ರಾಮ್ ರಹೀಮ್ ಲಗೇಜ್ ಎತ್ತಿದ್ದಕ್ಕೆ ಸೇವೆಯಿಂದ ವಜಾ!
ರಾಮ್ ರಹೀಂ ಲಗೇಜ್ ಹಿಡಿದೊಯ್ದಿದ್ದಕ್ಕೆ ಹರ್ಯಾಣದ ರಾಜ್ಯ ಸರ್ಕಾರದ ಅಟಾರ್ನಿ ಜನರಲ್ ಅವರನ್ನು ಸೇವೆಯಿಂದ ವಜಾಗೊಳಿಸಿದ್ದ ಹರ್ಯಾಣ ಸರ್ಕಾರ. ಸಿಬಿಐ ನ್ಯಾಯಾಲಯದಲ್ಲಿ ದೋಷಿ ಎಂದು ಆದೇಶಿಸಲ್ಪಟ್ಟ ನಂತರ ಬಾಬಾಗೆ ಸಹಾಯ ಮಾಡಿದ್ದರು.
ಚಂಡೀಗಢ, ಆಗಸ್ಟ್ 26: ಬಾಬಾ ರಾಮ್ ರಹೀಮ್ ಅವರ ಲಗೇಜ್ ಹಿಡಿದುಕೊಂಡಿದ್ದರೆಂಬ ಕಾರಣಕ್ಕೆ ಹರ್ಯಾಣ ಸರ್ಕಾರ ತನ್ನ ರಾಜ್ಯದ ಡೆಪ್ಯೂಟಿ ಅಡ್ವೊಕೇಟ್ ಜನರಲ್ ಆಗಿದ್ದ ಗುರುದಾಸ್ ಸಿಂಗ್ ಸಲ್ವಾರಾ ಎಂಬುವರನ್ನು ಸೇವೆಯಿಂದ ವಜಾಗೊಳಿಸಿದೆ.
ಆಗಸ್ಟ್ 25ರಂದು ರಾಮ್ ರಹೀಮ್ ವಿರುದ್ಧದ ಅತ್ಯಾಚಾರ ಪ್ರಕರಣದ ವಿಚಾರಣೆಯ ಅಂತಿಮ ತೀರ್ಪು ನೀಡಿದ್ದ ಸಿಬಿಐ ನ್ಯಾಯಾಲಯ, ಅವರ ಬಂಧನಕ್ಕೆ ಆದೇಶಿಸಿತ್ತು.

ಈ ತೀರ್ಪು ಹೊರಬಿದ್ದ ನಂತರ, ರಾಮ್ ರಹೀಮ್ ಬಾಬಾ ಅವರನ್ನು ಬಂಧಿಸಲಾಗಿತ್ತು. ಆಗ, ಬಾಬಾ ಅವರು ನ್ಯಾಯಾಲಯದಿಂದ ಹೊರಬರುವ ವೇಳೆ ಅವರಿಗೆ ಸಹಾಯ ಮಾಡಲು ಬಂದ ವಕೀಲ ಗುರುದಾಸ್ ಸಿಂಗ್ ಸಲ್ವಾರಾ, ಬಾಬಾ ಅವರ ಲಗೇಜ್ ಗಳಲ್ಲಿ ಒಂದಾದ ಕಿತ್ತಳೆ ಬಣ್ಣದ ಸೂಟ್ ಕೇಸ್ ಅನ್ನು ಎತ್ತಿಕೊಂಡು ಅವರ ವಾಹನ ಬಳಿಯವರೆಗೆ ಬಂದು ಅದನ್ನು ಅವರ ಸಹಾಯಕರಿಗೆ ನೀಡಿದ್ದರು.
ಇದು ಕೋರ್ಟ್ ನಲ್ಲಿರುವ ಸಿಸಿಟಿವಿ ಕ್ಯಾಮೆರಾಗಳಲ್ಲಿ ಮಾಧ್ಯಮಗಳ ಕ್ಯಾಮೆರಾಗಳಲ್ಲಿ ದಾಖಲಾಗಿತ್ತು. ಇದರ ವಿಡಿಯೋ ಫೂಟೇಜ್ ಗಳನ್ನು ನೋಡಿದ ಸರ್ಕಾರ, ಸಲ್ವಾರಾ ಅವರನ್ನು ಸೇವೆಯಿಂದ ವಜಾಗೊಳಿಸಿದೆ.
More From
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications