ. ನಿಜ್ಜರ್ ಕೊಲೆ ಪ್ರಕರಣದ ಸಂಬಂಧ ಅಮನ್ದೀಪ್ ಸಿಂಗ್ ಅರೆಸ್ಟ್ ಆಗಿದ್ದು, ಸದ್ಯ ಪೊಲೀಸರ ವಶದಲ್ಲಿರುವ ಆರೋಪಿ ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ನಂತರ ತಿಕ್ಕಾಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications