ಪಿಎನ್ಬಿ ಹಗರಣ: ನೀರವ್ ಸಹೋದರ ನೇಹಾಲ್ ಮೋದಿಯ ಜಾಡು ಹಿಡಿದ ಸಿಬಿಐ
ನವದೆಹಲಿ, ಮಾರ್ಚ್ 27: ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಪಲಾಯನಗೈದಿರುವ ನೀರವ್ ಮೋದಿಯನ್ನು ಲಂಡನ್ನಿಂದ ಭಾರತಕ್ಕೆ ಗಡಿಪಾರು ಮಾಡಿಸುವ ಪ್ರಯತ್ನದಲ್ಲಿರುವ ತನಿಖಾ ಸಂಸ್ಥೆಗಳು, ಈಗ ಇದೇ ಪ್ರಕರಣದ ಮತ್ತೊಬ್ಬ ಆರೋಪಿ ನೇಹಾಲ್ ಮೋದಿಯನ್ನು ಭಾರತಕ್ಕೆ ಗಡಿಪಾರು ಮಾಡಿಸುವ ಪ್ರಕ್ರಿಯೆ ಆರಂಭಿಸಿವೆ.
ವಜ್ರದ ವ್ಯಾಪಾರಿ ನೀರವ್ ಮೋದಿಯ ಸಹೋದರ ನೇಹಾಲ್ ಮೋದಿ, ಬೆಲ್ಜಿಯಂ ಪ್ರಜೆಯಾಗಿದ್ದು, ಈಗ ಅಮೆರಿಕದಲ್ಲಿ ನೆಲೆಸಿದ್ದಾನೆ ಎಂದು ಸಿಬಿಐ ಹೇಳಿದೆ. ಅಮೆರಿಕದ ನ್ಯಾಯಾಲಯವೊಂದರಲ್ಲಿ ನೇಹಾಲ್ ವಿರುದ್ಧ ವಂಚನೆ ಪ್ರಕರಣವೊಂದು ದಾಖಲಾದ ಬಳಿಕವೇ ಆತ ಅಮೆರಿಕದಲ್ಲಿ ಇರುವುದು ತನಿಖಾ ಸಂಸ್ಥೆಗೆ ಗೊತ್ತಾಗಿದೆ. ಈ ಮಾಹಿತಿ ದೊರಕುತ್ತಿದ್ದಂತೆಯೇ ನೇಹಾಲ್ನನ್ನು ಗಡಿಪಾರು ಮಾಡುವ ಪ್ರಕ್ರಿಯೆಗೆ ಸೂಕ್ತ ಮಾರ್ಗಗಳಡಿ ಕ್ರಮಗಳನ್ನು ಆರಂಭಿಸಲಾಗಿದೆ.
2019ರಲ್ಲಿ ನೇಹಾಲ್ ವಿರುದ್ಧ ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ ಹೊರಡಿಸಿತ್ತು. ನೇಹಾಲ್ನನ್ನು ಭಾರತಕ್ಕೆ ಗಡಿಪಾರು ಮಾಡುವ ಸಂಬಂಧ ಭಾರತ ಸರ್ಕಾರದಿಂದ ಅಮೆರಿಕಕ್ಕೆ ಮನವಿ ಸಲ್ಲಿಸಲು ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಸಿಬಿಐ ಶುಕ್ರವಾರ ಅಫಿಡವಿಟ್ ಸಲ್ಲಿಸಿದೆ.

ಪಿಎನ್ಬಿ ವಂಚನೆ ಹಗರಣದಲ್ಲಿ ನೇಹಾಲ್ ಮೋದಿಯನ್ನು ಆರೋಪಿ ಎಂದು ಸಿಬಿಐ ಮತ್ತು ಇಡಿ ಎರಡೂ ಪ್ರಕರಣಗಳನ್ನು ದಾಖಲಿಸಿಕೊಂಡಿವೆ. ತನಿಖಾ ಸಂಸ್ಥೆಗಳ ಪ್ರಕಾರ, ಪ್ರಮುಖ ಪುರಾವೆಯಾಗಬಹುದಾಗಿದ್ದ ವಿದ್ಯುನ್ಮಾನ ಉಪಕರಣಗಳನ್ನು ನೇಹಾಲ್ ಮೋದಿ ನಾಶಪಡಿಸಿದ್ದಾನೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications