ಸುಪ್ರೀಂಕೋರ್ಟ್ ಆದೇಶಕ್ಕೆ ಕರ್ನಾಟಕ ಬಗ್ಗಲೇಬೇಕು ಏಕೆ?
ಬೆಂಗಳೂರು, ಸೆ. 28: 'ಒಕ್ಕೂಟ ವ್ಯವಸ್ಥೆಗೆ ಬೆಲೆ ಕೊಡಿ, ಆದೇಶವನ್ನು ಪಾಲಿಸಿ, ಇಲ್ಲದಿದ್ದರೆ ಮುಂದಿನ ಪರಿಣಾಮ ಎದುರಿಸಲು ಸಿದ್ಧರಾಗಿ' ಎಂದು ಸುಪ್ರೀಂಕೋರ್ಟಿನ ದ್ವಿಸದಸ್ಯ ಪೀಠದಿಂದ ಕರ್ನಾಟಕಕ್ಕೆ ಎಚ್ಚರಿಕೆ ಸಂದೇಶ ಬಂದಿದೆ. ಪರಿಸ್ಥಿತಿ ಹೀಗಿರುವಾಗ, ಸುಪ್ರೀಂ ಆದೇಶಕ್ಕೆ ತಲೆಬಾಗದೇ ಕರ್ನಾಟಕ ಸರ್ಕಾರಕ್ಕೆ ಬೇರೆ ವಿಧಿಯಿಲ್ಲ ಎಂಬ ಸುದ್ದಿ ಬಂದಿದೆ.
ತಮಿಳುನಾಡಿಗೆ 3 ದಿನಗಳಲ್ಲಿ 18 ಕ್ಯೂಸೆಕ್ಸ್ ಕಾವೇರು ನೀರು ಹರಿಸದೆ ಕಾದು ನೋಡುವ ತಂತ್ರ ಅನುಸರಿಸಲು ಮತ್ತೊಮ್ಮೆ ಕರ್ನಾಟಕ ಮುಂದಾಗಿದೆ. ಅಂದರೆ ಎರಡನೇ ಬಾರಿಗೆ ಸುಪ್ರೀಂ ಆದೇಶವನ್ನು ಮೀರಿ ಕೋರ್ಟಿನಲ್ಲಿ ವಿಚಾರಣೆಗೆ ಕರ್ನಾಟಕ ಹಾಜರಾಗಬೇಕಿದೆ.[ನಿರ್ವಹಣಾ ಮಂಡಳಿ ರಚನೆ, ಸುಪ್ರೀಂ ಪೀಠಗಳಲ್ಲೇ ದ್ವಂದ್ವ!]

ಕರ್ನಾಟಕ ಹಾಗೂ ತಮಿಳುನಾಡು ನಡುವೆ ಸಂಧಾನ ಸಭೆ ಕರೆಯುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ. ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾ ಭಾರತಿ ಅವರು ಗುರುವಾರ ಬೆಳಗ್ಗೆ ಸಭೆ ನಡೆಸುತ್ತಿದ್ದಾರೆ. ಆದರೆ, ಇದು ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲು ಮಾತ್ರ ಎಂಬುದು ಗಮನಾರ್ಹ.
ನೀರು ಹರಿಸದೆ ಶುಕ್ರವಾರದಂದು ಸುಪ್ರೀಂಕೋರ್ಟಿನಲ್ಲಿ ವಿಚಾರಣೆ ಎದುರಿಸಲು ಸಾಧ್ಯವೇ ಇಲ್ಲದ್ದಂಥ ಪರಿಸ್ಥಿತಿ ಕರ್ನಾಟಕಕ್ಕೆ ಒದಗಿದೆ.[ನೀರು ರಕ್ಷಿಸಿ, ಇಲ್ಲಾ ಕಠಿಣ ಬೇಸಿಗೆ ಎದುರಿಸಿ, ಖಡಕ್ ಎಚ್ಚರಿಕೆ!]
ಕೇರಳ ಸರ್ಕಾರದ ಕಥೆ: ಮುಲ್ಲಪೆರಿಯಾರ್ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಬಗ್ಗೆ ತಮಿಳುನಾಡು ಹಾಗೂ ಕೇರಳ ರಾಜ್ಯಗಳ ನಡುವೆ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ತೀರ್ಪು ತಮಿಳುನಾಡು ಪರ ಬಂದಿತ್ತು. ಆದರೆ, ಕೇರಳ ಸರ್ಕಾರ ಸುಪ್ರೀಂ ನ್ಯಾಯಪೀಠದ ವಿರುದ್ಧ ನಿಲ್ಲಲು ನಿರ್ಧರಿಸಿತು.[ಕಾವೇರಿ ನೀರು ಬಿಡುವುದು ಬಿಡದಿರುವುದು ದೈವೇಚ್ಛೆ ಮೈಲಾರ್ಡ್!]
ಆದರೆ, ಯಾವುದೇ ಕಾರಣಕ್ಕೂ ಸುಪ್ರೀಂಕೋರ್ಟ್(ನ್ಯಾಯಾಂಗ) ನೀಡಿದ ಆದೇಶವನ್ನು ಧಿಕ್ಕರಿಸಿ ಅಥವಾ ಬದಿಗೊತ್ತಿ ನಿರ್ಣಯ ತೆಗೆದುಕೊಳ್ಳುವ ಶಾಸಕಾಂಗಕ್ಕೆ ಇಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿ ಮೇ 2014ರಂದು ಆದೇಶ ಹೊರಡಿಸಿತು. ಅಣೆಕಟ್ಟಿನ ಎತ್ತರ 136 ಅಡಿಗಳಿಂದ 142 ಅಡಿಗಳಿಗೆ ಎತ್ತರಿಸಲು ಸುಪ್ರೀಂ ಸೂಚಿಸಿತು. ಆದರೆ, ಕೇರಳ ಸರ್ಕಾರ ಇದನ್ನು ವಿರೋಧಿಸಿತ್ತು.[ಟೈಮ್ ಲೈನ್ : ಸಂವಿಧಾನ ಬಿಕ್ಕಟ್ಟಿನ ಹಾದಿ ಹಿಡಿದ ಕಾವೇರಿ ವಿವಾದ]
ಅಂತಾರಾಜ್ಯ ಜಲ ವಿವಾದ: ಅಂತಾರಾಜ್ಯ ಜಲ ವಿವಾದಗಳಲ್ಲಿ ಸುಪ್ರೀಂಕೋರ್ಟ್ ಪಾತ್ರವೇನು? ಎಂಬ ಪ್ರಶ್ನೆ ಏಳುತ್ತದೆ. ಸಂವಿಧಾನದ ಪ್ರಕಾರ ಸಾಂವಿಧಾನಿಕ ಬಿಕ್ಕಟ್ಟು ಉದ್ಭವಿಸಿದರೆ, ಸ್ವಯಂಪ್ರೇರಿತವಾಗಿ ಸುಪ್ರೀಂಕೋರ್ಟ್ ಇಂಥ ವ್ಯಾಜ್ಯಗಳನ್ನು ಪರಿಹರಿಸಲು ಮುಂದಾಗಬಹುದು.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications