ದೇಗುಲದಲ್ಲಿ ಚಿತ್ರೀಕರಣ, ರವೀನಾ ಟಂಡನ್ ವಿರುದ್ಧ ಎಫ್ಐಆರ್
ಭುವನೇಶ್ವರ್, ಮಾರ್ಚ್ 07: 'ನೋ ಕ್ಯಾಮೆರಾ ಜೋನ್' ಎಂಬ ಫಲಕವನ್ನು ಲೆಕ್ಕಿಸದೆ ದೇಗುಲದಲ್ಲಿ ಶೂಟಿಂಗ್ ಮಾಡಿದ ಬಾಲಿವುಡ್ ನಟಿ ರವೀನಾ ಟಂಡನ್ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಎಫ್ಐಆರ್ ಹಾಕಲಾಗಿದೆ.
11ನೇ ಶತಮಾನದ ಲಿಂಗರಾಜ ದೇಗುಲದಲ್ಲಿ ಜಾಹೀರಾತು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ರವೀನಾ ಟಂಡನ್ ಅವರು ಈಗ ಸಮಸ್ಯೆಗೆ ಸಿಲುಕಿದ್ದಾರೆ.
ಭಾನುವಾರದಂದು ದೇಗುಲಕ್ಕೆ ಭೇಟಿ ನೀಡಿದ್ದ ರವೀನಾ ಟಂಡನ್ ಹಾಗೂ ಚಿತ್ರ ತಂಡವು ದೇಗುಲದೊಳಗೆ ಕದ್ದುಮುಚ್ಚಿ ಮೊಬೈಲ್ ನಲ್ಲಿ ಚಿತ್ರೀಕರಿಸಿದೆ.
ಟಂಡನ್ ಅವರು ದೇಗುಲದ ಆವರಣದಲ್ಲಿ ನಿಂತು, ಸೌಂದರ್ಯವರ್ಧಕ ಸಲಹೆಗಳನ್ನು ನೀಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಮೇಲೆ ನಮಗೆ ತಿಳಿದು ಬಂದಿತು. ಹೀಗಾಗಿ, ದೂರು ದಾಖಲಿಸಿದೆವು ಎಂದು ದೇಗುಲದ ಆಡಳಿತ ಮಂಡಳಿಯ ಮುಖ್ಯಸ್ಥ ರಾಜೀವ್ ಲೋಚಾನ ಪರಿದಾ ಅವರು ಹೇಳಿದ್ದಾರೆ.

ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾಗೆ ಫೋನ್ ಮೂಲಕ ಪ್ರತಿಕ್ರಿಯೆ ನೀಡಿರುವ ರವೀನಾ, ಈ ವಿವಾದದ ಬಗ್ಗೆ ನನಗೇನು ಗೊತ್ತಿಲ್ಲ. ನಾನು ಯಾರಿಗೂ ಚಿತ್ರೀಕರಣ ಮಾಡಿ ಎಂದು ಹೇಳಿಲ್ಲ. ನಾನು ಶೂಟಿಂಗ್ ನಲ್ಲಿ ಪಾಲ್ಗೊಂಡಿಲ್ಲ ಎಂದಿದ್ದಾರೆ.
'ನಾನು ದೇಗುಲದಲ್ಲಿ ಓಡಾಡುವಾಗ ಪ್ರವಾಸಿಗರು ಅನೇಕ ಮಂದಿ ನನ್ನ ಬಳಿ ಬಂದು ಮಾತನಾಡಿಸಿ, ಸೆಲ್ಫಿ ಕ್ಲಿಕ್ ಮಾಡಿಸಿಕೊಂಡು ಹೋಗಿದ್ದಾರೆ. ಈ ಪೈಕಿ ಕೆಲವರು ನನ್ನ ಫಿಟ್ನೆಸ್ ಹಾಗೂ ಬ್ಯೂಟಿ ಟಿಪ್ಸ್ ಕೇಳಿದರು. ಅವರು ಕೇಳಿದ ಪ್ರಶ್ನೆಗೆ ನಾನು ಉತ್ತರಿಸಿದೆ. ಇದನ್ನೇ ವಿಡಿಯೋ ಮಾಡಿ ಯಾರಾದರೂ ಹಾಕಿದ್ದರೆ, ಅದಕ್ಕೆ ನಾನು ಹೊಣೆಯಲ್ಲ' ಎಂದಿದ್ದಾರೆ.
-
Aditya Dhar: ರಣವೀರ್ ಸಿಂಗ್ ಹಿಂದಿಕ್ಕಿ IMDb ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ 'ಧುರಂಧರ್ 2' ನಿರ್ದೇಶಕ ಆದಿತ್ಯ ಧರ್ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications