ಮಗುವಿನ ತಂದೆಯದೇ ತಪ್ಪೆಂದ ಹೇಮಾಗೆ ಟ್ವೀಟ್ ಛೀಮಾರಿ
ಜೈಪುರ., ಜು. 08: ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ನಟಿ, ಸಂಸದೆ ಹೇಮಾಮಾಲಿನಿ ಮಾಡಿರುವ ಟ್ವೀಟ್ ವಿವಾದ ಎಬ್ಬಿಸಿದೆ. ಅಪಘಾತದಲ್ಲಿ ಮೃತಪಟ್ಟ ಬಾಲಕಿ ತಂದೆ ಟ್ರಾಫಿಕ್ ನಿಯಮಗಳನ್ನು ಪಾಲಿಸಬೇಕಿತ್ತು ಎಂದು ಬರೆದಿಕೊಂಡಿರುವುದು ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.
ಬಾಲಕಿ ಸಾವಿಗೆ ಸಂತಾಪ ಸೂಚಿಸಿರುವ ಹೇಮಾಮಾಲಿನಿ, ಬಾಲಕಿಯ ತಂದೆ ನಿಯಮಗಳನ್ನು ಪಾಲಿಸಿದಿದ್ದರೆ ಕಾರು ಅಪಘಾತ ಆಗುತ್ತಿರಲಿಲ್ಲ ಎಂದು ಬರೆದಿದ್ದಾರೆ. ಗಾಯದಿಂದ ನರಳುತ್ತಿದ್ದ ನಾನು ಆಸ್ಪತ್ರೆ ಸೇರಿದರೆ ಕೆಲವರು ಸಭ್ಯತೆ ಮೀರಿ ಮಾತನಾಡಿದ್ದಾರೆ ಎಂದು ಹೇಮಮಾಲಿನಿ ಅಸಮಾಧಾನ ಹೊರಹಾಕಿದ್ದಾರೆ. ಮಾಧ್ಯಮಗಳ ವಿರುದ್ಧವೂ ಹೇಮಾ ಕೆಂಗಣ್ಣು ಬೀರಿದ್ದಾರೆ.[ಮಗು ಬಲಿ ಪಡೆದ ಹೇಮಾಮಾಲಿನಿ ಮರ್ಸಿಡಿಸ್ ಬೆಂಜ್]

ಜೈಪುರದ ದೌಸಾ ಬಳಿ ನಟಿ ಹೇಮಾಮಾಲಿನಿ ಕಾರು ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ ಐದು ವರ್ಷದ ಮಗುವೊಂದು ಸಾವನ್ನಪ್ಪಿತ್ತು. ಅಪಘಾತ ಸಂಭವಿಸಿದ ಸಂದರ್ಭದಲ್ಲಿ ನಟಿ ಹೇಮಾಮಾಲಿನಿ ಜೊತೆ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದರೆ ಮಗುವಿನ ಜೀವ ಉಳಿಯುತ್ತಿತ್ತು ಎಂಬ ವಿಚಾರದಲ್ಲಿ ಟೀಕೆ ವ್ಯಕ್ತವಾಗಿತ್ತು. ಇದೀಗ ಹೇಮಾಮಾಲಿನಿ ಟ್ವೀಟ್ ಗೆ ನಾಗರಿಕರು ಆಕ್ರೋಶ ವ್ಯಕ್ತಪಡಿಸಿ ಮರು ಟ್ವೀಟ್ ಮಾಡುತ್ತಿದ್ದಾರೆ.['ಕೂಲ್ ಕ್ಯಾಪ್ಟನ್' ಎಂಎಸ್ ಧೋನಿ 34, ಅಭಿಮಾನಿಗಳಿಂದ ಟ್ವೀಟ್ಸ್]
ನಿಮ್ಮ ಹೇಳಿಕೆ ನಿಮಗೆ ನಾಚಿಕೆ ತರಬೇಕು, ಮೊದಲು ನಿಮ್ಮ ಚಾಲಕನನ್ನು ಸಮರ್ಥನೆ ಮಾಡುವುದನ್ನು ನಿಲ್ಲಿಸಿ, ಮಗು ಕಳೆದುಕೊಂಡ ಪಾಕರ ನೋವು ನಿಮಗೆಲ್ಲಿ ಅರ್ಥವಾಗಬೇಕು? ಎಂದು ಅನೇಕ ರೀತಿಯಲ್ಲಿ ಹೇಮಾ ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗುತ್ತಿದೆ.
ಹೇಮಮಾಲಿನಿ ಮರ್ಸಿಡಿಸ್ ಕಾರಿನ ಚಾಲಕ ಮಹೇಶ್ ಠಾಕೂರ್ ನನ್ನ ಬಂಧಿಸಿದ ಪೊಲೀಸರು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ರಾಜಸ್ಥಾನದ ಜೈಪುರದಿಂದ 50 ಕಿಮೀ ದೂರದಲ್ಲಿರುವ ದೌಸಾ ಬಳಿ ಆಲ್ಟೋ ಕಾರು ಮತ್ತು ಹೇಮಮಾಲಿನಿ ಚಲಿಸುತ್ತಿದ್ದ ಮರ್ಸಿಡಿಸ್ ಕಾರಿನ ನಡುವೆ ಡಿಕ್ಕಿಯಾಗಿ ಮಗುವೊಂದು ಸಾವನ್ನಪ್ಪಿತ್ತು.
(Contd) How I wish the girl's father had followed the traffic rules - thn this accident could have been averted & the lil one's life safe!
— Hema Malini (@dreamgirlhema) July 8, 2015 ...who actually & unbelievably stooped to the lowest levels of human decency, I can only say "Shame on u" &"God Bless"!
— Hema Malini (@dreamgirlhema) July 7, 2015 Classy, Hema Malini. Good time to wag finger at father who's just lost his child. https://t.co/rztnegNQ0p
— Shiv Aroor (@ShivAroor) July 8, 2015 -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications