Kerala: ದೇಗುಲದಲ್ಲಿ ಪುರುಷರು ಶರ್ಟ್ ತೆಗೆಯುವುದರ ಹಿಂದಿದೆ ಜಾತಿ ಧರ್ಮದ ಲೆಕ್ಕಾಚಾರ – ಶಿವಗಿರಿ ಶ್ರೀ
ತಿರುವನಂತಪುರಂ 1: ಜನವರಿ ಕೇರಳದ ಪ್ರಮುಖ ಹಿಂದೂ ಸನ್ಯಾಸಿಯೊಬ್ಬರು ಮಂಗಳವಾರ ದೇವಾಲಯಗಳಿಗೆ ಪ್ರವೇಶಿಸಲು ಪುರುಷ ಭಕ್ತರು ಮೇಲಿನ ಉಡುಪನ್ನು ತೆಗೆಯುವ ಪದ್ಧತಿ ಅನಿಷ್ಟ ಎಂದು ಕರೆದಿದ್ದಾರೆ. ಜೊತೆಗೆ ಈ ಪದ್ಧತಿಯನ್ನು ತೆಗೆದುಹಾಕಲು ಕರೆ ನೀಡಿದ್ದಾರೆ. ಅಲ್ಲದೆ ಈ ಪದ್ಧತಿಯ ಹಿಂದೆ ಜಾತಿ ಧರ್ಮದ ಲೆಕ್ಕಾಚಾರವಿದೆ ಎಂದು ಅವರು ಹೇಳಿದ್ದಾರೆ.
ಹೌದು.. ಕೇರಳದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಈ ಹೇಳಿಕೆಯನ್ನು ನೀಡಿದ್ದಾರೆ. ಖ್ಯಾತ ಋಷಿ-ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಪ್ರಸಿದ್ಧ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಈ ಮಾತನ್ನು ಹೇಳಿದ್ದಾರೆ. ಇಲ್ಲಿನ ತೀರ್ಥೋದ್ಭವ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸಚ್ಚಿದಾನಂದ ಅವರು ರಾಜ್ಯದ ಅನೇಕ ದೇವಾಲಯಗಳಲ್ಲಿ ಈ ಪದ್ಧತಿ ಅಸ್ತಿತ್ವದಲ್ಲಿದೆ. ಈ ಪದ್ಧತಿ ಸಾಮಾಜಿಕ ಪಿಡುಗು ಆಗಿದೆ, ಹೀಗಾಗಿ ಈ ಪದ್ಧತಿಯನ್ನು ತೆಗೆದು ಹಾಕುವಂತೆ ಒತ್ತಾಯಿಸಿದರು.

ದೇಗುಲದಲ್ಲಿ ಪುರುಷರು ಶರ್ಟ್ ತೆಗೆಯುವುದರ ಹಿಂದಿದೆ ಜಾತಿ ಲೆಕ್ಕಾಚಾರ
ಪುರುಷರು "ಜನಿವಾರ" (ಬ್ರಾಹ್ಮಣರು ಧರಿಸುವ ಪವಿತ್ರ ದಾರ) ಧರಿಸಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಉಡುಪನ್ನು ತೆಗೆದುಹಾಕುವ ಅಭ್ಯಾಸವನ್ನು ಹಿಂದೆ ಪರಿಚಯಿಸಲಾಯಿತು. ಈ ಆಚರಣೆಯು ಶ್ರೀ ನಾರಾಯಣ ಗುರುಗಳ ಉಪದೇಶಗಳಿಗೆ ವಿರುದ್ಧವಾಗಿದೆ. ಕೆಲವು ದೇವಾಲಯಗಳು ಅದನ್ನು ಇನ್ನೂ ಕೂಡ ಅನುಸರಿಸುತ್ತಿರುವುದು ತುಂಬಾ ಬೇಸರದ ಸಂಗತಿ ಎಂದು ಅವರು ಹೇಳಿದರು.
ಕೆಲವು ದೇವಸ್ಥಾನಗಳಲ್ಲಿ ಅನ್ಯ ಧರ್ಮದವರಿಗೆ ಪ್ರವೇಶವಿಲ್ಲ, ಕೆಲವು ಶ್ರೀ ನಾರಾಯಣ ದೇವಸ್ಥಾನಗಳು ಸಹ ಇದೇ ರೀತಿ ನಡೆದುಕೊಳ್ಳುತ್ತಿರುವುದು ಕಂಡು ಬಂದಿದೆ. ಇದರ ಬಗ್ಗೆ ನನಗೆ ಅತೀವ ವಿಷಾದವಿದೆ. ಅಷ್ಟೇ ಅಲ್ಲ, ಅನೇಕ ಶ್ರೀ ನಾರಾಯಣ ದೇವಸ್ಥಾನಗಳು ಸಹ ಮೇಲಿನ ಉಡುಪುಗಳನ್ನು (ಪುರುಷರ) ತೆಗೆದುಹಾಕುವ ಅಭ್ಯಾಸವನ್ನು ಅನುಸರಿಸುವಲ್ಲಿ ಅಚಲವಾಗಿವೆ. ಇದನ್ನು ಯಾವುದೇ ಹಿಂಜರಿಕೆಯಿಲ್ಲದೆ ಸರಿಪಡಿಸಬೇಕು. ಏಕೆಂದರೆ ಶ್ರೀ ನಾರಾಯಣ ಗುರು ದೇವಾಲಯದ ಸಂಸ್ಕೃತಿಯನ್ನು ಆಧುನೀಕರಿಸಿದ ವ್ಯಕ್ತಿ ಎಂದು ಅವರು ಹೇಳಿದರು.
ಕಾರ್ಯಕ್ರಮದ ವೇಳೆ ಉಪಸ್ಥಿತರಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ಪದ್ಧತಿಯನ್ನು ಕೊನೆಗಾಣಿಸುವಂತೆ ಹೇಳಿದ್ ಸಚ್ಚಿದಾನಂದ ಕರೆಯನ್ನು ಬೆಂಬಲಿಸಿದರು.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications