ಶಾಸ್ತ್ರೀಯ ಗಾಯಕ ನೆಡನೂರಿ ಕೃಷ್ಣಮೂರ್ತಿ ವಿಧಿವಶ
ಚೆನ್ನೈ, ಡಿ.8: ಶಾಸ್ತ್ರೀಯ ಸಂಗೀತ ಕ್ಷೇತ್ರದ ಹಿರಿಯ ಗಾಯಕ, ಸಂಗೀತ ಕಲಾನಿಧಿ ನೆಡನೂರಿ ಕೃಷ್ಣಮೂರ್ತಿ ಅವರು ಸೋಮವಾರ ಮುಂಜಾನೆ ವಿಶಾಖಪಟ್ಟಣಂನ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರಿನಿಂದ ಬಳಲುತ್ತಿದ್ದ ಕೃಷ್ಣಮೂರ್ತಿ ಅವರಿಗೆ ಚಿಕಿತ್ಸೆ ಫಲಕಾರಿಯಾಗಿರಲಿಲ್ಲ. ಮೃತರಿಗೆ 87 ವರ್ಷ ವಯಸ್ಸಾಗಿತ್ತು.
ನೆಡನೂರಿ ಗ್ರಾಮದಲ್ಲಿ ಅಕ್ಟೋಬರ್ 10, 1927ರಂದು ಜನಿಸಿದ ಕೃಷ್ಣಮೂರ್ತಿ ಅವರು ಬಾಲ್ಯದಿಂದಲೆ ಪಿಟೀಲು ವಾದನ ಹಾಗೂ ಗಾಯನದಲ್ಲಿ ಆಸಕ್ತಿ ವಹಿಸಿದರು. 1940ರಲ್ಲಿ ದ್ವಾರಂ ನರಸಿಂಗರಾವ್ ನಾಯ್ಡು ಅವರ ಬಳಿ ಶಿಷ್ಯವೃತ್ತಿ ಮಾಡಿದ ಕೃಷ್ಣಮೂರ್ತಿ ಅವರು ನಂತರ ಶ್ರೀಪಾದ ಪಿನಾಕಪಾಣಿ ಅವರಲ್ಲಿ ಕಲಿಕೆ ಮುಂದುವರೆಸಿದರು. ವಿಜಯವಾಡ, ಸಿಕಂದರಾಬಾದ್ ಹಾಗೂ ವಿಶಾಖಪಟ್ಟಣಂನಲ್ಲಿ ಕಲಿಕೆ ಮುಂದುವರೆಯಿತು.

ಕರ್ನಾಟಕ ಶಾಸ್ತ್ರೀಯ ಸಂಗೀತ ಕ್ಷೇತ್ರದ ತ್ರಿಮೂರ್ತಿಗಳಾದ ತ್ಯಾಗರಾಜ, ಮುತ್ತುಸ್ವಾಮಿ ದೀಕ್ಷಿತರ್ ಹಾಗೂ ಶ್ಯಾಮಶಾಸ್ತ್ರಿಗಳ ಸಂಕೀರ್ತನೆಗಳನ್ನು ಹಾಗೂ ಅನ್ನಮಾಚಾರ್ಯ, ಭದ್ರಾಚಾಲ ರಾಮದಾಸರ ಕೆಲವು ಕೀರ್ತನೆಗಳನ್ನು ಸುಶ್ರಾವ್ಯವಾಗಿ ಕೇಳುಗರ ಮನಮುಟ್ಟುವಂತೆ ಮಾಡುವಲ್ಲಿ ನೆಡನೂರಿ ಅವರು ಯಶಸ್ವಿಯಾಗಿದ್ದರು.
ಅನ್ನಮಾಚಾರ್ಯ ಅವರ 108ಕ್ಕೂ ಅಧಿಕ ಕೀರ್ತನೆಗಳಿಗೆ ಸ್ವರ ಸಂಯೋಜನೆ ಮಾಡಿದ ನೆಡನೂರಿ ಅವರು 15ನೇ ಶತಮಾನದ ಅನ್ನಮಯ್ಯ ಸಂಕೀರ್ತನೆಗಳ ಜನಪ್ರಿಯತೆಗೆ ತಮ್ಮ ಕೊಡುಗೆ ನೀಡಿದ್ದಾರೆ. ನೆಡನೂರಿ ಕೃಷ್ಣಮೂರ್ತಿ ಅವರ ಸಂಗೀತಸೇವೆಯನ್ನು ಪರಿಗಣಿಸಿ ಚೆನ್ನೈನ ಸಂಗೀತ ಅಕಾಡೆಮಿಯಿಂದ 1991ರಲ್ಲಿ ಸಂಗೀತ ಕಲಾನಿಧಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಮಲ್ಲಾಡಿ ಸೋದರರು, ಶೋಭಾರಾಜು ಹಾಗೂ ಜಿ ಬಾಲಕೃಷ್ಣ ಪ್ರಸಾದ್ ಅವರು ನೆಡನೂರಿ ಅವರ ಅನೇಕ ಶಿಷ್ಯಂದಿರ ಪೈಕಿ ಪ್ರಮುಖರಾಗಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications