ಗಿರ್ ಅರಣ್ಯದ 21 ಸಿಂಹಗಳ ಸಾವಿನ ಹಿಂದಿನ ರಹಸ್ಯ ಬಯಲಾಯ್ತು
ಬೆಂಗಳೂರು, ಅಕ್ಟೋಬರ್ 06: ಗುಜರಾತ್ನ ಗಿರ್ ಅರಣ್ಯ ಪ್ರದೇಶದಲ್ಲಿ ಕೆಲವೇ ದಿನದಲ್ಲಿ 21 ಸಿಂಹಗಳು ಸತ್ತಿದ್ದು ಆತಂಕಕ್ಕೆ ಕಾರಣವಾಗಿತ್ತು. ಆದರೀಗ ಅದಕ್ಕೆ ಕಾರಣ ಪತ್ತೆಯಾಗಿದೆ.
ಸರಣಿ ಸಿಂಹಗಳ ಸಾವಿಗೆ ಕ್ಯಾನಿನ್ ಡಿಸ್ಟೆಂಪರ್ ಎಂಬ ವೈರಸ್ (ಸಿಡಿವಿ) ಕಾರಣ ಎಂದು ವನ್ಯಜೀವಿ ತಜ್ಞರು ಪತ್ತೆ ಹಚ್ಚಿದ್ದಾರೆ. ಸತ್ತ ಹಲವು ಸಿಂಹಗಳ ದೇಹದಲ್ಲಿ ಸಿಡಿವಿ ವೈರಾಣು ಪತ್ತೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಲಿ(ಐಸಿಎಂಆರ್) ಮತ್ತು ರಾಷ್ಟ್ರೀಯ ವೈರಾಣುಶಾಸ್ತ್ರ ಸಂಸ್ಥೆ(ಎನ್ಐವಿ) ಹೇಳಿದೆ. ಈ ಸಂಸ್ಥೆಗಳು ಸತ್ತ ಸಿಂಹಗಳ ಮರಣೋತ್ತರ ಪರೀಕ್ಷೆ ನಡೆಸಿದ್ದವು.
ಸಿಂಹಗಳನ್ನು ಈ ವೈರಾಣುವಿನಿಂದ ಪಾರು ಮಾಡಲು ವನ್ಯಜೀವಿ ಇಲಾಖೆಯು ಅಮೆರಿಕದಿಂದ 300 ವೈರಾಣು ನಿರೋಧಕ ಚುಚ್ಚುಮದ್ದುಗಳನ್ನು ಕೂಡಲೇ ತರಿಸಲಾಗುತ್ತಿದೆ ಎಂದು ಐಸಿಎಂಆರ್ ಹೇಳಿದೆ.

ಪೂರ್ವ ಆಫ್ರಿಕಾದಲ್ಲಿ ಸಹ ಈ ವೈರಾಣು ವನ್ಯಜೀವಿಗಳಿಗೆ ಭಾರಿ ಹಾನಿ ಮಾಡಿತ್ತು. ಕೇವಲ ಸಿಂಹಗಳನ್ನಷ್ಟೆ ಅಲ್ಲ ಎಲ್ಲ ರೀತಿಯ ವನ್ಯಜೀವಿಗಳನ್ನು ಕಾಡುವ ಈ ವೈರಾಣು ಪೂರ್ಣ ಆಫ್ರಿಕಾದಲ್ಲಿ ಶೇ 30% ವನ್ಯಜೀವಿಗಳ ಜೀವಕ್ಕೆ ಎರವಾಗಿತ್ತು.
ಅಮೆರಿಕದಿಂದ ತರಿಸಲಾಗುತ್ತಿರುವ ಚುಚ್ಚುಮದ್ದನ್ನು ಕೂಡಲೇ ಗಿರ್ ಅರಣ್ಯ ಪ್ರದೇಶದ ಸಿಂಹಗಳಿಗೆ ಮತ್ತು ಅಲ್ಲಿನ ಇತರ ವನ್ಯಜೀವಿಗಳಿಗೆ ನೀಡಲಾಗುತ್ತದೆ ಎಂದು ಐಸಿಎಂಆರ್ ಸಿಬ್ಬಂದಿ ಹೇಳಿದ್ದಾರೆ.
ಗಿರ್ ಪ್ರದೇಶದಲ್ಲಿ ಸತತವಾಗಿ ಅಸುನೀಗಿದ ಸಿಂಹಗಳು ರಾಷ್ಟ್ರದ ಗಮನ ಸೆಳೆದಿದ್ದವು. ಪ್ರಾಣಿ ಪ್ರಿಯರು ಈ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದರು. ಸಿಂಹಗಳ ನಡುವೆ ಬೇಟೆ ಪ್ರದೇಶ ಹಂಚಿಕೆಗಾಗಿ ಯುದ್ಧ ನಡೆದು ಸಿಂಹಗಳು ಸಾಯುತ್ತಿವೆ ಎಂದು ಮೊದಲ ನಂಬಲಾಗಿತ್ತು. ಆದರೆ ಅದು ಸುಳ್ಳೆಂದು ಈಗ ತಿಳಿದುಬಂದಿದೆ.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications