ಮಗುವಿನ ತಂದೆಯದೇ ತಪ್ಪೆಂದ ಹೇಮಾಗೆ ಟ್ವೀಟ್ ಛೀಮಾರಿ
ಜೈಪುರ., ಜು. 08: ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ನಟಿ, ಸಂಸದೆ ಹೇಮಾಮಾಲಿನಿ ಮಾಡಿರುವ ಟ್ವೀಟ್ ವಿವಾದ ಎಬ್ಬಿಸಿದೆ. ಅಪಘಾತದಲ್ಲಿ ಮೃತಪಟ್ಟ ಬಾಲಕಿ ತಂದೆ ಟ್ರಾಫಿಕ್ ನಿಯಮಗಳನ್ನು ಪಾಲಿಸಬೇಕಿತ್ತು ಎಂದು ಬರೆದಿಕೊಂಡಿರುವುದು ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.
ಬಾಲಕಿ ಸಾವಿಗೆ ಸಂತಾಪ ಸೂಚಿಸಿರುವ ಹೇಮಾಮಾಲಿನಿ, ಬಾಲಕಿಯ ತಂದೆ ನಿಯಮಗಳನ್ನು ಪಾಲಿಸಿದಿದ್ದರೆ ಕಾರು ಅಪಘಾತ ಆಗುತ್ತಿರಲಿಲ್ಲ ಎಂದು ಬರೆದಿದ್ದಾರೆ. ಗಾಯದಿಂದ ನರಳುತ್ತಿದ್ದ ನಾನು ಆಸ್ಪತ್ರೆ ಸೇರಿದರೆ ಕೆಲವರು ಸಭ್ಯತೆ ಮೀರಿ ಮಾತನಾಡಿದ್ದಾರೆ ಎಂದು ಹೇಮಮಾಲಿನಿ ಅಸಮಾಧಾನ ಹೊರಹಾಕಿದ್ದಾರೆ. ಮಾಧ್ಯಮಗಳ ವಿರುದ್ಧವೂ ಹೇಮಾ ಕೆಂಗಣ್ಣು ಬೀರಿದ್ದಾರೆ.[ಮಗು ಬಲಿ ಪಡೆದ ಹೇಮಾಮಾಲಿನಿ ಮರ್ಸಿಡಿಸ್ ಬೆಂಜ್]

ಜೈಪುರದ ದೌಸಾ ಬಳಿ ನಟಿ ಹೇಮಾಮಾಲಿನಿ ಕಾರು ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ ಐದು ವರ್ಷದ ಮಗುವೊಂದು ಸಾವನ್ನಪ್ಪಿತ್ತು. ಅಪಘಾತ ಸಂಭವಿಸಿದ ಸಂದರ್ಭದಲ್ಲಿ ನಟಿ ಹೇಮಾಮಾಲಿನಿ ಜೊತೆ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದರೆ ಮಗುವಿನ ಜೀವ ಉಳಿಯುತ್ತಿತ್ತು ಎಂಬ ವಿಚಾರದಲ್ಲಿ ಟೀಕೆ ವ್ಯಕ್ತವಾಗಿತ್ತು. ಇದೀಗ ಹೇಮಾಮಾಲಿನಿ ಟ್ವೀಟ್ ಗೆ ನಾಗರಿಕರು ಆಕ್ರೋಶ ವ್ಯಕ್ತಪಡಿಸಿ ಮರು ಟ್ವೀಟ್ ಮಾಡುತ್ತಿದ್ದಾರೆ.['ಕೂಲ್ ಕ್ಯಾಪ್ಟನ್' ಎಂಎಸ್ ಧೋನಿ 34, ಅಭಿಮಾನಿಗಳಿಂದ ಟ್ವೀಟ್ಸ್]
ನಿಮ್ಮ ಹೇಳಿಕೆ ನಿಮಗೆ ನಾಚಿಕೆ ತರಬೇಕು, ಮೊದಲು ನಿಮ್ಮ ಚಾಲಕನನ್ನು ಸಮರ್ಥನೆ ಮಾಡುವುದನ್ನು ನಿಲ್ಲಿಸಿ, ಮಗು ಕಳೆದುಕೊಂಡ ಪಾಕರ ನೋವು ನಿಮಗೆಲ್ಲಿ ಅರ್ಥವಾಗಬೇಕು? ಎಂದು ಅನೇಕ ರೀತಿಯಲ್ಲಿ ಹೇಮಾ ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗುತ್ತಿದೆ.
ಹೇಮಮಾಲಿನಿ ಮರ್ಸಿಡಿಸ್ ಕಾರಿನ ಚಾಲಕ ಮಹೇಶ್ ಠಾಕೂರ್ ನನ್ನ ಬಂಧಿಸಿದ ಪೊಲೀಸರು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ರಾಜಸ್ಥಾನದ ಜೈಪುರದಿಂದ 50 ಕಿಮೀ ದೂರದಲ್ಲಿರುವ ದೌಸಾ ಬಳಿ ಆಲ್ಟೋ ಕಾರು ಮತ್ತು ಹೇಮಮಾಲಿನಿ ಚಲಿಸುತ್ತಿದ್ದ ಮರ್ಸಿಡಿಸ್ ಕಾರಿನ ನಡುವೆ ಡಿಕ್ಕಿಯಾಗಿ ಮಗುವೊಂದು ಸಾವನ್ನಪ್ಪಿತ್ತು.
(Contd) How I wish the girl's father had followed the traffic rules - thn this accident could have been averted & the lil one's life safe!
— Hema Malini (@dreamgirlhema) July 8, 2015 ...who actually & unbelievably stooped to the lowest levels of human decency, I can only say "Shame on u" &"God Bless"!
— Hema Malini (@dreamgirlhema) July 7, 2015 Classy, Hema Malini. Good time to wag finger at father who's just lost his child. https://t.co/rztnegNQ0p
— Shiv Aroor (@ShivAroor) July 8, 2015 -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications