ಅಮಿತ್ ಶಾ ಭೇಟಿಯಾದ ಅಮರಿಂದರ್ ಸಿಂಗ್
ನವದೆಹಲಿ, ಸೆಪ್ಟೆಂಬರ್ 29: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಗೃಹ ಸಚಿವ ಅಮಿತ್ ಶಾ ಭೇಟಿಯಾದರು. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಅವರು ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಬುಧವಾರ ನವದೆಹಲಿಯಲ್ಲಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದರು. ಅಮರಿಂದರ್ ಸಿಂಗ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಯ ನಡುವೆಯೇ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ಬಿಜೆಪಿ ಸೇರುವ ಕುರಿತು ಹಬ್ಬಿರುವ ಸುದ್ದಿಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಕ್ಯಾಪ್ಟನ್ ಅಮರಿಂದರ್ ಸಿಂಗ್ ನಿರಾಕರಿಸಿದ್ದಾರೆ. ಆದರೆ ಕೆಲವು ರಾಷ್ಟ್ರೀಯ ವಾಹಿನಿಗಳು ಅವರು ಬಿಜೆಪಿ ಸೇರಲಿದ್ದಾರೆ ಎಂದು ವರದಿ ಮಾಡುತ್ತಿವೆ. ಆದರೆ ಇದೊಂದು ಸೌಜನ್ಯದ ಭೇಟಿ ಎಂದು ಅಮರಿಂದರ್ ಸಿಂಗ್ ತಂಡ ಹೇಳಿಕೆ ನೀಡಿದೆ.
ಅಮರಿಂದರ್ ಸಿಂಗ್ ಮಂಗಳವಾರವೇ ದೆಹಲಿಗೆ ತೆರಳಿದ್ದರು. "ದೆಹಲಿಯಲ್ಲಿನ ಮನೆ ಖಾಲಿ ಮಾಡಲು ಬಂದಿರುವೆ" ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ಅವರು ದೆಹಲಿಗೆ ಭೇಟಿ ನೀಡಿದ್ದಾರೆ.
ನವಜೋತ್ ಸಿಂಗ್ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರಾದ ಬಳಿಕ ರಾಜ್ಯ ಕಾಂಗ್ರೆಸ್ನಲ್ಲಿ ಹಲವಾರು ಗೊಂದಲ ಉಂಟಾಗಿತ್ತು. ಆದರೆ ಮಂಗಳವಾರ ಸಿಧು ರಾಜೀನಾಮೆ ನೀಡಿದ್ದರು. ಆಗ ಟ್ವೀಟ್ ಮಾಡಿದ್ದ ಅಮರಿಂದರ್ ಸಿಂಗ್, "ಈ ವ್ಯಕ್ತಿಗೆ ಸ್ಥಿರತೆ ಇಲ್ಲ ಅಂತ ನಾನು ಮೊದಲೇ ಹೇಳಿದ್ದೆ ಹಾಗೂ ಗಡಿ ರಾಜ್ಯ ಪಂಜಾಬ್ಗೆ ಸೂಕ್ತ ವ್ಯಕ್ತಿಯಲ್ಲ" ಎಂದು ಟೀಕಿಸಿದ್ದರು.
|
ಮಂಗಳವಾರವೇ ಸುದ್ದಿ ಹಬ್ಬಿತ್ತು
ಪಂಜಾಬ್ ಮಾಜಿ ಮುಖ್ಯಮಂತ್ರಿ ಮಂಗಳವಾರ ಮಧ್ಯಾಹ್ನ ನವದೆಹಲಿಗೆ ಆಗಮಿಸಿದ್ದರು. ಮಂಗಳವಾರ ಸಂಜೆ ಅವರು ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿದ್ದಾರೆ.

ಸೆಪ್ಟೆಂಬರ್ 18ರಂದು ರಾಜೀನಾಮೆ
ಪಂಜಾಬ್ ಮುಖ್ಯಮಂತ್ರಿಯಾಗಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸೆಪ್ಟೆಂಬರ್ 18ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನವಜೋತ್ ಸಿಂಗ್ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರಾದ ಬಳಿಕ ರಾಜ್ಯ ಕಾಂಗ್ರೆಸ್ನಲ್ಲಿ ಹಲವಾರು ಬೆಳವಣಿಗೆಗಳು ನಡೆದಿದ್ದವು. ಮಂಗಳವಾರ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ಸಹ ರಾಜೀನಾಮೆ ನೀಡಿದ್ದಾರೆ.

ನನ್ನ ಮುಂದೆ ಅವಕಾಶಗಳಿವೆ
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್, "ನನಗೆ ಅವಮಾನವಾಗಿದೆ. ರಾಜಕೀಯ ಭವಿಷ್ಯದ ಕುರಿತು ಹೇಳುವುದಾದರೆ ನನ್ನ ಮುಂದೆ ಸದಾ ಆಯ್ಕೆಗಳಿರುತ್ತದೆ. ಅವಕಾಶ ಬಂದಾಗ ಅದನ್ನು ಉಪಯೋಗಿಸುತ್ತೇನೆ" ಎಂದು ಹೇಳಿದ್ದರು.

ಇದು ಸೌಜನ್ಯದ ಭೇಟಿ
'ಇದು ಸೌಜನ್ಯದ ಭೇಟಿಯಾಗಿದೆ' ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಅಮಿತ್ ಶಾ ಭೇಟಿ ಬಳಿಕ ಅಮರಿಂದರ್ ಸಿಂಗ್ ತಂಡ ಹೇಳಿಕೆ ನೀಡಿದೆ.
ಮಂಗಳವಾರವೂ ದೆಹಲಿ ಭೇಟಿ ಬಗ್ಗೆ ಉಹಾಪೋಹ ಎದ್ದಾಗ ತಂಡ, 'ವೈಯಕ್ತಿಕ ಕಾರಣಕ್ಕಾಗಿ ಅವರು ದೆಹಲಿಗೆ ಬಂದಿದ್ದಾರೆ. ಈ ಸಮಯದಲ್ಲಿ ಕೆಲವು ಸ್ನೇಹಿತರನ್ನು ಅವರು ಭೇಟಿಯಾಗಲಿದ್ದಾರೆ. ನೂತನ ಮುಖ್ಯಮಂತ್ರಿಗಾಗಿ ಕಪುರ್ತಲಾದಲ್ಲಿರುವ ಮನೆ ಖಾಲಿ ಮಾಡುತ್ತಾರೆ. ಈ ವಿಚಾರದಲ್ಲಿ ಯಾವುದೇ ಗೊಂದಲ, ಉಹಾಪೋಹ ಬೇಡ' ಎಂದು ತಂಡ ಹೇಳಿತ್ತು.

ಚುನಾವಣೆ ಎದುರಾಗಲಿದೆ
ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪ್ರಭಾವಿ ನಾಯಕರು. 2022ರಲ್ಲಿ ಪಂಜಾಬ್ ವಿಧಾನಸಭೆ ಚುನಾವಣೆ ನಡೆಯಲಿದೆ. ಪಂಜಾಬ್ನಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಪಕ್ಷದಲ್ಲಿ ಹಲವಾರು ಗೊಂದಲಗಳಿವೆ. ಇಂತಹ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅಮಿತ್ ಶಾ ಭೇಟಿಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ. ಅಮರಿಂದರ್ ಸಿಂಗ್ ಬಿಜೆಪಿ ಸೇರಿದರೆ ರಾಜ್ಯದ ರಾಜಕೀಯ ಚಿತ್ರಣವೇ ಬದಲಾಗಲಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications