ವಿಮಾನದಲ್ಲಿ ವೃದ್ಧ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿಗೆ ಜಾಮೀನು!
ನ್ಯೂಯಾರ್ಕ್ನಿಂದ ನವದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿ ಶಂಕರ್ ಮಿಶ್ರಾಗೆ ದೆಹಲಿ ನ್ಯಾಯಾಲಯ ಇಂದು ಜಾಮೀನು ನೀಡಿದೆ.
ನವದೆಹಲಿ ಜನವರಿ 31: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿ ಶಂಕರ್ ಮಿಶ್ರಾಗೆ ದೆಹಲಿ ನ್ಯಾಯಾಲಯ ಇಂದು ಜಾಮೀನು ನೀಡಿದೆ. ಕಳೆದ ವರ್ಷ ನವೆಂಬರ್ 26 ರಂದು ನ್ಯೂಯಾರ್ಕ್ನಿಂದ ನವದೆಹಲಿಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಶಂಕರ್ ಮಿಶ್ರಾ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪವನ್ನು ಹೊತ್ತಿದ್ದರು. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜನವರಿ 11 ರಂದು ಮಿಶ್ರಾ ಅವರಿಗೆ ಜಾಮೀನು ನಿರಾಕರಿಸಿತ್ತು. ಕಳೆದ ದಿನ ತೀರ್ಪನ್ನು ಕಾಯ್ದಿಸಿದ್ದ ನ್ಯಾಯಾಲಯ ಇಂದು ಶಂಕರ್ ಮಿಶ್ರಾಗೆ ಜಾಮೀನು ಮಂಜೂರು ಮಾಡಿದೆ.
ಶಂಕರ್ ಮಿಶ್ರಾ ಅವರನ್ನು ಏಕೆ ಬಂಧಿಸಲಾಯಿತು?
ನವೆಂಬರ್ 26 ರಂದು ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ವಯಸ್ಸಾದ ಮಹಿಳೆಯೊಬ್ಬರ ಮೇಲೆ ಸಹ-ಪ್ರಯಾಣಿಕ ಶಂಕರ್ ಮಿಶ್ರಾ ಮೂತ್ರ ವಿಸರ್ಜನೆ ಮಾಡಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಲುಕ್ ಔಟ್ ಸುತ್ತೋಲೆ ಹೊರಡಿಸಿದ ನಂತರ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಯಿತು. ವಿಷಯ ಬೆಳಕಿಗೆ ಬಂದಾಗಿನಿಂದ ಅವರು ತಲೆಮರೆಸಿಕೊಂಡಿದ್ದರು. ಈ ವಿಚಾರ ಸಂಬಂಧ ಎಫ್ ಐಆರ್ ದಾಖಲಾದ ನಂತರ ಆರೋಪಿಯ ಲೋಕೇಶನ್ ಪತ್ತೆ ಹಚ್ಚಲು ಆರಂಭಿಸಿದಾಗ ಬೆಂಗಳೂರು ತೋರಿಸುತಿತ್ತು. ಆದರೆ, ಆತನನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಫೋನ್ ಸ್ವಿಚ್ ಆಫ್ ಆಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜನವರಿ 3 ರಂದು ಆತನ ಕೊನೆಯ ಲೋಕೇಶನ್ ಬೆಂಗಳೂರಿನಲ್ಲಿ ಪತ್ತೆಯಾಗಿತ್ತು. ಆದರೆ, ತದನಂತರ ಫೋನ್ ಸ್ವಿಚ್ ಆಫ್ ಆಗಿತ್ತು. ಆರೋಪಿ ಬೆಂಗಳೂರಿಗೆ ಹೋಗಲು ಟ್ಯಾಕ್ಸಿ ಬಳಸಿದ್ದ. ಆತನ ಟ್ರಾವೆಲ್ ಹಿಸ್ಟರಿ ಬಳಸಿ ಬೆಂಗಳೂರಿಗೆ ಹೋಗಿ ಬಂಧಿಸಲಾಯಿತು.
'ಮೂತ್ರ ವಿಸರ್ಜನೆ' ಘಟನೆಯನ್ನು ಗಮನಿಸಿ, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾಕ್ಕೆ ಶೋಕಾಸ್ ನೋಟಿಸ್ ಜಾರಿ ಮಾಡಿತು. ಘಟನೆಯನ್ನು ನಿರ್ವಹಿಸಿದ ರೀತಿ 'ವೃತ್ತಿಪರವಾಗಿಲ್ಲ' ಎಂದು ಹೇಳಿತ್ತು. ಘಟನೆಯ ನಂತರ, ಶಂಕರ್ ಮಿಶ್ರಾ ಅವರನ್ನು ಕೆಲಸದಿಂದಲೂ ವಜಾಗೊಳಿಸಲಾಯಿತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications