Supreme Court: ಜೈಲಿನಲ್ಲೂ ಜಾತಿ ತಾರತಮ್ಯ: ಸುಪ್ರೀಂ ಕೋರ್ಟ್ನಿಂದ ಮತ್ವದ ಆದೇಶ
ಭಾರತದಲ್ಲಿ ಜಾತಿತಾರತಮ್ಯ ಎಲ್ಲಾ ರಂಗದಲ್ಲೂ ಹಾಗೂ ಎಲ್ಲಾ ರಾಜ್ಯಗಳಲ್ಲೂ ಇಂದಿಗೂ ಮುಂದುವರಿದಿದೆ. ಭಾರತ ಅಭಿವೃದ್ಧಿಯಾಗುತ್ತಿದ್ದಂತೆಯೇ ಜಾತಿತಾರತಮ್ಯ ಇಳಿಕೆಯಾಗುತ್ತದೆ ಎಂದೇ ಭಾವಿಸಲಾಗಿತ್ತಾದರೂ, ಅದು ಈಡೇರಿಲ್ಲ. ಇದೀಗ ಆಘಾತಕಾರ ಸುದ್ದಿಯೊಂದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಸುಪ್ರೀಂಕೋರ್ಟ್ ಸಹ ಕಳವಳ ವ್ಯಕ್ತಪಡಿಸಿದೆ. ಅಲ್ಲದೇ ಜಾತಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ತಾರತಮ್ಯವನ್ನೂ ಸಹಿಸಲು ಸಾಧ್ಯವಿಲ್ಲ ಎಂದು ಗುಡುಗಿದೆ.
ದೇಶದ ಕೆಲವು ರಾಜ್ಯದ ಜೈಲುಗಳಲ್ಲೂ ಜಾತಿ ತಾರತಮ್ಯ ಬಗ್ಗೆ (ಜೈಲು ಕೈಪಿಡಿ ಅಥವಾ ಗೈಡ್ಲೈನ್ಸ್ ಬಗ್ಗೆ) ಇತ್ತೀಚಿನ ದಿನಗಳಲ್ಲಿ ದೂರು ಕೇಳಿ ಬಂದಿದೆ. ಇದೀಗ ಸುಪ್ರೀಂ ಕೋರ್ಟ್ ಈ ಬಗ್ಗೆ ಎಚ್ಚರಿಕೆ ನೀಡಿದೆ. ಜಾತಿ ಆಧಾರಿತ ತಾರತಮ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಜೈಲು ಕೈಪಿಡಿಯಲ್ಲಿ (ಗೈಡ್ಲೈನ್ಸ್)ಇರುವ ನಿಬಂಧನೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಿದೆ. ಜೈಲಿನಲ್ಲಿ ಇರುವವರು ಸಹ ಗೌರವದ ಬದುಕನ್ನು ಕಟ್ಟಿಕೊಳ್ಳಲು ಅರ್ಹರಾಗಿದ್ದಾರೆ. ಈ ರೀತಿಯ ತಾರತಮ್ಯವನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಭಾರತದ ಯಾವುದೇ ರಾಜ್ಯದ ಯಾವುದೇ ಜೈಲಿನಲ್ಲೂ ಈ ರೀತಿ ತಾರತಮ್ಯ ಇರಬಾರದು. ಜೈಲು ಗೈಡ್ಲೈನ್ಸ್ನಲ್ಲಿ ಇರುವ ಲೋಪದೋಷಗಳನ್ನು ಕೂಡಲೇ ಸರಿಪಡಿಸಿ ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ರಾಜ್ಯಗಳಿಗೆ ಎಚ್ಚರಿಕೆ: ಜೈಲುಗಳಲ್ಲಿ ಖೈದಿಗಳನ್ನು ಗೌರವಯುತವಾಗಿ ನಡೆಸಿಕೊಳ್ಳಲಬೇಕು. ಜಾತಿಯನ್ನು ಆಧಾರವಾಗಿ ಇರಿಸಿಕೊಂಡು ಯಾವುದೇ ರೀತಿಯ ತಾರತಮ್ಯವನ್ನೂ ಮಾಡಬಾರದು. ಈ ರೀತಿ ಮಾಡಿದರೆ ಅಥವಾ ಖೈದಿಗಳನ್ನು ಅಮಾನವೀಯವಾಗಿ ನಡೆಸಿಕೊಳ್ಳುವುದು ಬೆಳಕಿಗೆ ಬಂದರೆ ಸಂಬಂಧಪಟ್ಟ ರಾಜ್ಯವನ್ನು ಹೊಣೆಗಾರರನ್ನಾಗಿ ಮಾಡುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಈ ಮೂಲಕ ದೇಶದ ಯಾವುದೇ ರಾಜ್ಯದ, ಯಾವುದೇ ಜೈಲಿನಲ್ಲೂ ಜಾತಿ ತಾರತಮ್ಯ ಇರಬಾರದು ಎಂದು ಹೇಳಲಾಗಿದೆ.
ಏನಿದು ಜೈಲಿನಲ್ಲೂ ಜಾತಿ ತಾರತಮ್ಯ
ಭಾರತದ ಕೆಲವು ಜೈಲುಗಳಲ್ಲೂ ಜಾತಿತಾರತಮ್ಯದ ಬಗ್ಗೆ ಆರೋಪ ಕೇಳಿ ಬಂದಿದೆ. ಜೈಲು ಗೈಡ್ಲೈನ್ಸ್ ಇದಕ್ಕೆ ಪ್ರೋತ್ಸಾಹ ನೀಡುವಂತೆ ಇದೆ ಎಂದು ಹೇಳಲಾಗಿದೆ. 2016ರಲ್ಲಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದ ಜೈಲಿನ ಕೈಪಿಡಿಯಲ್ಲಿ ಕೆಲವು ಲೋಪಗಳಿವೆ ಎಂದು ಹೇಳಲಾಗಿದೆ. ಜಾತಿಯ ಆಧಾರದ ಮೇಲೆ ಕೈದಿಗಳನ್ನು ಬೇರ್ಪಡಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸೇರಿದಂತೆ ಕೆಲವು ನಿರ್ದಿಷ್ಟ ಸಮುದಾಯದವರ ವಿರುದ್ಧವಾಗಿ ತಾರತಮ್ಯ ನಡೆದಿದೆ ಎಂದು ಹೇಳಲಾಗಿದೆ. ಅಲ್ಲದೇ ಶೌಚಾಲಯದ ಹೋಲ್ (ಗುಂಡಿ)ಹಾಗೂ ಒಳಚರಂಡಿ ಸೇರಿದಂತೆ ಯಾವುದೇ ರೀತಿಯ ಅಪಾಯಕಾರಿ ಕೆಲಸಕ್ಕೆ ಖೈದಿಗಳನ್ನು ಬಳಸಿಕೊಳ್ಳಬಾರದು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಮೂರು ತಿಂಗಳಲ್ಲಿ ಸರಿಪಡಿಸಿ: ಮುಂದಿನ ಮೂರು ತಿಂಗಳ ಒಳಗಾಗಿ ಈ ತಪ್ಪನ್ನು ಸರಿಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ಸಂಬಂಧ ಹತ್ತು ರಾಜ್ಯಗಳಿಗೆ ನಿರ್ದೇಶನ ನೀಡಲಾಗಿದ್ದು, ಜೈಲು ಗೈಡ್ಲೈನ್ಸ್ (ನಿಬಂಧನೆ) ಲೋಪವನ್ನು ಈ ಅವಧಿಯ ಒಳಗಾಗಿ ಸರಿಪಡಿಸಿಕೊಳ್ಳಬೇಕು. ಮೂರು ತಿಂಗಳ ನಂತರ ಸುಪ್ರೀಂ ಕೋರ್ಟ್ಗೆ ವರದಿಯನ್ನು ಸಲ್ಲಿಕೆ ಮಾಡಬೇಕು ಎಂದೂ ಹೇಳಲಾಗಿದೆ ಎಂದು ವರದಿಯಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications