Breaking; ಸಿಬಿಐನಿಂದ ವಿಡಿಯೊಕಾನ್ ಸಿಇಒ ವೇಣುಗೋಪಾಲ್ ಧೂತ್ ಬಂಧನ
ನವದೆಹಲಿ, ಡಿಸೆಂಬರ್ 26; ವಿಡಿಯೊಕಾನ್ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ, ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಮತ್ತೊಬ್ಬರನ್ನು ಬಂಧಿಸಿದೆ. ಶುಕ್ರವಾರ ರಾತ್ರಿ ಚಂದಾ ಕೊಚ್ಚರ್ ಮತ್ತು ಆಕೆಯ ಪತಿ ದೀಪಕ್ ಕೊಚ್ಚರ್ ಬಂಧಿಸಲಾಗಿತ್ತು.
ಸೋಮವಾರ ಸಿಬಿಐ ವಿಡಿಯೊಕಾನ್ ಸಿಇಒ ವೇಣುಗೋಪಾಲ್ ಧೂತ್ ಬಂಧಿಸಿದೆ. ಶುಕ್ರವಾರ ರಾತ್ರಿ ಐಸಿಐಸಿಐ ಬ್ಯಾಂಕ್ನ ಮಾಜಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಚಂದಾ ಕೊಚ್ಚರ್, ಆಕೆಯ ಪತಿ ದೀಪಕ್ ಕೊಚ್ಚರ್ ಬಂಧಿಸಿತ್ತು.
ವಿಡಿಯೊಕಾನ್ ಸಂಸ್ಥೆಗೆ ಐಸಿಐಸಿಐ ಬ್ಯಾಂಕ್ನಿಂದ ಸಾಲ ಮಂಜೂರು ಮಾಡಿರುವ, ವಂಚನೆ ನಡೆದಿರುವ ಬಗ್ಗೆ 2019ರಲ್ಲಿ ಸಿಬಿಐ ಎಫ್ಐಆರ್ ದಾಖಲು ಮಾಡಿಕೊಂಡಿದೆ. ಈ ಪ್ರಕರಣದ ತನಿಖೆಯ ಭಾಗವಾಗಿವೇ ಮೂವರ ಬಂಧನವಾಗಿದೆ.

ಚಂದಾ ಕೊಚ್ಚರ್ ಐಸಿಐಸಿಐ ಬ್ಯಾಂಕ್ಗೆ ವಂಚನೆ ಮಾಡುವ ದೃಷ್ಟಿಯಿಂದ ಇತರರ ಜೊತೆ ಸೇರಿಕೊಂಡು ವಿಡಿಯೊಕಾನ್ ಸಂಸ್ಥೆಗೆ ಅಕ್ರಮವಾಗಿ ಸಾಲ ಮಂಜೂರಾತಿ ಮಾಡಿದ್ದಾರೆ. ಇದಕ್ಕೆ ಆಕೆಯ ಪತಿ ದೀಪಕ್ ಕೊಚ್ಚರ್ ಸಹ ಸಹಕಾರ ನೀಡಿದ್ದಾರೆ ಎಂಬುದು ಆರೋಪವಾಗಿದೆ.
ಇದೇ ಪ್ರಕರಣದಲ್ಲಿ ಈಗ ಐಸಿಐಸಿಐ ಬ್ಯಾಂಕ್ನ ಮಾಜಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಚಂದಾ ಕೊಚ್ಚರ್, ಆಕೆಯ ಪತಿ ದೀಪಕ್ ಕೊಚ್ಚರ್, ವೇಣುಗೋಪಾಲ್ ಧೂತ್ ಬಂಧಿಸಲಾಗಿದೆ.
ಐಸಿಐಸಿಐ ಬ್ಯಾಂಕ್ನಿಂದ 3 ಸಾವಿರ ಕೋಟಿ ರೂ. ಸಾಲ ಪಡೆದ ಬಳಿಕ ವೇಣುಗೋಪಾಲ್ ದೂತ್ ನ್ಯೂಪವರ್ ಎಂಬ ಕಂಪನಿಯಲ್ಲಿ ಹೂಡಿಕೆ ಮಾಡಿದ್ದಾರೆ. ಬಳಿಕ ಆ ಕಂಪನಿಯನ್ನು ಚಂದಾ ಕೊಚ್ಚರ್ ಪತಿ ದೀಪಕ್ ಕೊಚ್ಚರ್ ಖರೀದಿ ಮಾಡಿದ್ದಾರೆ ಎಂಬುದು ಆರೋಪ.
ವಿಡಿಯೊಕಾನ್ ಸಂಸ್ಥೆಗೆ ನೀಡಿದ 3 ಸಾವಿರ ಕೋಟಿ ರೂ.ಗಳ ಸಾಲದಲ್ಲಿ ಶೇ 80ರಷ್ಟು ಮರುಪಾವತಿಯಾಗಿಲ್ಲ. 2017ರಲ್ಲಿ ಈ ಸಾಲವನ್ನು ಸುಸ್ತಿಸಾಲ ಎಂದು ಘೋಷಣೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರುವ ಆರೋಪವೂ ಇದ್ದು, ಇಡಿ ಈ ಕುರಿತು ತನಿಖೆ ನಡೆಸುತ್ತಿದೆ.
ಇಡಿ ದೀಪಕ್ ಕೊಚ್ಚರ್ ಬಂಧಿಸಿ ವಿಚಾರಣೆ ನಡೆಸಿತ್ತು. ಬಳಿಕ ಬಾಂಬೆ ಹೈಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಚಂದಾ ಕೊಚ್ಚರ್ಗೆ ಸೇರಿದ ಸುಮಾರು 78 ಕೋಟಿ ರೂ. ಆಸ್ತಿಯನ್ನು ಸಹ ಇಡಿ ಜಪ್ತಿ ಮಾಡಿದೆ.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ












Click it and Unblock the Notifications