Delhi Weather: ರಾಷ್ಟ್ರ ರಾಜಧಾನಿಗೆ ಚಳಿ ಕಂಟಕ, 6 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು
ನವದೆಹಲಿ: ರಾಷ್ಟ್ರ ರಾಜಧಾನಿಗೆ ಒಂದಲ್ಲ ಒಂದು ಸಂಕಷ್ಟ ಎದುರಾಗುತ್ತಾ ಇದ್ದು, ಸಾಲು ಸಾಲು ಕಂಟಕ ದೆಹಲಿ ಜನರನ್ನು ಕಾಡುತ್ತಲೇ ಇದೆ. ಒಂದು ಕಡೆ ಮಾಲಿನ್ಯದ ಪರಿಣಾಮ, ಈಗಾಗಲೇ ಸಾವಿರಾರು ಜನರು ಆಸ್ಪತ್ರೆ ಸೇರಿದ್ಧಾರೆ. ಹೀಗಿದ್ದಾಗ ದೆಹಲಿ 6 ವರ್ಷಗಳಲ್ಲೇ ಅತ್ಯಂತ ಶೀತಮಯ ಡಿಸೆಂಬರ್ ದಿನವನ್ನು ದಾಖಲಿಸಿದೆ. 2025 ಚಳಿಗಾಲವು ದೆಹಲಿಯ ಜನರ ಪಾಲಿಗೆ ತೀವ್ರ ಆಘಾತ ತಂದೊಡ್ಡಿದ್ದು, ಗರಿಷ್ಠ ತಾಪಮಾನ 14.2 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದೆ. ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಈ ಬಗ್ಗೆ ಬಿಡುಗಡೆ ಮಾಡಿರುವ ಮಾಹಿತಿ ಗಮನ ಸೆಳೆದಿದೆ.
ಐಎಂಡಿ ಮಾಹಿತಿಯಂತೆ ದೆಹಲಿ ನಗರವು ಕೊನೇ ಬಾರಿಗೆ ಕಡಿಮೆ ಗರಿಷ್ಠ ತಾಪಮಾನ ದಾಖಲಿಸಿದ್ದು 2019ರ ಡಿಸೆಂಬರ್ 31 ರಂದು, ಆಗ ಗರಿಷ್ಠ ತಾಪಮಾನವು 9.4 ಡಿಗ್ರಿ ಸೆಲ್ಸಿಯಸ್ಗೆ ಇಳಿದಿತ್ತು. ಈಗ ಮತ್ತೆ 14.2 ಡಿಗ್ರಿ ಸೆಲ್ಸಿಯಸ್ಗೆ ಇಳಿಕೆ ಕಂಡಿದೆ. ವರ್ಷದ ಕೊನೆಯ ದಿನವಾದ ಬುಧವಾರ ಗರಿಷ್ಠ ತಾಪಮಾನ 14.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಈ ತಾಪಮಾನ ಸಾಮಾನ್ಯಕ್ಕಿಂತ ಸುಮಾರು 6.2 ಡಿಗ್ರಿ ಸೆಲ್ಸಿಯಸ್ ಕಡಿಮೆ ಆಗಿದೆ ಎಂದು ಮಾಹಿತಿ ನೀಡಲಾಗಿದೆ. ಹಾಗೇ ಪ್ರಸಕ್ತ ಚಳಿಗಾಲದ ಅವಧಿಯಲ್ಲಿ ಮಾಲಿನ್ಯ ಕೂಡ ದೆಹಲಿ ಜನರನ್ನು ಇನ್ನಿಲ್ಲದಂತೆ ಕಾಡಿದೆ.

ಮಾಲಿನ್ಯದ ಕಾರಣಕ್ಕೆ ನಲುಗಿದ ದೆಹಲಿ
ಚಳಿಯ ಜೊತೆ ದೆಹಲಿ ಜನರಿಗೆ ವಿಪರೀತ ಮಾಲಿನ್ಯ ಕೂಡ ಸಾಕಷ್ಟು ಸಮಸ್ಯೆ ಮಾಡುತ್ತಾ ಇದೆ. ಭಾರತದಲ್ಲಿ ವಾಯು ಮಾಲಿನ್ಯ ಎಂಬುದು ದೊಡ್ಡ ಪಿಡುಗಾಗಿ ಪರಿಣಮಿಸಿದೆ, ಅದರಲ್ಲೂ ರಾಷ್ಟ್ರ ರಾಜಧಾನಿ ದೆಹಲಿ ಪರಿಸ್ಥಿತಿ ದೇವರಿಗೆ ಪ್ರೀತಿ ಎಂಬಂತಾಗಿದೆ. ವಾಯು ಮಾಲಿನ್ಯ ಪರಿಣಾಮ ಈಗ ದೆಹಲಿ ಜನ ಊರು ಬಿಡುವಂತೆ ಆಗಿದ್ದು, ಸಾವಿರಾರು ಜನ ಉಸಿರಾಡಲು ಪರದಾಡುತ್ತಾ ಆಸ್ಪತ್ರೆ ಸೇರಿದ್ದಾರೆ. ಚಳಿಗಾಲ ಮುಗಿಯಲು ಇನ್ನೂ ಸಮಯ ಬಾಕಿ ಇದ್ದು, ಮುಂದಿನ ದಿನಗಳಲ್ಲಿ ಈ ಮಾಲಿನ್ಯ ಪ್ರಮಾಣ ಇಳಿಕೆ ಆಗಲಿ ಎಂದು ಬೇಡುತ್ತಿದ್ದಾರೆ ಜನ.
ಕೇಂದ್ರ & ರಾಜ್ಯ ಸರ್ಕಾರಗಳಿಂದ ಕ್ರಮ
ಭಾರತದ ಹೃದಯ ಎಂದು ಕರೆಸಿಕೊಳ್ಳುವ ದೆಹಲಿ ವಾತಾವರಣ ಹಾಳಾಗುತ್ತಾ ಹೋಗುತ್ತಿರುವುದು ಭಾರತೀಯರ ನಿದ್ದೆಗೆಡಿಸಿದೆ. ದೆಹಲಿ ಮಾಲಿನ್ಯ ಸುಧಾರಿಸುವುದು ಹಾಗೂ ಅಲ್ಲಿನ ವಾತಾವರಣವು ಸುಧಾರಿಸುವುದು ಯಾವಾಗ? ಎಂಬ ಚರ್ಚೆ ಪದೇ ಪದೇ ನಡೆಯುತ್ತಲೇ ಇರುತ್ತದೆ. ಅದರಲ್ಲೂ ಚಳಿಗಾಲದ ಸಮಯದಲ್ಲಿ ದೆಹಲಿ ನಿವಾಸಿಗಳು ಊರು ಬಿಟ್ಟು ಬೇರೆ ಬೇರೆ ಪ್ರದೇಶಗಳಿಗೆ ವಲಸೆ ಹೋಗುವ ಪ್ರಕ್ರಿಯೆ ಕೂಡ ಸಾಗಿ ಬಂದಿದೆ.
ಹೀಗಾಗಿ ಕೇಂದ್ರ & ರಾಜ್ಯ ಸರ್ಕಾರಗಳು ಸೂಕ್ತವಾದ ಕ್ರಮ ಕೈಗೊಂಡು, ಪರಿಸ್ಥಿತಿ ನಿಯಂತ್ರಿಸಲು ಪ್ರಯತ್ನಿಸುತ್ತಿವೆ. ಆದರೂ ಮಾಲಿನ್ಯ ಮಾತ್ರ ಇನ್ನೂ ಹಿಡಿತಕ್ಕೆ ಸಿಗುತ್ತಿಲ್ಲ, ಮಹಿಳೆಯರು ಮತ್ತು ಮಕ್ಕಳು ಸೇರಿ ವೃದ್ಧರಿಗೂ ದೆಹಲಿ ಮಾಲಿನ್ಯ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಏನಾದರೂ ಮಾಡಿ ಮಾಲಿನ್ಯ ನಿಯಂತ್ರಣ ಮಾಡಬೇಕು ಎಂಬ ಪ್ರಯತ್ನ ಈಗ ಸಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications