ದೇಶಕ್ಕೆ ಬಂದು ಶರಣಾಗು ಅಂದರೆ, ನೀರವ್ ಮೋದಿ ಮಾಡಿದ್ದು ಇನ್ನೊಂದು
ಉದ್ದೇಶಪೂರ್ವಕ ಸುಸ್ತಿದಾರ ನೀರವ್ ಪಟೇಲ್, ಭಾರತಕ್ಕೆ ಬಂದರೆ ನನ್ನ ಮೇಲೆ ದಾಳಿ ನಡೆಯಬಹುದು, ಭಯವಾಗುತ್ತಿದೆ, ಹಾಗಾಗಿ ಸದ್ಯ ಭಾರತಕ್ಕೆ ಬರಲು ಸಾಧ್ಯವಿಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಇಮೇಲ್ ಬರೆದಿದ್ದಾರೆ.
ನವದೆಹಲಿ, ಡಿ 1: ಉದ್ದೇಶಪೂರ್ವಕ ಸುಸ್ತಿದಾರ ನೀರವ್ ಮೋದಿ, ಭಾರತಕ್ಕೆ ಬಂದರೆ ನನ್ನ ಮೇಲೆ ದಾಳಿ ನಡೆಯಬಹುದು, ಭಯವಾಗುತ್ತಿದೆ, ಹಾಗಾಗಿ ಸದ್ಯ ಭಾರತಕ್ಕೆ ಬರಲು ಸಾಧ್ಯವಿಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಇಮೇಲ್ ಬರೆದಿದ್ದಾರೆ.
ದೇಶಕ್ಕೆ ಹಿಂದಿರುಗಿದರೆ ನನ್ನ ಜೀವಕ್ಕೆ ಅಪಾಯವಿದೆ. ನನ್ನ ಪ್ರತಿಕೃತಿಯನ್ನು ದಹನ ಮಾಡಿದ ಹಲವಾರು ಘಟನೆಗಳು ನಡೆದಿದ್ದು, ಭದ್ರತಾ ದೃಷ್ಟಿಯಿಂದ, ಸದ್ಯದ ಮಟ್ಟಿಗೆ ಭಾರತಕ್ಕೆ ವಾಪಸ್ ಆಗಲು ಸಾಧ್ಯವಿಲ್ಲ ಎಂದು ಇಡಿ ಮತ್ತು ಸಿಬಿಐಗೆ, ನೀರವ್ ಮೋದಿ, ಇಮೇಲ್ ನಲ್ಲಿ ಮನವಿ ಮಾಡಿದ್ದಾರೆ.

ಈ ಸಂಬಂಧ ಹೇಳಿಕೆಯನ್ನು ನೀಡಿರುವ ನೀರವ್ ಪರ ವಕೀಲ ವಿ ಅಗರವಾಲ್, ಬ್ಯಾಂಕ್ ವಂಚನೆ ಪ್ರಕರಣದಲ್ಲಿ ನನ್ನ ಕಕ್ಷಿದಾರನನ್ನು ಪೋಸ್ಟರ್ ಬಾಯ್ ರೀತಿಯಲ್ಲಿ ಅವಮಾನಿಸಲಾಗುತ್ತಿದೆ. ಬನ್ಸಾಲ್ ಎನ್ನುವ ವ್ಯಕ್ತಿ ಸಿಬಿಐ ನೀಡಿದ ಟಾರ್ಚರ್ ನಿಂದ ಆತ್ಮಹತ್ಯೆ ಮಾಡಿಕೊಂಡರು ಎಂದು ಸಿಬಿಐ ಕಾರ್ಯವೈಖರಿಯನ್ನು ವಕೀಲರು ದೂರಿದ್ದಾರೆ.
ಅವರ ಬ್ಯಾಂಕ್ ಖಾತೆ ಎನ್ಪಿಎ (non performance asset) ಆಗದಿದ್ದಾಗ, ದೇಶದ ಕಾನೂನಿಗೆ ಮಾನ್ಯವಾಗಿರುವ ಪಾಸ್ಪೋರ್ಟ್ ಮತ್ತು ಅಧಿಕೃತವಾದ ವೀಸಾ ಮೂಲಕ, ವಿದೇಶಕ್ಕೆ ತೆರಳಿದ್ದರು ಎಂದು ವಕೀಲರು ಹೇಳಿದ್ದಾರೆ.
ಪಿಎಂಎಲ್ಎ ಕೋರ್ಟೀನಲ್ಲಿ ಉದ್ದೇಶಪೂರ್ವಕ ಸುಸ್ತಿದಾರನೋ, ಅಲ್ಲವೋ ಎನ್ನುವುದು ವಿಚಾರಣೆಯ ಹಂತದಲ್ಲಿದೆ. ಆದರೆ, ಇದಕ್ಕೆ ಮೊದಲೇ ಸಿಬಿಐ, ನನ್ನ ಕಕ್ಷಿದಾರನನ್ನು ಉದ್ದೇಶಪೂರ್ವಕ ಸುಸ್ತಿದಾರ ಎಂದು ನಿರ್ಧರಿಸಿಬಿಟ್ಟಿದೆ ಎಂದು ನೀರವ್ ಪರ ವಕೀಲರು ಬೇಸರ ವ್ಯಕ್ತಪಡಿಸಿದ್ದಾರೆ.
ದೇಶ ಬಿಟ್ಟು ಹೋಗಿ ತಲೆ ತಪ್ಪಿಸಿಕೊಂಡಿರುವ ನೀರವ್ ಮೋದಿಯ 56 ಕೋಟಿ ಮೌಲ್ಯದ 11 ಆಸ್ತಿಗಳನ್ನು ದುಬೈನಲ್ಲಿ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿಕೊಂಡಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚಿಸಿ, 200 ಕೋಟಿ ಅಮೆರಿಕನ್ ಡಾಲರ್ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪ ಮೋದಿ ಮೇಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications