ಕಾವೇರಿ ವಿವಾದದ ವಿಚಾರಣೆ ಮಾರ್ಚ್ 21ಕ್ಕೆ ಮುಂದೂಡಿಕೆ
ಕಾವೇರಿ ನೀರು ಹಂಚಿಕೆ ನ್ಯಾಯಾಧೀಕರಣದ ತೀರ್ಪಿನ ವಿರುದ್ಧ ಕರ್ನಾಟಕ ಮತ್ತು ತಮಿಳುನಾಡು ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿ, ಮಾರ್ಚ್ 21ಕ್ಕೆ ಮುಂದೂಡಿದೆ.
ನವದೆಹಲಿ, ಫೆಬ್ರವರಿ 07: ಕಾವೇರಿ ನೀರು ಹಂಚಿಕೆ ನ್ಯಾಯಾಧೀಕರಣದ ತೀರ್ಪಿನ ವಿರುದ್ಧ ಕರ್ನಾಟಕ ಮತ್ತು ತಮಿಳುನಾಡು ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಮಾರ್ಚ್ 21ಕ್ಕೆ ತ್ರಿಸದಸ್ಯ ಪೀಠ ಮುಂದೂಡಿದೆ.
1892ರಲ್ಲಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಆಗಿದ್ದ ಒಪ್ಪಂದ ಸಾಧುವೇ? ಅಂದು ಬಳಸಿದ ಮಾನದಂಡ ಯಾವುದು? ಇತ್ತೀಚಿನ ಅಂಕಿ ಅಂಶಗಳ ಬಳಸಿ ಸಮೀಕ್ಷೆ ನಡೆಸುತ್ತಿಲ್ಲ ಏಕೆ? ಎಂಬ ಪ್ರಶ್ನೆಗಳನ್ನು ಕರ್ನಾಟಕ ಕೇಳಿದೆ. ಮಾರ್ಚ್ 21 ರಿಂದ ಏಪ್ರಿಲ್ 11ರವರೆಗೆ ಪ್ರತಿದಿನ ವಿಚಾರಣೆ ನಡೆಯಲಿದೆ.[ಟೈಮ್ ಲೈನ್ : ಸಂವಿಧಾನ ಬಿಕ್ಕಟ್ಟಿನ ಹಾದಿ ಹಿಡಿದ ಕಾವೇರಿ ವಿವಾದ]
ಫೆಬ್ರವರಿ 7 ರ ತನಕ ಪ್ರತಿನಿತ್ಯ 2 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿತ್ತು. ಇದರಿಂದ ಕರ್ನಾಟಕಕ್ಕೆ ನಿರಾಳತೆ ಸಿಕ್ಕಿದ್ದು, ಹೆಚ್ಚಿನ ಪ್ರಮಾಣದ ನೀರು ಹರಿಸುವ ಸಂಕಟದಿಂದ ಸದ್ಯಕ್ಕೆ ಬಚಾವಾಗಿತ್ತು.
ಅಲ್ಲಿ ತನಕ ಮಧ್ಯಂತರ ಆದೇಶ ಜಾರಿಯಲ್ಲಿರಲಿದ್ದು, ಪ್ರತಿನಿತ್ಯ ತಮಿಳುನಾಡಿಗೆ 2,000 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಸೂಚಿಸಲಾಗಿತ್ತು.

ಕಾವೇರಿ ನೀರಿನಲ್ಲಿ ಬಳಸಲು ಲಭ್ಯವಿರುವ 740 ಟಿಎಂಸಿ ನೀರಿನಲ್ಲಿ ಕರ್ನಾಟಕ 270 ಟಿಎಂಸಿ, ತಮಿಳುನಾಡು 419, ಕೇರಳ 30 ಮತ್ತು ಪಾಂಡಿಚೇರಿ 7 ಟಿಎಂಸಿ ನೀರಿಗೆ ಅರ್ಹ ಎಂದು ನ್ಯಾಯಾಧೀಕರಣ ತೀರ್ಪಲ್ಲಿ ಹೇಳಿತ್ತು.
2007ರ ಫೆಬ್ರವರಿ 5ರಂದು ಕಾವೇರಿ ನೀರು ನ್ಯಾಯಾಧೀಕರಣ ನೀಡಿದ್ದ ತೀರ್ಪನ್ನು ಕರ್ನಾಟಕ ಮತ್ತು ತಮಿಳುನಾಡುಗಳೆರಡೂ ಪ್ರಶ್ನಿಸಿದ್ದವು. ಆದರೆ, ಈ ತೀರ್ಪು ಸುಪ್ರೀಂಕೋರ್ಟ್ ನೀಡಿದ ತೀರ್ಪಿಗೆ ಸಮಾನ ಎಂದು ಕೇಂದ್ರ ಸರಕಾರ ತಗಾದೆ ಎತ್ತಿತ್ತು.
ನ್ಯಾಯಾಧೀಕರಣದ ತೀರ್ಪನ್ನು ಪ್ರಶ್ನಿಸಿರುವ ಕರ್ನಾಟಕ, ಇಷ್ಟು ನೀರು ತಮಿಳುನಾಡಿಗೆ ಬಿಟ್ಟರೆ ಕಾವೇರಿ ನೀರು ಸರಬರಾಜಾಗುವ ಕರ್ನಾಟಕದ 6 ನಗರಗಳಿಗೆ ಪೂರೈಸಲು ಸಾಧ್ಯವೇ ಇಲ್ಲ ಎಂದಿದೆ. ತಮಿಳುನಾಡು ಕೂಡ, ಕಾವೇರಿ ನೀರಿನ ಅಗತ್ಯವಿರುವ ಜಮೀನನ್ನು 29.7 ಲಕ್ಷ ಎಕರೆಯಿಂದ 24.70 ಲಕ್ಷ ಎಕರೆಗೆ ಇಳಿಸಲಾಗಿದೆ ಎಂದು ಕ್ಯಾತೆ ತೆಗೆದಿತ್ತು.(ಒನ್ಇಂಡಿಯಾ ಸುದ್ದಿ)
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications