ಶಾಸ್ತ್ರೀಯ ಗಾಯಕ ನೆಡನೂರಿ ಕೃಷ್ಣಮೂರ್ತಿ ವಿಧಿವಶ
ಚೆನ್ನೈ, ಡಿ.8: ಶಾಸ್ತ್ರೀಯ ಸಂಗೀತ ಕ್ಷೇತ್ರದ ಹಿರಿಯ ಗಾಯಕ, ಸಂಗೀತ ಕಲಾನಿಧಿ ನೆಡನೂರಿ ಕೃಷ್ಣಮೂರ್ತಿ ಅವರು ಸೋಮವಾರ ಮುಂಜಾನೆ ವಿಶಾಖಪಟ್ಟಣಂನ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರಿನಿಂದ ಬಳಲುತ್ತಿದ್ದ ಕೃಷ್ಣಮೂರ್ತಿ ಅವರಿಗೆ ಚಿಕಿತ್ಸೆ ಫಲಕಾರಿಯಾಗಿರಲಿಲ್ಲ. ಮೃತರಿಗೆ 87 ವರ್ಷ ವಯಸ್ಸಾಗಿತ್ತು.
ನೆಡನೂರಿ ಗ್ರಾಮದಲ್ಲಿ ಅಕ್ಟೋಬರ್ 10, 1927ರಂದು ಜನಿಸಿದ ಕೃಷ್ಣಮೂರ್ತಿ ಅವರು ಬಾಲ್ಯದಿಂದಲೆ ಪಿಟೀಲು ವಾದನ ಹಾಗೂ ಗಾಯನದಲ್ಲಿ ಆಸಕ್ತಿ ವಹಿಸಿದರು. 1940ರಲ್ಲಿ ದ್ವಾರಂ ನರಸಿಂಗರಾವ್ ನಾಯ್ಡು ಅವರ ಬಳಿ ಶಿಷ್ಯವೃತ್ತಿ ಮಾಡಿದ ಕೃಷ್ಣಮೂರ್ತಿ ಅವರು ನಂತರ ಶ್ರೀಪಾದ ಪಿನಾಕಪಾಣಿ ಅವರಲ್ಲಿ ಕಲಿಕೆ ಮುಂದುವರೆಸಿದರು. ವಿಜಯವಾಡ, ಸಿಕಂದರಾಬಾದ್ ಹಾಗೂ ವಿಶಾಖಪಟ್ಟಣಂನಲ್ಲಿ ಕಲಿಕೆ ಮುಂದುವರೆಯಿತು.

ಕರ್ನಾಟಕ ಶಾಸ್ತ್ರೀಯ ಸಂಗೀತ ಕ್ಷೇತ್ರದ ತ್ರಿಮೂರ್ತಿಗಳಾದ ತ್ಯಾಗರಾಜ, ಮುತ್ತುಸ್ವಾಮಿ ದೀಕ್ಷಿತರ್ ಹಾಗೂ ಶ್ಯಾಮಶಾಸ್ತ್ರಿಗಳ ಸಂಕೀರ್ತನೆಗಳನ್ನು ಹಾಗೂ ಅನ್ನಮಾಚಾರ್ಯ, ಭದ್ರಾಚಾಲ ರಾಮದಾಸರ ಕೆಲವು ಕೀರ್ತನೆಗಳನ್ನು ಸುಶ್ರಾವ್ಯವಾಗಿ ಕೇಳುಗರ ಮನಮುಟ್ಟುವಂತೆ ಮಾಡುವಲ್ಲಿ ನೆಡನೂರಿ ಅವರು ಯಶಸ್ವಿಯಾಗಿದ್ದರು.
ಅನ್ನಮಾಚಾರ್ಯ ಅವರ 108ಕ್ಕೂ ಅಧಿಕ ಕೀರ್ತನೆಗಳಿಗೆ ಸ್ವರ ಸಂಯೋಜನೆ ಮಾಡಿದ ನೆಡನೂರಿ ಅವರು 15ನೇ ಶತಮಾನದ ಅನ್ನಮಯ್ಯ ಸಂಕೀರ್ತನೆಗಳ ಜನಪ್ರಿಯತೆಗೆ ತಮ್ಮ ಕೊಡುಗೆ ನೀಡಿದ್ದಾರೆ. ನೆಡನೂರಿ ಕೃಷ್ಣಮೂರ್ತಿ ಅವರ ಸಂಗೀತಸೇವೆಯನ್ನು ಪರಿಗಣಿಸಿ ಚೆನ್ನೈನ ಸಂಗೀತ ಅಕಾಡೆಮಿಯಿಂದ 1991ರಲ್ಲಿ ಸಂಗೀತ ಕಲಾನಿಧಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಮಲ್ಲಾಡಿ ಸೋದರರು, ಶೋಭಾರಾಜು ಹಾಗೂ ಜಿ ಬಾಲಕೃಷ್ಣ ಪ್ರಸಾದ್ ಅವರು ನೆಡನೂರಿ ಅವರ ಅನೇಕ ಶಿಷ್ಯಂದಿರ ಪೈಕಿ ಪ್ರಮುಖರಾಗಿದ್ದಾರೆ.
-
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು -
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ












Click it and Unblock the Notifications