ಮೋದಿ ವಿರುದ್ಧ ಹೇಳಿಕೆ ಆರೋಪ, ಪ್ರಕಾಶ್ ರೈ ವಿರುದ್ಧ ಕೇಸ್
ಲಕ್ನೋ, ಅಕ್ಟೋಬರ್ 05: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ನಟ ಪ್ರಕಾಶ್ ರಾಜ್ (ರೈ) ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕಾಶ್ ಅವರು ಸಮ್ಮೇಳನವೊಂದರಲ್ಲಿ ಭಾಷಣ ಮಾಡುವಾಗ ಮೋದಿ ಅವರ ಹೆಸರು ಪ್ರಸ್ತಾಪಿಸಿ ನೀಡಿದ ಹೇಳಿಕೆ ಆಕ್ಷೇಪಾರ್ಹವಾಗಿದೆ ಎಂದು ವಕೀಲ ಸರ್ದಾರ್ ಪರ್ವಿಂದರ್ ಸಿಂಗ್ ದೂರಿನಲ್ಲಿ ಹೇಳಿದ್ದಾರೆ.
ಕಳೆದ ಭಾನುವಾರ ಬೆಂಗಳೂರಿನಲ್ಲಿ ನಡೆದ ಡೆಮಾಕ್ರೆಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾದ 11ನೇ ರಾಜ್ಯ ಸಭೆಯಲ್ಲಿ ಪ್ರಕಾಶ್ ರಾಜ್ ಮಾತನಾಡಿದ್ದರು.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಸಂಭ್ರಮಿಸುವಂಥ ಟ್ರೋಲ್ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತಿದ್ದು, ಇಂತಹ ಟ್ರೋಲ್ಗಳನ್ನ ಹಾಕಿದ ಕೆಲವು ಟ್ವಿಟ್ಟರ್ ಖಾತೆಗಳನ್ನು ಪ್ರಧಾನಿ ಮೋದಿ ಫಾಲೋ ಮಾಡುತ್ತಿದ್ದಾರೆ. ಗೌರಿ ಹತ್ಯೆ ಬಗ್ಗೆ ಮೋದಿ ಅವರ ಮೌನ ಏಕೆ ಎಂದು ಪ್ರಶ್ನಿಸಿದ್ದರು.

ನಂತರ ಮಾತು ಮುಂದುವರೆಸಿ, ಪ್ರಧಾನಿ ಮೋದಿ ಫಾಲೋ ಮಾಡ್ತಿರೋ ಕೆಲವು ಜನರು ತುಂಬಾ ಕ್ರೂರಿಗಳು, ಅದರ ಬಗ್ಗೆ ಕಣ್ಣು ಮುಚ್ಚಿ ಕುಳಿತಿರೋ ಪ್ರಧಾನಿ ನಮ್ಮಲ್ಲಿದ್ದಾರೆ.
Case registered against actor Prakash Raj in a Lucknow Court on complaint by a lawyer over his remarks on PM Modi; Case to be heard on 7 Oct
— ANI UP (@ANINewsUP) October 4, 2017
ಉತ್ತರಪ್ರದೇಶದ ವಿಡಿಯೋಗಳನ್ನ ನೋಡಿದ್ರೆ ಅವರು(ಯೋಗಿ ಆದಿತ್ಯನಾಥ್) ಮುಖ್ಯಮಂತ್ರಿಯೋ ಅಥವಾ ದೇವಸ್ಥಾನದ ಪೂಜಾರಿಯೋ ಎಂದು ಗೊಂದಲವಾಗುತ್ತದೆ. ಇಂಥ ಡಬಲ್ ರೋಲ್ ಮಾಡೋ ಜನರು ನಮ್ಮಲ್ಲಿದ್ದಾರೆ. ನನಗೆ 5 ರಾಷ್ಟ್ರಪ್ರಶಸ್ತಿಗಳನ್ನ ನೀಡಿದ್ದಾರೆ. ಅದನ್ನು ಅವರಿಗೆ ನೀಡಬೇಕೆಂದಿದ್ದೇನೆ. ಅವರು ನನಗಿಂತ ದೊಡ್ಡ ನಟರು' ಎಂದು ಪ್ರಕಾಶ್ ರಾಜ್ ಹೇಳಿದ್ದರು.
What's said...n what's not said. For all out there .. thank you pic.twitter.com/zIT7rnkFxb
— Prakash Raj (@prakashraaj) October 2, 2017
ಈ ಹೇಳಿಕೆ ಬಗ್ಗೆ ಸಾಕಷ್ಟು ಟ್ರೋಲ್ಗಳಾಗಿದ್ದು, ನಾನು ನನ್ನ ಮಾತಿಗೆ ಈಗಲೂ ಬದ್ಧನಾಗಿದ್ದೇನೆ. ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವನಲ್ಲ. ದೇಶದ ನಾಗರಿಕನಾಗಿ ನಾನು ಪ್ರಧಾನಿಯನ್ನು ಪ್ರಶ್ನಿಸಿದ್ದೇನೆ. ಗೌರಿ ಹತ್ಯೆ ವಿಷಯದಲ್ಲಿ ಪ್ರಧಾನಿಯವರ ಮೌನ ಬೆಚ್ಚಿಬೀಳಿಸುತ್ತದೆ ಎಂದು ವಿಡಿಯೋ ಮೂಲಕ ಪ್ರಕಾಶ್ ರಾಜ್ ಸ್ಪಷ್ಟನೆ ನೀಡಿದ್ದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications