ಮಲ್ಯ ಕೇಸ್: ಲಂಡನ್ ಗೆ ಕಾಲಿಟ್ಟ ಭಾರತೀಯ ತನಿಖಾಧಿಕಾರಿಗಳು
ಭಾರತೀಯ ಬ್ಯಾಂಕುಗಳಿಗೆ ಸಾವಿರಾರು ಕೋಟಿ ರು. ಸಾಲ ಪಾವತಿಸದೇ ಲಂಡನ್ ನಲ್ಲಿ ಹೋಗಿ ನೆಲೆ ನಿಂತಿರುವ ಭಾರತೀಯ ಮದ್ಯೋದ್ಯಮಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ವಿಚಾರದಲ್ಲಿ ಭಾರತ ಮತ್ತೊಂದು ಹೆಜ್ಜೆ.
ನವದೆಹಲಿ, ಮೇ 2: ಲಂಡನ್ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿರುವ ಮಲ್ಯ ಅವರನ್ನು ಕರೆತರುವ ಉದ್ದೇಶದಿಂದ ಲಂಡನ್ ಪೊಲೀಸ್ ಇಲಾಖೆ ಹಾಗೂ ರಾಜತಾಂತ್ರಿಕ ಸಿಬ್ಬಂದಿಯೊಡನೆ ಮಾತುಕತೆ ನಡೆಸಲು ಕೇಂದ್ರದ ಜಾರಿ ನಿರ್ದೇಶನಾಲಯ (ಇಡಿ) ಹಾಗೂ ಕೇಂದ್ರೀಯ ತನಿಖಾ ದಳದ (ಸಿಬಿಐ) ಆಯ್ದ ಅಧಿಕಾರಿಗಳ ತಂಡವೊಂದು ಲಂಡನ್ ಗೆ ಹೋಗಿದೆ.
ಈ ಮೂಲಕ, ಭಾರತೀಯ ಬ್ಯಾಂಕುಗಳಿಗೆ ಸಾವಿರಾರು ಕೋಟಿ ರು. ಸಾಲ ಪಾವತಿಸದೇ ಲಂಡನ್ ನಲ್ಲಿ ಹೋಗಿ ನೆಲೆ ನಿಂತಿರುವ ಭಾರತೀಯ ಮದ್ಯೋದ್ಯಮಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ವಿಚಾರದಲ್ಲಿ ಭಾರತ ಮತ್ತೊಂದು ಹೆಜ್ಜೆಯಿಟ್ಟಂತಾಗಿದೆ.

ಅತ್ತ, ಇಂಗ್ಲೆಂಡ್ ಕಾನೂನು ಸಲಹೆಗಾರರು ಸೇರಿದಂತೆ ಅನೇಕ ಅಧಿಕಾರಿಗಳ ಜತೆಗೆ ಈ ತಂಡದ ಸದಸ್ಯರು ಮಾತುಕತೆ ನಡೆಸಲಿದ್ದಾರೆ. ಇದೇ ವಾರಾಂತ್ಯಕ್ಕೆ ಭಾರತಕ್ಕೆ ಆಗಮಿಸಲಿರುವ ಬ್ರಿಟನ್ ನ ಗೃಹ ಸಚಿವಾಲಯದ ಕಾರ್ಯದರ್ಶಿ ಆ್ಯಂಬರ್ ರುಡ್ ಹಾಗೂ ಭಾರತದ ಗೃಹ ಸಚಿವಾಲಯದ ಕಾರ್ಯದರ್ಶಿ ರಾಜೀವ್ ರಾಜೀವ್ ಮಹಾರಿಷಿ ಅವರ ನಡುವೆಯೂ ಇದು ಮತ್ತೆ ಚರ್ಚೆಗೆ ಬರಲಿದೆ ಎಂದು ಕೆಲ ಮೂಲಗಳು ತಿಳಿಸಿವೆ.
ಭಾರತೀಯ ಅಧಿಕಾರಿಗಳು ಲಂಡನ್ ಪ್ರವೇಶಿಸುವ ಹೊತ್ತಿಗಾಗಲೇ ಅಲರ್ಟ್ ಆಗಿರುವ ಮಲ್ಯ ಅವರ ಕಾನೂನು ಸಲಹೆಗಾರರು, ಮಲ್ಯ ಅವರ ಇಡೀ ಪ್ರಕರಣ ರಾಜಕೀಯ ಪಿತೂರಿ ಎಂದು ಬಿಂಬಿಸಲು ಸಿದ್ಧತೆ ನಡೆಸಿದೆ ಎಂದು ಅವರ ಆಪ್ತ ವಲಯ ಹೇಳಿದೆ.
ಈ ಹಿಂದೆ, ಭಾರತದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಮಲ್ಯ ಸಂಸದರಾಗಿದ್ದರು. ಹಾಗಾಗಿ, ಅವರ ವಿರುದ್ಧದ ರಾಜಕೀಯ ಫಲವಾಗಿ ಅವರನ್ನು ಸಾಲಗಾರರನ್ನಾಗಿ ಬಿಂಬಿಸಿ ಹಲವಾರು ಪ್ರಕರಣಗಳಲ್ಲಿ ಸಿಕ್ಕಿಹಾಕಿಸಲಾಗಿದೆ ಎಂದು ಮಲ್ಯ ಅವರ ಕಾನೂನು ಸಲಹೆಗಾರರ ತಂಡ ನಿರ್ಧರಿಸಿದ ಎಂದು ಹೇಳಲಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications