ಭಾರತಕ್ಕೆ 75ನೇ ಗಣರಾಜ್ಯೋತ್ಸವ ಶುಭಾಶಯ ತಿಳಿಸಿದ ಕೆನಡಾ!
ಭಾರತ & ಕೆನಡಾ ಈಗ ಶತ್ರುಗಳ ರೀತಿ ಕಿತ್ತಾಡುತ್ತಿವೆ. ಅದರಲ್ಲೂ ಕೆನಡಾ ಪ್ರಧಾನಿ ನೀಡಿದ್ದ ಎಡವಟ್ಟು ಹೇಳಿಕೆ ಕಿಚ್ಚು ಹೊತ್ತಿಸಿದೆ. ಖಲಿಸ್ತಾನಿ ಉಗ್ರರನ್ನು ಬೆಂಬಲಿಸುವ ಅಬ್ಬರದಲ್ಲಿ ಇದೇ ಕೆನಡಾ ಭಾರಿ ಎಡವಟ್ಟು ಮಾಡಿಕೊಂಡಿದೆ. ಹೀಗಿದ್ದಾಗ ಭಾರತ & ಕೆನಡಾ ಸಂಬಂಧದಲ್ಲಿ ದೊಡ್ಡ ಬಿರುಕು ಮೂಡಿದೆ. ಪರಿಸ್ಥಿತಿ ಹೀಗೆ ಕೈಮೀರಿ ಹೋಗುತ್ತಿರುವಾಗ ಖುದ್ದು ಕೆನಡಾ, ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದೆ ಭಾರತಕ್ಕೆ!
ಇದೀಗ ಭಾರತದಲ್ಲಿ ಇರುವ ಕೆನಡಾ ರಾಯಭಾರ ಕಚೇರಿ ಕಡೆಯಿಂದ ಭಾರತಕ್ಕೆ ಗಣರಾಜ್ಯ ದಿನದ ಶುಭಾಶಯ ಕೋರಲಾಗಿದ್ದು. ಹಿಂದಿ & ಇಂಗ್ಲಿಷ್ ಭಾಷೆಯಲ್ಲಿ ಕೆನಡಾ ಶುಭಾಶಯ ತಿಳಿಸಿದೆ. ಭಾರತಕ್ಕೆ ಫ್ರಾನ್ಸ್ ಅಧ್ಯಕ್ಷರು ಗಣರಾಜ್ಯೋತ್ಸವದ ಪ್ರಯುಕ್ತ ವಿಶೇಷ ಅತಿಥಿಯಾಗಿ, ಆಗಿಮಿಸಿರುವ ಸಮಯದಲ್ಲೇ ಕೆನಡಾ ಈ ರೀತಿ ಭಾರತಕ್ಕೆ ಶುಭಾಶಯ ಕೋರಿದ್ದು ಕುತೂಹಲ ಕೆರಳಿಸಿದೆ. ಹಾಗೇ ಎರಡೂ ದೇಶಗಳ ನಡುವೆ ಸಂಬಂಧ ಸುಧಾರಣೆ ಕಾಣುತ್ತಾ? ಎಂಬ ಕುರಿತು ಆಶಾವಾದ ಕೂಡ ಮೂಡಿದೆ.

ಕಿರಿಕ್ ಶುರುವಾಗಿದ್ದು ಎಲ್ಲಿಂದ?
ಭಾರತದ ಮೋಸ್ಟ್ ವಾಟೆಂಡ್ ಉಗ್ರ & ಖಲಿಸ್ತಾನಿ ಗ್ಯಾಂಗ್ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ನ 2023ರ ಜೂನ್ 18ರಂದು ಕೆನಡಾದ ಸರ್ರೆಯಲ್ಲಿ ಗುಂಡಿಟ್ಟು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಹಿಂಸಾಚಾರ & ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಹೀಗೆ ಕೊಲೆಯಾಗಿದ್ದ ನಿಜ್ಜರ್ ವಿರುದ್ಧ ಇತ್ತು. ಈ ಕೊಲೆಯನ್ನು ಭಾರತದ ಏಜೆಂಟ್ಗಳು ಮಾಡಿದ್ದಾರೆ ಎನ್ನುತ್ತಿದ್ದಾರೆ ಕೆನಡಾ ಪ್ರಧಾನಿ. ಹೀಗಾಗಿ ಪರಿಸ್ಥಿತಿ ಕೈಮೀರಿ ಹೋಗಿತ್ತು.
ಭಾರತ ಕೂಡ ತಿರುಗೇಟು ನೀಡಿತ್ತು
ಸೂಕ್ತ ಸಾಕ್ಷ್ಯಗಳೇ ಇಲ್ಲದೆ ಇಂತಹ ಆರೋಪ ಸರಿಯಲ್ಲ ಎಂದು ಭಾರತ ಕೂಡ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿತ್ತು. ಈ ಬೆಳವಣಿಗೆ ಮಧ್ಯೆ ಕಿರಿಕಿರಿ ಕೂಡ ಜೋರಾಗುತ್ತಿದ್ದು ಈಗ ಭಾರತಕ್ಕೆ ಕೆನಡಾ ರಾಯಭಾರ ಕಚೇರಿ ಶುಭಾಶಯ ಕೋರಿದೆ. ಗಣರಾಜ್ಯೋತ್ಸವ ಶುಭಾಶಯ ತಿಳಿಸಿ, ಗಮನ ಕೂಡ ಸೆಳೆದಿದೆ. ಹಾಗೇ ಪರಿಸ್ಥಿತಿ ಸುಧಾರಿಸುವ ಮುನ್ಸೂಚನೆ ಕೂಡ ಸಿಗುತ್ತಿದೆ.

ಹಠ ಬಿಡದ ಕೆನಡಾ ಪ್ರಧಾನಿ
ಭಾರತದ ಜತೆ ಮಾತುಕತೆ ನಡೆಸಿ ಪರಿಸ್ಥಿತಿ ತಿಳಿಯಾಗಿಸಬೇಕಿದ್ದ ಕೆನಡಾ ಮಾತ್ರ ಹಠ ಬಿಡುತ್ತಿಲ್ಲ ಅದ್ರಲ್ಲೂ ಕೆನಡಾ ಪ್ರಧಾನಿ ತೆಗೆದುಕೊಳ್ಳುತ್ತಿರುವ ನಿರ್ಧಾರದಿಂದ ಈಗ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ಭಾರತ, ಕೆನಡಾ ಸಂಬಂಧ ಸಂಪೂರ್ಣ ಹಾಳಾಗಿ ಹೋಗುವ ಹಂತ ತಲುಪಿದೆ ಎನ್ನಲಾಗಿತ್ತು. ಆದರೆ ಸಂಬಂಧ ಸುಧಾರಣೆಗೆ ಇತರ ದೇಶಗಳು ಪ್ರಯತ್ನ ಆರಂಭಿಸಿವೆ. ಈ ನಡುವೆ ಖುದ್ದು ಕೆನಡಾ ರಾಜತಾಂತ್ರಿಕ ಕಚೇರಿ ಕೂಡ ಭಾರತಕ್ಕೆ ಶುಭಾಶಯ ಕೋರಿದೆ.
ಒಟ್ನಲ್ಲಿ ಕೆನಡಾ ಸರ್ಕಾರ ಖಲಿಸ್ತಾನಿಗಳ ಪರ ಮೃದು ಧೋರಣೆ ಹೊಂದಿರುವುದೇ ದೊಡ್ಡ ಎಡವಟ್ಟಿಗೆ ಕಾರಣವಾಗುತ್ತಿದೆ. ಹೀಗಿದ್ದಾಗ ಭಾರತದ ಜೊತೆಗೆ ಸಂಬಂಧ ಕೂಡ ಹಾಳಾಗಿ, ಆತಂಕದ ವಾತಾವರಣ ನಿರ್ಮಾಣ ಆಗುತ್ತಿದೆ. ಭಾರತ ಕೂಡ ಕೆನಡಾದ ಆರೋಪಕ್ಕೆ ತಕ್ಕ ಉತ್ತರ ನೀಡುತ್ತಿದೆ. ಹೀಗಾಗಿ ಇದೆಲ್ಲ ಎಲ್ಲಿಗೆ ಬಂದು ನಿಲ್ಲುತ್ತೆ? ಅಂತಾ ಕಾದು ನೋಡಬೇಕಿದೆ.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ











Click it and Unblock the Notifications