ಭಾರತಕ್ಕೆ 75ನೇ ಗಣರಾಜ್ಯೋತ್ಸವ ಶುಭಾಶಯ ತಿಳಿಸಿದ ಕೆನಡಾ!
ಭಾರತ & ಕೆನಡಾ ಈಗ ಶತ್ರುಗಳ ರೀತಿ ಕಿತ್ತಾಡುತ್ತಿವೆ. ಅದರಲ್ಲೂ ಕೆನಡಾ ಪ್ರಧಾನಿ ನೀಡಿದ್ದ ಎಡವಟ್ಟು ಹೇಳಿಕೆ ಕಿಚ್ಚು ಹೊತ್ತಿಸಿದೆ. ಖಲಿಸ್ತಾನಿ ಉಗ್ರರನ್ನು ಬೆಂಬಲಿಸುವ ಅಬ್ಬರದಲ್ಲಿ ಇದೇ ಕೆನಡಾ ಭಾರಿ ಎಡವಟ್ಟು ಮಾಡಿಕೊಂಡಿದೆ. ಹೀಗಿದ್ದಾಗ ಭಾರತ & ಕೆನಡಾ ಸಂಬಂಧದಲ್ಲಿ ದೊಡ್ಡ ಬಿರುಕು ಮೂಡಿದೆ. ಪರಿಸ್ಥಿತಿ ಹೀಗೆ ಕೈಮೀರಿ ಹೋಗುತ್ತಿರುವಾಗ ಖುದ್ದು ಕೆನಡಾ, ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದೆ ಭಾರತಕ್ಕೆ!
ಇದೀಗ ಭಾರತದಲ್ಲಿ ಇರುವ ಕೆನಡಾ ರಾಯಭಾರ ಕಚೇರಿ ಕಡೆಯಿಂದ ಭಾರತಕ್ಕೆ ಗಣರಾಜ್ಯ ದಿನದ ಶುಭಾಶಯ ಕೋರಲಾಗಿದ್ದು. ಹಿಂದಿ & ಇಂಗ್ಲಿಷ್ ಭಾಷೆಯಲ್ಲಿ ಕೆನಡಾ ಶುಭಾಶಯ ತಿಳಿಸಿದೆ. ಭಾರತಕ್ಕೆ ಫ್ರಾನ್ಸ್ ಅಧ್ಯಕ್ಷರು ಗಣರಾಜ್ಯೋತ್ಸವದ ಪ್ರಯುಕ್ತ ವಿಶೇಷ ಅತಿಥಿಯಾಗಿ, ಆಗಿಮಿಸಿರುವ ಸಮಯದಲ್ಲೇ ಕೆನಡಾ ಈ ರೀತಿ ಭಾರತಕ್ಕೆ ಶುಭಾಶಯ ಕೋರಿದ್ದು ಕುತೂಹಲ ಕೆರಳಿಸಿದೆ. ಹಾಗೇ ಎರಡೂ ದೇಶಗಳ ನಡುವೆ ಸಂಬಂಧ ಸುಧಾರಣೆ ಕಾಣುತ್ತಾ? ಎಂಬ ಕುರಿತು ಆಶಾವಾದ ಕೂಡ ಮೂಡಿದೆ.

ಕಿರಿಕ್ ಶುರುವಾಗಿದ್ದು ಎಲ್ಲಿಂದ?
ಭಾರತದ ಮೋಸ್ಟ್ ವಾಟೆಂಡ್ ಉಗ್ರ & ಖಲಿಸ್ತಾನಿ ಗ್ಯಾಂಗ್ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ನ 2023ರ ಜೂನ್ 18ರಂದು ಕೆನಡಾದ ಸರ್ರೆಯಲ್ಲಿ ಗುಂಡಿಟ್ಟು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಹಿಂಸಾಚಾರ & ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಹೀಗೆ ಕೊಲೆಯಾಗಿದ್ದ ನಿಜ್ಜರ್ ವಿರುದ್ಧ ಇತ್ತು. ಈ ಕೊಲೆಯನ್ನು ಭಾರತದ ಏಜೆಂಟ್ಗಳು ಮಾಡಿದ್ದಾರೆ ಎನ್ನುತ್ತಿದ್ದಾರೆ ಕೆನಡಾ ಪ್ರಧಾನಿ. ಹೀಗಾಗಿ ಪರಿಸ್ಥಿತಿ ಕೈಮೀರಿ ಹೋಗಿತ್ತು.
ಭಾರತ ಕೂಡ ತಿರುಗೇಟು ನೀಡಿತ್ತು
ಸೂಕ್ತ ಸಾಕ್ಷ್ಯಗಳೇ ಇಲ್ಲದೆ ಇಂತಹ ಆರೋಪ ಸರಿಯಲ್ಲ ಎಂದು ಭಾರತ ಕೂಡ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿತ್ತು. ಈ ಬೆಳವಣಿಗೆ ಮಧ್ಯೆ ಕಿರಿಕಿರಿ ಕೂಡ ಜೋರಾಗುತ್ತಿದ್ದು ಈಗ ಭಾರತಕ್ಕೆ ಕೆನಡಾ ರಾಯಭಾರ ಕಚೇರಿ ಶುಭಾಶಯ ಕೋರಿದೆ. ಗಣರಾಜ್ಯೋತ್ಸವ ಶುಭಾಶಯ ತಿಳಿಸಿ, ಗಮನ ಕೂಡ ಸೆಳೆದಿದೆ. ಹಾಗೇ ಪರಿಸ್ಥಿತಿ ಸುಧಾರಿಸುವ ಮುನ್ಸೂಚನೆ ಕೂಡ ಸಿಗುತ್ತಿದೆ.

ಹಠ ಬಿಡದ ಕೆನಡಾ ಪ್ರಧಾನಿ
ಭಾರತದ ಜತೆ ಮಾತುಕತೆ ನಡೆಸಿ ಪರಿಸ್ಥಿತಿ ತಿಳಿಯಾಗಿಸಬೇಕಿದ್ದ ಕೆನಡಾ ಮಾತ್ರ ಹಠ ಬಿಡುತ್ತಿಲ್ಲ ಅದ್ರಲ್ಲೂ ಕೆನಡಾ ಪ್ರಧಾನಿ ತೆಗೆದುಕೊಳ್ಳುತ್ತಿರುವ ನಿರ್ಧಾರದಿಂದ ಈಗ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ಭಾರತ, ಕೆನಡಾ ಸಂಬಂಧ ಸಂಪೂರ್ಣ ಹಾಳಾಗಿ ಹೋಗುವ ಹಂತ ತಲುಪಿದೆ ಎನ್ನಲಾಗಿತ್ತು. ಆದರೆ ಸಂಬಂಧ ಸುಧಾರಣೆಗೆ ಇತರ ದೇಶಗಳು ಪ್ರಯತ್ನ ಆರಂಭಿಸಿವೆ. ಈ ನಡುವೆ ಖುದ್ದು ಕೆನಡಾ ರಾಜತಾಂತ್ರಿಕ ಕಚೇರಿ ಕೂಡ ಭಾರತಕ್ಕೆ ಶುಭಾಶಯ ಕೋರಿದೆ.
ಒಟ್ನಲ್ಲಿ ಕೆನಡಾ ಸರ್ಕಾರ ಖಲಿಸ್ತಾನಿಗಳ ಪರ ಮೃದು ಧೋರಣೆ ಹೊಂದಿರುವುದೇ ದೊಡ್ಡ ಎಡವಟ್ಟಿಗೆ ಕಾರಣವಾಗುತ್ತಿದೆ. ಹೀಗಿದ್ದಾಗ ಭಾರತದ ಜೊತೆಗೆ ಸಂಬಂಧ ಕೂಡ ಹಾಳಾಗಿ, ಆತಂಕದ ವಾತಾವರಣ ನಿರ್ಮಾಣ ಆಗುತ್ತಿದೆ. ಭಾರತ ಕೂಡ ಕೆನಡಾದ ಆರೋಪಕ್ಕೆ ತಕ್ಕ ಉತ್ತರ ನೀಡುತ್ತಿದೆ. ಹೀಗಾಗಿ ಇದೆಲ್ಲ ಎಲ್ಲಿಗೆ ಬಂದು ನಿಲ್ಲುತ್ತೆ? ಅಂತಾ ಕಾದು ನೋಡಬೇಕಿದೆ.
-
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ











Click it and Unblock the Notifications