ಸೊಹ್ರಾಬುದ್ದೀನ್ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಸೋದರನ ಹೇಳಿಕೆ
ಅಹಮದಾಬಾದ್, ಸೆಪ್ಟೆಂಬರ್ 18: ಸೊಹ್ರಾಬುದ್ದೀನ್ ಶೇಕ್ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಶೇಕ್ ಅವರ ಕಿರಿಯ ಸೋದರ ಈ ಬಗ್ಗೆ ನಯಾಮುದ್ದೀನ್ ಅವರು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ನೀಡಿರುವ ಹೇಳಿಕೆ ಎಲ್ಲರ ಹುಬ್ಬೇರಿಸಿದೆ.
'ಸಿಬಿಐ ಅಧಿಕಾರಿಯೊಬ್ಬರು 2010ರಲ್ಲಿ ದಾಖಲಿಸಿಕೊಂಡಿದ್ದ ನನ್ನ ಹೇಳಿಕೆಯಲ್ಲಿ ಗುಜರಾತ್ ಪೊಲೀಸ್ ಅಧಿಕಾರಿ ಅಭಯ್ ಚೂಡಸಮ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಹೆಸರುಗಳನ್ನು ಸಿಬಿಐ ತಾನಾಗಿಯೇ ಸೇರಿಸಿತ್ತು' ಎಂದು ನಯಾಮುದ್ದೀನ್ ಶೇಕ್ ಅವರು ನ್ಯಾಯಾಲಯದ ಮುಂದೆ ಹೇಳಿದ್ದಾರೆ.
ನವೆಂಬರ್ 29, 2017ರಂದು ಪ್ರಾಸಿಕ್ಯೂಶನ್ ಪರ ಸಾಕ್ಷಿಯಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕಿದ್ದ ನಯಾಮುದ್ದೀನ್ ಹಲವಾರು ಸಮನ್ಸ್ ಹಾಗೂ ಜಾಮೀನುರಹಿತ ವಾರಂಟ್ ಗಳ ತರುವಾಯ ಅಂತಿಮವಾಗಿ ಸೋಮವಾರದಂದು ಹಾಜರಾಗಿದ್ದಾರೆ. ಸಿಬಿಐ ಹಾಗೂ ಈ ಪ್ರಕರಣದಲ್ಲಿ ತಿರುಗಿಬಿದ್ದ ಸಾಕ್ಷಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಅವರು ಮೌಖಿಕವಾಗಿ ನ್ಯಾಯಾಲಯವನ್ನು ಕೋರಿದ್ದಾರೆ. ಸಿಬಿಐ ಈ ಕೇಸನ್ನು ಹಾಳುಗೆಡಹಿದೆ ಎಂದು ಹೇಳಿದರು.

ನವೆಂಬರ್ 2005ರ ಘಟನಾವಳಿಗಳ ಬಗ್ಗೆ ನ್ಯಾಯಾಲಯದ ಮುಂದೆ ನಯಾಮುದ್ದೀನ್ ಹೇಳಿಕೊಂಡ ನಂತರ ಆತನ ವಿಚಾರಣೆ ಸಂಪೂರ್ಣಗೊಂಡಿದೆಯೆಂದು ವಿಶೇಷ ಸಾರ್ವಜನಿಕ ಅಭಿಯೋಜಕ ಬಿ.ಪಿ. ರಾಜು ಘೋಷಿಸಿದರು.
ಆದರೆ ತನಗೆ ಇನ್ನೂ ಹೇಳಲಿದೆ ಎಂದ ನಯಾಮುದ್ದೀನ್ 'ನನಗೆ ಬಿಜೆಪಿಯಿಂದ ಬೆದರಿಕೆಯಿಲ್ಲ. ಅಜಂ ಖಾನ್ ಹೆಸರು ಕೇಳಿಯೇ ಇಲ್ಲ. ಸಿಬಿಐ ತನಿಖಾಧಿಕಾರಿ ದಾಗರ್ ಸಾಹೇಬ್ ನನ್ನ ಗ್ರಾಮಕ್ಕೆ ಆಟೋರಿಕ್ಷಾದಲ್ಲಿ ಬಂದು ಈ ಪ್ರಕರಣದ ಬಗ್ಗೆ ಕೇಳಿದರು. ಸೊಹ್ರಾಬುದ್ದೀನ್ ನ ಸಹವರ್ತಿ ಹಾಗೂ ಹಮೀದ್ ಲಾಲಾ ಕೊಲೆ ಪ್ರಕರಣದ ಸಹ ಆರೋಪಿ ಅಝಂ ನನ್ನನ್ನು ಭೇಟಿಯಾಗಿದ್ದ ಎಂದು ನಾನು ಆತನಿಗೆ ಹೇಳಿಲ್ಲ. ಆದರೆ ಸೋದರನ ಸಾವಿನ ಪ್ರಕರಣದದ ತನಿಖೆಗೆ ಸುಪ್ರೀಂ ಕೋರ್ಟಿನಲ್ಲಿ ದಾಖಲಾದ ಅಪೀಲನ್ನು ವಾಫಸ್ ಪಡೆಯಲು ಅಭಯ್ ಚುಡಸಮ ರೂ 50 ಲಕ್ಷ ಆಫರ್ ಮಾಡಿದ್ದರೆಂದು ಹೇಳಿದ್ದೆ'' ಎಂದಿದ್ದಾರೆ.
ತಾನು ತನ್ನ 2010ರ ಹೇಳಿಕೆಯಲ್ಲಿ ಹೇಳಿಲ್ಲದ ವಿಚಾರಗಳೂ ಸೇರಿಕೊಂಡಿವೆಯೆಂದು ಹಾಗೂ ತಾನು ಲಿಖಿತ ಅಫಿದಾವತ್ ನೀಡಿದ್ದಾಗಿಯೂ ನಯೀಮುದ್ದೀನ್ ಹೇಳಿದ್ದಾರೆ. ಪ್ರಕರಣದಲ್ಲಿ ದೋಷಮುಕ್ತಗೊಂಡಿದ್ದ ಚುಡಸಮ ನಯಾಮುದ್ದೀನ್ ನನ್ನು ಭೇಟಿಯಾಗಿ ಬೆದರಿಸಿದ್ದ ಎಂದು ಸಿಬಿಐ ಡಿವೈಎಸ್ಪಿ ಫೆಬ್ರವರಿ 19, 2010ರಂದು ದಾಖಲಿಸಿಕೊಂಡಿದ್ದ ನಯಾಮುದ್ದೀನ್ ಹೇಳಿಕೆ ತಿಳಿಸಿತ್ತು.
"ನಾನು ಆತನಿಗೆ (ಚುಡಸಮ) ನಾವು ದೂರು ವಾಪಸ್ ಪಡೆಯುವುದಿಲ್ಲ ಎಂದು ಹೇಳಿದಾಗ ಆತ ನನ್ನನ್ನು ಬೆದರಿಸಿ ಸೊಹ್ರಾಬುದ್ದೀನ್ ಗ ಆದ ಗತಿಯೂ ನನಗಾಗುವುದು ಎಂದ. ಅಮಿತ್ ಭಾಯಿ ತುಂಬಾ ಸಿಟ್ಟಾಗಿದ್ದಾರೆಂದು ನಿನಗೆ ತಿಳಿದಿಲ್ಲ. ನಾನು ಅಮಿತ್ ಭಾಯಿ ಜತೆ ಮಾತನಾಡುತ್ತೇನೆ, ಅವರು ನಿನ್ನನ್ನು ಮಧ್ಯ ಪ್ರದೇಶದಲ್ಲಿಯೇ ಮುಗಿಯಸಬಹುದು, ಅಮಿತ್ ಭಾಯಿಯವರ ಸರಕಾರ ಅಲ್ಲಿದೆ ಅವರನ್ನು ಈ ಅಪೀಲಿನ ಭಾಗವಾಗಿಸಿದ್ದಲ್ಲದೆ ನಿನ್ನನ್ನು ಕೊಲ್ಲಲಾಗುವುದು'' ಎಂದು ನಯಾಮುದ್ದೀನ್ 2010ರಲ್ಲಿ ಹೇಳಿಕೆ ನೀಡಿದ್ದ ಎಂದು ಸಿಬಿಐ ತಿಳಿಸಿತ್ತು. ಆದರೆ ತನ್ನ ಹೇಳಿಕೆಯ ಈ ಭಾಗವನ್ನು ಸಿಬಿಐ ತಾನಾಗಿಯೇ ಸೇರಿಸಿದ. ತಾನು ಹಾಗೆ ಹೇಳಿಲ್ಲ ಎಂದು ನಯಾಮುದ್ದೀನ್ ಸೋಮವಾರ ಹೇಳಿದ್ದಾನೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications